ಜಿಲ್ಲೆಗಳು

ರಂಗಾಯಣದ ನಿರ್ದೇಶಕರ ವಜಾಕ್ಕೆ ಆಗ್ರಹಿಸಿ ಪ್ರತಿಭಟನೆ

ಮೈಸೂರು: ಟಿಪ್ಪು ನಿಜ ಕನಸುಗಳ ಎಂಬ ಕೃತಿಯಲ್ಲಿ ಹಲವಾರು ಸುಳ್ಳುಗಳನ್ನು ಪ್ರಸ್ತಾಪಿಸಿರುವ ರಂಗಾಯಣದ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಅವರನ್ನು ಸರ್ಕಾರ ಈ ಕೂಡಲೆ ಅವರ ಸ್ಥಾನದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಗುರುವಾರ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಜಮಾವಣೆಗೊಂಡ ದಸಂಸ ಹಾಗೂ ಎಸ್‌ಡಿಪಿಐ ಕಾರ್ಯಕರ್ತರು ರಂಗಾಯಣದ ನಿರ್ದೇಶಕ ಅಡ್ಡಂಡ ಕರ್ಯಪ್ಪ ಅವರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ಟಿಪ್ಪು ಓರ್ವ ದೇಶಭಕ್ತ ಎಂಬುದರಲ್ಲಿ ಎರಡು ಮಾತಿಲ್ಲ. ಹಲವಾರು ಇತಿಹಾಸಕಾರರು ಇದನ್ನು ದಾಖಲಿಸಿದ್ದಾರೆ. ಆದರೂ ಕೂಡ ಬಿಜೆಪಿಯನ್ನು ಓಲೈಸಲು ಅಡ್ಡಂಡ ಕಾರ್ಯಪ್ಪ ಜನರಿಗೆ ತಪ್ಪು ಮಾಹಿತಿಯನ್ನು ನೀಡುತ್ತಿದ್ದಾರೆ ಎಂದು ಹೇಳಿದರು.
ರಂಗಾಯಣ ಒಂದು ಸ್ವಾಯುತ್ತ ಸಂಸ್ಥೆ. ಅಲ್ಲಿ ಸಾಮಾಜಿಕ ಸಹಬಾಳ್ವೆ, ಸಾಮರಸ್ಯ, ಶಾಂತಿಯನ್ನು ಕಾಪಾಡುವ ಕೆಲಸವಾಗಬೇಕು. ಅದು ರಂಗಾಯಣದ ಜವಾಬ್ದಾರಿ ಕೂಡ. ತನ್ನ ಜವಾಬ್ದಾರಿಯನ್ನು ಮರೆತು ಕೋಮುವಾದಿಯಂತೆ ವರ್ತಿಸುತ್ತಿರುವ ಅಡ್ಡಂಡ ಕಾರ್ಯಪ್ಪ ಅವರನ್ನು ಸರ್ಕಾರ ವಜಾ ಮಾಡಬೇಕು ಎಂದು ಆಗ್ರಹಿಸಿದರು.
ದಸಂಸದ ಚೋರನಹಳ್ಳಿ ಶಿವಣ್ಣ, ಪ್ರೊ.ನಂಜರಾಜೇಅರಸ್, ಅಮ್ಜದ್‌ಖಾನ್, ರಫತ್ ಖಾನ್, ಶಿವರಾಜ್, ಶಿವಮೂರ್ತಿ, ಭಾಗ್ಯಮ್ಮ, ಪ್ರಭು ಮುಂತಾದವರು ಪ್ರತಿಭಟನೆ ವೇಳೆ ಹಾಜರಿದ್ದರು.

andolanait

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಭಾಷೆ, ಬದುಕು ಕಲಿಸಿದ ನನ್ನಪ್ಪ

ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…

3 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಮತಗಳ ಪರಿಚಯ

ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…

3 hours ago

ರೆಟ್ರೋ ಫೋಟೋಗಳ ಹೊಸ ಅಲೆ

ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…

3 hours ago

ಮಹಾಪಂಚ್‌ ಕಾರ್ಟೂನ್‌

  ಮಹಾಪಂಚ್‌ ಕಾರ್ಟೂನ್‌ | ಸೆಪ್ಟಂಬರ್‌ 12 ಶನಿವಾರ

4 hours ago

ಒಳ್ಳೆಯತನಕ್ಕೂ ಕೆಟ್ಟತನಕ್ಕೂ ಜಾತಿ ಮಾನದಂಡ ಅಲ್ಲ

ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…

4 hours ago

ಓದುಗರ ಪತ್ರ | ‘ಅಕ್ಕ’ ಸಮ್ಮೇಳನದಲ್ಲೂ ‘ನಂದಿನಿ’ ಮಿಂಚಿಂಗ್!

ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…

4 hours ago