ಜಿಲ್ಲೆಗಳು

ಸತತ ಮಳೆಗೆ ಬೆಳೆಗೆ ಬಂತು ಜೀವಕಳೆ

ಹನೂರು : ಮಳೆಯಿಲ್ಲದೆ ಸೊರಗುತ್ತಿದ್ದ ಪೈರುಗಳಿಗೆ ಕಳೆದ 4 ದಿನಗಳಿಂದ ಬೀಳುತ್ತಿರುವ ಮಳೆಗೆ ಜೀವಕಳೆ ಬಂದಂತಾಗಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿದ್ದು ಕೃಷಿ ಕಾರ್ಯದಲ್ಲಿ ತಲ್ಲೀನರಾಗಿದ್ದಾರೆ.

ಹನೂರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಹುತೇಕ ಜಮೀನುಗಳು ಖುಷ್ಕಿ ಪ್ರದೇಶದಿಂದ ಕೂಡಿದ್ದು, ಇಲ್ಲಿನ ರೈತರು ಮುಖ್ಯವಾಗಿ ಮಳೆಯನ್ನೇ ಆಶ್ರಯಿಸಿ ಕೃಷಿ ಮಾಡುತ್ತಿದ್ದಾರೆ. ಈ ಭಾಗದಲ್ಲಿ ಮುಂಗಾರಿನಲ್ಲಿ ಹೆಚ್ಚಾಗಿ ರಾಗಿ ಹಾಗೂ ಮುಸುಕಿನ ಜೋಳವನ್ನು ಬೆಳೆಯುತ್ತಾರೆ. ಕಳೆದ 2 ವರ್ಷದ ಹಿಂದೆ ನಿಗಧಿತ ಅವಧಿಯಲ್ಲಿ ಸಮರ್ಪಕ ಮಳೆಯಾಗಿರಲಿಲ್ಲ. ಇದರಿಂದ ಕೆಲ ರೈತರು ಕೃಷಿಯಲ್ಲಿ ನಷ್ಟವನ್ನು ಅನುಭವಿಸಿದರೆ ಕಳೆದ ವರ್ಷ ಉತ್ತಮ ಮಳೆಯಾದ್ದರಿಂದ ರಾಗಿ ತೆನೆ ಕಟಾವಿನ ವೇಳೆ ರೈತರು ತುಂಬಾ ತೊಂದರೆಯನ್ನು ಎದುರಿಸಿದರು. ಆದರೆ ಈ ವರ್ಷ ಕಳೆದ 2 ತಿಂಗಳ ಹಿಂದೆ ಈ ಭಾಗದಲ್ಲಿ ಉತ್ತಮ ಮಳೆಯಾದ್ದರಿಂದ ರೈತರು ಜಮೀನನ್ನು ಉಳುಮೆ ಮಾಡಿ ರಾಗಿ, ಮುಸುಕಿನ ಜೋಳ ಹಾಗೂ ಕಡಲೆಕಾಯಿಯನ್ನು ಬಿತ್ತನೆ ಮಾಡಿದ್ದು, ಪೈರುಗಳು ಉತ್ತಮವಾಗಿ ಬಂದಿದ್ದವು.

ಆದರೆ ಕಳೆದ 15 ದಿನಗಳ ಕಾಲ ಸತತ ಮಳೆಯಿಲ್ಲದ ಪರಿಣಾಮ ಬಿಸಿಲಿನ ತಾಪಕ್ಕೆ ರಾಗಿ ಹಾಗೂ ಮುಸುಕಿನ ಜೋಳದ ಪೈರುಗಳು ಸೊರಗುತ್ತಿದ್ದವು. ಇತ್ತ ಕಡಲೆಕಾಯಿ ಫಸಲಿನಲ್ಲಿ ಬೀಜಗಳು ಬಲಿಷ್ಠಗೊಳ್ಳದೇ ಕಮರಿಸಿತ್ತು. ಇದರಿಂದ ರೈತರಲ್ಲಿ ಆತಂಕ ಮನೆ ಮಾಡಿದ್ದು, ಮಳೆ ಯಾವಾಗ ಬರುವುದೆಂದು ಕಾದು ಕುಳಿತ್ತಿದ್ದರು. ಇದೀಗ ಕಳೆದ 4 ದಿನಗಳಿಂದ ರಾತ್ರಿ ವೇಳೆ ಸಾಧಾರಣಾ ಮಳೆಯಾಗುತ್ತಿರುವುದರಿಂದ ಸೊರಗುತ್ತಿದ್ದ ಪೈರುಗಳು ಹಸಿರಿನಿಂದ ಕಂಗೊಳಿಸುತ್ತಿವೆ. ಇದರಿಂದ ರೈತರ ಮೊಗದಲ್ಲಿ ಕೊಂಚ ಮಂದಹಾಸ ಮೂಢಿದ್ದು, ಕಳೆ ತೆಗೆಸುವುದು, ರಸಗೊಬ್ಬರ ಹಾಕುವ ಕಾರ್ಯದಲ್ಲಿ ತೊಡಗಿದ್ದಾರೆ. ಆಗಾಗಿ ಹನೂರು ಭಾಗದಲ್ಲಿ ಕೃಷಿ ಚಟುವಟಿಕೆ ಚುರುಕುಗೊಂಡಿದೆ.

