ಚಾಮರಾಜನಗರ: ಬೆಂಗಳೂರು-ತಮಿಳುನಾಡಿನ ದಿಂಡಿಗಲ್ ಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ(209)ಹಾಳಾಗಿ ತಾಲ್ಲೂಕಿನಪುಣಜನೂರು-ಕೋಳಿಪಾಳ್ಯದ ಬಳಿ ಕೆರೆಯಂತೆ ನಿಂತಿರುವ ಮಳೆ ನೀರಿನಲ್ಲಿ ಮೀನು ಹಿಡಿದು ರಸ್ತೆ ಅವ್ಯವಸ್ಥೆ ವಿರುದ್ಧ ವಿಶಿಷ್ಟವಾಗಿ ಪ್ರತಿಭಟನೆ ನಡೆಸುವ ಮೂಲಕ ಸರ್ಕಾರದ ಗಮನ ಸೆಳೆದಿರುವ
ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಹೆದ್ದಾರಿ ಉದ್ದಕ್ಕೂ ನಿಂತಿರುವ ಮಳೆನೀರಿನಲ್ಲಿ ವ್ಯಕ್ತಿ ಯೊಬ್ಬ ಮೀನಿನ ಬಲೆ ಎಳೆಯುತ್ತಾ… ಮತ್ತೊಬ್ಬ ವ್ಯಕ್ತಿಯೊಂದಿಗೆ ಮಾತನಾಡುತ್ತ ವಿನೂತನವಾಗಿ ಪ್ರತಿಭಟನೆ ಮಾಡಿದ್ದಾರೆ.
ರಸ್ತೆಯ ಒಂದು ಪಾರ್ಶ್ವ ಮಳೆನೀರಿನಿಂದ ಕೂಡಿದ್ದು ಇನ್ನೊಂದು ಪಾರ್ಶ್ವದಲ್ಲಿ ವಾಹನಗಳು ಓಡಾಡುತ್ತಿವೆ. ಮೀನು ಹಿಡಿಯುವುದರೊಂದಿಗೆ ನೀರು ನಿಂತಿರುವ ಹಳ್ಳದತ್ತ ವಾಹನಗಳು ಇಳಿಯದಂತೆ ಈ ಪ್ರತಿಭಟನೆ ಮಾಡುತ್ತಿರುವುದಾಗಿ ಹೇಳಿ ಕೊಂಡಿದ್ದಾರೆ. ರಸ್ತೆ ಎಷ್ಟೊಂದು
ದೊಡ್ಡದಾಗಿ ಹಳ್ಳ ಬಿದ್ದಿದೆ ಎಂಬುದನ್ನು ಮೀನಿನ ಬಲೆಯ ಕಡ್ಡಿಯನ್ನು ಆಳಕ್ಕೆ ತೂರಿಸುವ ಮೂಲಕ ಪ್ರತಿಭಟನೆ ಸಂದರ್ಭದಲ್ಲಿ ಅನಾವರಣಗೊಳಿಸಲಾಗಿದೆ.
ಮೇನ್ ರೋಡಲ್ಲಿ ಮೀನ್ …ಹಿಡಿಯ ಮಟ್ಟಿಗೆ ನೀರು ನಿಂತಿದೆ ಎಂಬುದನ್ನು ಪ್ರತಿಭಟನೆಯೊಂದಿಗೆ ಸಾಕ್ಷೀಕರಿಸಿ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…