ಹನೂರು: ತಾಲ್ಲೂಕು ಮಟ್ಟದಲ್ಲಿ ಸುಸಜ್ಜಿತವಾದ ರಂಗಮಂದಿರ ನಿರ್ಮಾಣ ಮಾಡಲು ದೊಡ್ಡ ಮೊತ್ತದ ಅನುದಾನ ಲಭ್ಯವಿಲ್ಲದೇ ಇರುವುದರಿಂದ ಸದರಿ ಕಾಮಗಾರಿಗೆ ಅನುದಾನ ಬಿಡುಗಡೆ ಮಾಡಿರುವುದಿಲ್ಲ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನೀಲ್ ಕುಮಾರ್ ತಿಳಿಸಿದರು.
ಬೆಂಗಳೂರು ವಿಧಾನಸಭಾ ಅಧಿವೇಶನದಲ್ಲಿ ಹನೂರು ವಿಧಾನಸಭಾ ಕ್ಷೇತ್ರದ ಶಾಸಕ ಆರ್ ನರೇಂದ್ರರವರ ಪ್ರಶ್ನೆಗೆ ಉತ್ತರಿಸಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವ್ಯಾಪ್ತಿಯಡಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಕ್ಕೆ ೨೦೨೨-೨೦೨೩ ನೇ ಸಾಲಿನಲ್ಲಿ ಹಂಚಿಕೆ ಆಗಿಲ್ಲ ಮುಂದಿನ ದಿನಗಳಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯವ್ಯಯದಲ್ಲಿ ಸಾಕಷ್ಟು ಅನುದಾನ ಒದಗಿಸಿ ಪರಿಶೀಲಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ಹನೂರು ವಿಧಾನಸಭಾ ಕ್ಷೇತ್ರವು ಕರ್ನಾಟಕ ರಾಜ್ಯ ಗಡಿ ಭಾಗವಾಗಿದ್ದು ಗಡಿ ಅಭಿವೃದ್ದಿ ಪ್ರಾಧಿಕಾರದಿಂದ ಹನೂರು ತಾಲೂಕಿನ ವಿವಿಧ ಗ್ರಾಮಗಳಿಗೆ ಅನುದಾನ ಬಿಡುಗಡೆ ಮಾಡಲಾಗಿರುತ್ತದೆ. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದಿಂದ ವಿವಿಧ ಸಾಲುಗಳಲ್ಲಿ ಕೊಳ್ಳೇಗಾಲ ತಾಲ್ಲೂಕಿನ (ಹನೂರು ತಾಲ್ಲೂಕು) ಸೇರಿದಂತೆ ಕನ್ನಡ ಶಾಲೆಗೆ ಶಾಲಾ ಕಾಂಪೌಂಡ್ ನಿರ್ಮಾಣಕ್ಕೆ ಶಿಕ್ಷಕರ ವಸತಿಗೃಹ ನಿರ್ಮಾಣಕ್ಕೆ ಹಾಗೂ ಸಂಘ ಸಂಸ್ಥೆಗಳಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳಿಗಾಗಿಅನುದಾನ ಬಿಡುಗಡೆ ಮಾಡಲಾಗಿದೆ.
ಶ್ರೀಮಲೆ ಮಹದೇಶ್ವರ ಸ್ವಾಮಿ ಕೃಪಾ ಎಜುಕೇಷನ್ ಸೊಸೈಟಿ ರಿ ಸಂಚಾಲಿತ ಶ್ರೀ ಮಹದೇಶ್ವರ ಪ್ರೌಢಶಾಲೆ ಸೃಷ್ಟಿಸಿ ಶ್ರೀ ಸಾಲೂರು ಬೃಹನ್ಮಠದ ಶಾಲೆಗೆ ೨೦೨೦-೨೧ಸಾಲಿನಲ್ಲಿ ಶಾಲಾ ಆವರಣ ಗೋಡೆಗೆ ೧೦ಲಕ್ಷ ೨೦೨೧-೨೨ ನೇ ಸಾಲಿನಲ್ಲಿ ೧೧ ಲಕ್ಷ ಅನುದಾನ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…