ಜಿಲ್ಲೆಗಳು

ರಕ್ಷಾ ಬಂಧನ ಮಾತೃಭೂಮಿ, ಪರಿಸರ, ಜಲವನ್ನು ಸಂರಕ್ಷಿಸುವ ಅಸ್ತ್ರವಾಗಬೇಕು : ಹೇಮಾ ನಂದೀಶ್

ಮೈಸೂರು : ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾ ಮೈಸೂರು ನಗರದ ವತಿಯಿಂದ” ರಕ್ಷಾಬಂಧನ” ಕಾರ್ಯಕ್ರಮವನ್ನು ಕುರುಬರಹಳ್ಳಿ ಪೋಲಿಸ್ ಕವಾಯತು ಮೈದಾನದಲ್ಲಿ ಪೋಲಿಸ್ ಸ್ನೇಹ ಯಾತ್ರ ಎಂಬ ಕಾರ್ಯಕ್ರಮ ಆಯೋಜಿಸಿದ ಹೆಚ್ಚಿನ ರಕ್ಷಣೆಯನ್ನು ಕೊಡುವ K S R P ತಂಡದೊಂದಿಗೆ ಸ್ನೇಹದ ಬಾಂಧವ್ಯ ಹಾಗೂ ಆತ್ಮಸ್ಥೈರ್ಯವನ್ನು ತುಂಬಲು ಬಿಜೆಪಿ ಮಹಿಳಾ ಕಾರ್ಯಕರ್ತರಿಂದ K S R P ರಕ್ಷಣಾ ಪಡೆ ಅವರಿಗೆ ರಕ್ಷೆ ಕಟ್ಟುವ ಮೂಲಕ “ರಕ್ಷಾಬಂಧನ ” ಆಚರಿಸಲಾಯಿತು.

ಪೋಲಿಸ್ ಸ್ನೇಹ ಯಾತ್ರ ಎಂಬ ಕಾರ್ಯಕ್ರಮವು ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ
ಮೈಸೂರಿನ ಎಲ್ಲಾ ಪೊಲೀಸ್ ಠಾಣೆಗೂ ಕ್ಷೇತ್ರವಾರು ಸ್ಥಳೀಯ ಪೊಲೀಸ್ ಠಾಣೆಗಳಿಗೆ ತೆರಳಿ ಆಚರಿಸಲಾಯಿತು. ಭಾರತ ಮಾತೆಗೆ ಪುಷ್ಪನಮನ ಸಲ್ಲಿಸಿ ಆನಂತರ K S R P ರಕ್ಷಣಾ ಪಡೆ ಅವರಿಗೆ ಹಣೆಗೆ ತಿಲಕವಿಟ್ಟು ,ರಕ್ಷೆ ಕಟ್ಟಿ ಸಿಹಿ ತಿನಿಸಿದರು ಅನಂತರ ದೇಶ ಸೇವೆಗಾಗಿ ತಮ್ಮ ಪ್ರಾಣದ ಹಂಗನ್ನು ತೊರೆದು ಹೋರಾಡಿದ ಪ್ರಮುಖ ಅಧಿಕಾರಿಗಳಿಗೆ
ಸನ್ಮಾನಿಸಲಾಯಿತು.

ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಹೇಮಾ ನಂದೀಶ್ ಮಾತನಾಡಿ
ಅಣ್ಣ ತಂಗಿಯರ ಹಬ್ಬ ಎಂದರೆ ಅದು ರಾಖಿ ಹಬ್ಬ. ರಾಖಿಯನ್ನು ಕಟ್ಟಿದ ಸಹೋದರಿಯರಿಗೆ ಅಣ್ಣಂದಿರು ಸದಾ ರಕ್ಷಣೆ ನೀಡುತ್ತಾ ಮಹಿಳೆಯರನ್ನು ಸದಾ ಗೌರವದಿಂದ ಕಾಣುವಂತೆ ಆಚರಿಸುವ ಹಬ್ಬವಾಗಿದೆ. ಭಾರತೀಯ ಪರಂಪರೆಯಲ್ಲಿ ಪ್ರತಿಯೊಂದು ಹಬ್ಬಗಳಿಗೂ ವಿಶೇಷ ಹಿನ್ನೆಲೆ ಹಾಗೂ ಅರ್ಥಪೂರ್ಣ ಬಾಂಧವ್ಯ ಇದ್ದೆ ಇರುತ್ತದೆ. ಇದೊಂದು ಸಹೋದರತೆಯ ಬಗ್ಗೆ ಸಂದೇಶ ಸಾರುವ ಹಬ್ಬ. ಆದ್ದರಿಂದ ಅಣ್ಣ ತಮ್ಮಂದಿರ ಸಮಾನವಾದ ಹಾಗೂ ಸದಾ ಸಾರ್ವಜನಿಕ ಸೇವೆಯಲ್ಲಿ ತೊಡಗಿರುವ k S R P,ಪೊಲೀಸ್, ಅಗ್ನಿಶಾಮಕ, ಹೋಮಗಾರ್ಡ್ಸ ಕಾರ್ಯದಲ್ಲಿರುವ ಸಹೋದರರಿಗೆ ಬಿಜೆಪಿ ಮಹಿಳಾ ಮೋರ್ಚಾ ರಾಖಿ ಕಟ್ಟಿ ಹಬದಬವನ್ನು ಆಚರಿಸಲಾಯಿತು ಎಂದು ಹೇಳಿದರು.

ಈ ಸಂದರ್ಭದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಹೇಮಾ ನಂದೀಶ್ ,ಪ್ರಧಾನ ಕಾರ್ಯದರ್ಶಿ ರೇಣುಕಾ ರಾಜ್ ,
ನಗರ ಪಾಲಿಕಾ ಸದಸ್ಯೆ ಲಕ್ಷ್ಮೀ ಕಿರಣ್ ಗೌಡ ,ಪ್ರಮೀಳಾ ಭರತ್ ,ಮಾಜಿ ನಗರ ಪಾಲಿಕಾ ಸದಸ್ಯೆ ಆಶಾ ಲಕ್ಷ್ಮಿನಾರಾಯಣ್ ,ಚಾಮರಾಜ ಕ್ಷೇತ್ರದ ಮಹಿಳಾ ಮೋರ್ಚಾ ಅಧ್ಯಕ್ಷೆ ತನುಜಾ ಮಹೇಶ ,ನರಸಿಂಹರಾಜ ಕ್ಷೇತ್ರದ ಮಹಿಳಾ ಮೋರ್ಚಾ ಅಧ್ಯಕ್ಷರಾದ ಮಮತಾ ಚಂದ್ರಶೇಖರ್ ,ಚಾಮುಂಡೇಶ್ವರಿ ಕ್ಷೇತ್ರದ ಗೀತಾ ಮಹೇಶ್ ,ಚಾಮುಂಡೇಶ್ವರಿ ನಗರ ಮಂಡಲ ಅಧ್ಯಕ್ಷೆ ಜ್ಯೋತಿ ರವಿಕುಮಾರ್ ,ಹಾಗೂ ಇನ್ನಿತರರು ಹಾಜರಿದ್ದರು

andolanait

Recent Posts

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನಿವೃತ್ತ ನ್ಯಾ.ಪಿ.ಎನ್.ದೇಸಾಯಿ ನೇಮಕ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…

8 hours ago

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ

ಬೆಂಗಳೂರು : ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…

10 hours ago

ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ : ಮಾಜಿ ಸಚಿವ ಎನ್.ಮಹೇಶ್‌

ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್‌.ಮಹೇಶ್‌ ಮಾರ್ಮಿಕವಾಗಿ…

10 hours ago

ಲೋಕಭವನದ ಗ್ಲಾಸ್‌ಹೌಸ್‌ನಲ್ಲೇ ಡಿಕೆಶಿ ಪ್ರಮಾಣವಚನ ಸ್ವೀಕಾರ ; ಸಾರ್ವಜನಿಕರಿಗಿಲ್ಲ ಪ್ರವೇಶ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…

11 hours ago

ಪೊನ್ನಾಚಿ | ಚಿರತೆ ದಾಳಿಗೆ ಕುರಿ ಬಲಿ

ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…

11 hours ago

ಮಣಿಪುರದಲ್ಲಿ ನಿಷೇಧಿತ ಸಂಘಟನೆಗಳಿಗೆ ಸೇರಿದ ಐವರು ಉಗ್ರರ ಬಂಧನ

ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…

13 hours ago