ಜಿಲ್ಲೆಗಳು

ಹನೂರು – ರಂಗಮಂದಿರ ನಿರ್ಮಾಣ ಕಾಮಗಾರಿಗೆ ಶೀಘ್ರವೇ ಅನುದಾನ : ಸಚಿವ ಸುನೀಲ್ ಕುಮಾರ್

ಹನೂರು: ತಾಲ್ಲೂಕು ಮಟ್ಟದಲ್ಲಿ ಸುಸಜ್ಜಿತವಾದ ರಂಗಮಂದಿರ ನಿರ್ಮಾಣ ಮಾಡಲು ದೊಡ್ಡ ಮೊತ್ತದ ಅನುದಾನ ಲಭ್ಯವಿಲ್ಲದೇ ಇರುವುದರಿಂದ ಸದರಿ ಕಾಮಗಾರಿಗೆ ಅನುದಾನ ಬಿಡುಗಡೆ ಮಾಡಿರುವುದಿಲ್ಲ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನೀಲ್ ಕುಮಾರ್ ತಿಳಿಸಿದರು.

ಬೆಂಗಳೂರು ವಿಧಾನಸಭಾ ಅಧಿವೇಶನದಲ್ಲಿ ಹನೂರು ವಿಧಾನಸಭಾ ಕ್ಷೇತ್ರದ ಶಾಸಕ ಆರ್ ನರೇಂದ್ರರವರ ಪ್ರಶ್ನೆಗೆ ಉತ್ತರಿಸಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವ್ಯಾಪ್ತಿಯಡಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಕ್ಕೆ ೨೦೨೨-೨೦೨೩ ನೇ ಸಾಲಿನಲ್ಲಿ ಹಂಚಿಕೆ ಆಗಿಲ್ಲ ಮುಂದಿನ ದಿನಗಳಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯವ್ಯಯದಲ್ಲಿ ಸಾಕಷ್ಟು ಅನುದಾನ ಒದಗಿಸಿ ಪರಿಶೀಲಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಹನೂರು ವಿಧಾನಸಭಾ ಕ್ಷೇತ್ರವು ಕರ್ನಾಟಕ ರಾಜ್ಯ ಗಡಿ ಭಾಗವಾಗಿದ್ದು ಗಡಿ ಅಭಿವೃದ್ದಿ ಪ್ರಾಧಿಕಾರದಿಂದ ಹನೂರು ತಾಲೂಕಿನ ವಿವಿಧ ಗ್ರಾಮಗಳಿಗೆ ಅನುದಾನ ಬಿಡುಗಡೆ ಮಾಡಲಾಗಿರುತ್ತದೆ. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದಿಂದ ವಿವಿಧ ಸಾಲುಗಳಲ್ಲಿ ಕೊಳ್ಳೇಗಾಲ ತಾಲ್ಲೂಕಿನ (ಹನೂರು ತಾಲ್ಲೂಕು) ಸೇರಿದಂತೆ ಕನ್ನಡ ಶಾಲೆಗೆ ಶಾಲಾ ಕಾಂಪೌಂಡ್ ನಿರ್ಮಾಣಕ್ಕೆ ಶಿಕ್ಷಕರ ವಸತಿಗೃಹ ನಿರ್ಮಾಣಕ್ಕೆ ಹಾಗೂ ಸಂಘ ಸಂಸ್ಥೆಗಳಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳಿಗಾಗಿಅನುದಾನ ಬಿಡುಗಡೆ ಮಾಡಲಾಗಿದೆ.

ಶ್ರೀಮಲೆ ಮಹದೇಶ್ವರ ಸ್ವಾಮಿ ಕೃಪಾ ಎಜುಕೇಷನ್ ಸೊಸೈಟಿ ರಿ ಸಂಚಾಲಿತ ಶ್ರೀ ಮಹದೇಶ್ವರ ಪ್ರೌಢಶಾಲೆ ಸೃಷ್ಟಿಸಿ ಶ್ರೀ ಸಾಲೂರು ಬೃಹನ್ಮಠದ ಶಾಲೆಗೆ ೨೦೨೦-೨೧ಸಾಲಿನಲ್ಲಿ ಶಾಲಾ ಆವರಣ ಗೋಡೆಗೆ ೧೦ಲಕ್ಷ ೨೦೨೧-೨೨ ನೇ ಸಾಲಿನಲ್ಲಿ ೧೧ ಲಕ್ಷ ಅನುದಾನ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

andolanait

Recent Posts

ಅಯೋಧ್ಯೆ ರಾಮಮಂದಿರಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ಲಕ್ನೋ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯಪಾಲರಾದ…

8 hours ago

ಮುಕ್ತಾಯ ಹಂತಕ್ಕೆ ತಲುಪಿದ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ

ಬೆಂಗಳೂರು: ಉದ್ಯಮಿ ಸಿಜೆ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ವಾರದಲ್ಲಿ ತನಿಖಾ ತಂಡ…

8 hours ago

ರಾಮಚಂದ್ರರಾವ್‌ ರಾಸಲೀಲೆ ಪ್ರಕರಣ: ವಿಡಿಯೋ ಅಸಲಿ ಎಂದ ತನಿಖಾ ತಂಡ

ಬೆಂಗಳೂರು: ಕಚೇರಿಯಲ್ಲಿ ಮಹಿಳೆಯರೊಂದಿಗೆ ರಾಮಚಂದ್ರರಾವ್‌ ಅನುಚಿತ ವರ್ತನೆ ಕುರಿತ ವೈರಲ್‌ ವಿಡಿಯೋಗಳು ಅಸಲಿ ಎಂದು ತನಿಖಾ ತಂಡ ದೃಢಪಡಿಸಿದೆ. ಸಮವಸ್ತ್ರದಲ್ಲಿಯೇ…

8 hours ago

ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು ಪರಿಹಾರಕ್ಕೆ ಯತ್ನ: ಮ್ಯಾಕ್ರನ್‌ ಜೊತೆ ಮೋದಿ ಮಾತುಕತೆ

ನವದೆಹಲಿ: ಮಧ್ಯ ಏಷ್ಯಾದಲ್ಲಿ ಬಿಕ್ಕಟ್ಟು ಪರಿಹಾರ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್‌ ಅಧ್ಯಕ್ಷ ಎಮ್ಯಾನುಯೆಲ್‌ ಮ್ಯಾಕ್ರನ್‌ ಜೊತೆ…

8 hours ago

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಹೋದರಿ ನಿಧನ

ಹಾಸನ: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಸಹೋದರಿ ಜವರಮ್ಮ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.…

11 hours ago

ರಾಜ್ಯದಲ್ಲಿ ಮತ್ತೆರಡು ದಿನ ಅಬ್ಬರಿಸಲಿದ್ದಾನೆ ವರುಣ

ಬೆಂಗಳೂರು: ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್‌, ಕಲಬುರ್ಗಿ,…

11 hours ago