ಬಿತ್ತನೆ ವಿವರ: ಹನೂರು ಹೋಬಳಿ ವಾಪ್ತಿಯಲ್ಲಿ ಸುಮಾರು 9,690 ಹೆಕ್ಟೇರ್ ಪ್ರದೇಶ ಕೃಷಿ ಭೂಮಿ ಇದ್ದು, ಇದರಲ್ಲಿ 2,670 ಹೆಕ್ಟೇರ್‍ನಲ್ಲಿ ರಾಗಿ, 5,500 ಹೆಕ್ಟೇರ್‍ನಲ್ಲಿ ಮುಸುಕಿನ ಜೋಳ ಹಾಗೂ 65 ಹೆಕ್ಟೇರ್‍ನಲ್ಲಿ ಕಡಲೆಕಾಯಿಯನ್ನು ಬಿತ್ತನೆ ಮಾಡಲಾಗಿದೆ. ರಾಮಾಪುರ ಹೋಬಳಿ ವ್ಯಾಪ್ತಿಯಲ್ಲಿ 12,660 ಹೆಕ್ಟೇರ್ ಕೃಷಿ ಭೂಮಿ ಇದ್ದು, ಇದರಲ್ಲಿ 4,400 ಹೆಕ್ಟೇರ್‍ನಲ್ಲಿ ರಾಗಿ, 5,200 ಹೆಕ್ಟೇರ್‍ನಲ್ಲಿ ಮುಸುಕಿನ ಜೋಳ ಹಾಗೂ 72 ಹೆಕ್ಟೇರ್‍ನಲ್ಲಿ ಕಡಲೆಕಾಯಿಯನ್ನು ಬಿತ್ತನೆ ಮಾಡಲಾಗಿದೆ. ಇನ್ನು ಲೊಕ್ಕನಹಳ್ಳಿ ವ್ಯಾಪ್ತಿಯಲ್ಲಿ ಲೊಕ್ಕನಹಳ್ಳಿ ವ್ಯಾಪ್ತಿಯಲ್ಲಿ 10,615 ಹೆಕ್ಟೇರ್ ಪ್ರದೇಶವಿದ್ದು, ಇದರಲ್ಲಿ 2,400 ಹೆಕ್ಟೇರ್‍ನಲ್ಲಿ ರಾಗಿ, 5,800 ಹೆಕ್ಟೇರ್‍ನಲ್ಲಿ ಮುಸುಕಿನ ಜೋಳ ಹಾಗೂ 32 ಹೆಕ್ಟೇರ್‍ನಲ್ಲಿ ನೆಲೆಗಡಲೆಯನ್ನು ಬಿತ್ತನೆ ಮಾಡಲಾಗಿದೆ.

ಮಹಿಳಾ ಕೃಷಿ ಕೆಲಸಗಾರರಿಗೆ ಡಿಮ್ಯಾಂಡ್ : ಈ ಭಾಗದಲ್ಲಿ ಹೆಚ್ಚಿನ ರೈತರು ರಾಗಿಯನ್ನು ಬಿತ್ತನೆ ಮಾಡಿದ್ದು, ಬಿಸಿಲಿನ ತಾಪಕ್ಕೆ ಸೊರಗುತ್ತಿದ್ದ ಪೈರುಗಳು ಸಾಧಾರಣಾ ಮಳೆಯಿಂದಾಗಿ ಬೆಳವಣಿಗೆಯಲ್ಲಿ ಉತ್ತಮತೆಯನ್ನು ಪಡೆದುಕೊಳ್ಳುತ್ತಿದೆ. ಆಗಾಗಿ ಫಸಲು ಚೆನ್ನಾಗಿ ಮೂಢಿಬರುವ ಉದ್ಧೇಶದಿಂದ ರೈತರು ಸಾವಿರಾರು ರೂ ಅನ್ನು ವ್ಯಯಿಸಿ ಕಳೆದ 2 ದಿನಗಳಿಂದ ಮಹಿಳಾ ಕೂಲಿ ಆಳುಗಳಿಂದ ಕಳೆಯನ್ನು ತೆಗೆಯಿಸುತ್ತಿದ್ದು, ಅಗತ್ಯ ಗೊಬ್ಬರವನ್ನು ಹಾಕಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಇದರಿಂದ ಕೂಲಿ ಆಳುಗಳಿಗೆ ಎಲ್ಲಿಲ್ಲದ ಬೇಡಿಕೆ ನಿರ್ಮಾಣವಾಗಿದ್ದು, ಸಾಮಾನ್ಯ ದಿನಗಳಲ್ಲಿ 150 ರೂ ಇದ್ದ ಕೂಲಿ ಹಣ ಇದೀಗ 220 ರೂಗೆ ಏರಿಕೆಯಾಗಿದೆ.

ಕಳೆದ 4ದಿನಗಳಿಂದ ಸತತ ಮಳ ಸಂತಸದ ವಿಚಾರ. ರೈತರು ತಮ್ಮ ಬೆಳೆಗಳಿಗೆ ಯೂರಿಯಾ ಜೊತೆ ಪೊಟ್ಯಾಶ್ ಹಾಗೂ ಇನ್ನಿತರ ರಾಸಾಯನಿಕ ಗೊಬ್ಬರಗಳನ್ನು ಸಹ ಸಿಂಪಡಣೆ ಮಾಡಬೇಕು ಇದರಿಂದ ರೋಗ ನಿರೋಧಕ ಶಕ್ತಿ ಹಾಗೂ ಇಳುವರಿಯೂ ಹೆಚ್ಚಾಗುತ್ತದೆ.

ರಘುವೀರ್ ಕೃಷಿ ಅಧಿಕಾರಿ

andolanait

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

7 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

15 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

15 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

15 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

18 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

18 hours ago