ಜಿಲ್ಲೆಗಳು

ʼಟಿಪ್ಪು ನಿಜ ಕನಸುಗಳುʼ ಕೃತಿ ಬಿಡುಗಡೆಯ ಜೊತೆಗೆ ನಾಟಕ ಪ್ರದರ್ಶಿಸಲು ಮುಂದಾಗಿರುವ ರಂಗಾಯಣ

ಮೈಸೂರು: ನವೆಂಬರ್ 13ರಂದು ‘ಟಿಪ್ಪು ನಿಜ ಕನಸುಗಳು’ ಎಂಬ ಕೃತಿ ಬಿಡುಗಡೆ ಮಾಡುತ್ತೇವೆ. ನವೆಂಬರ್​ 20ರಂದು ಟಿಪ್ಪು ನಿಜ ಕನಸುಗಳು ನಾಟಕ ಪ್ರದರ್ಶನ ಮಾಡಲಾಗುತ್ತೆ ಎಂದು ಮೈಸೂರು ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಮಾಹಿತಿ ನೀಡಿದ್ದಾರೆ.

ಟಿಪ್ಪುವಿನ ಸತ್ಯ ವಿಚಾರಗಳನ್ನು ತಿಳಿಸುವ ಉದ್ದೇಶದಿಂದ ಕೃತಿ ರಚನೆ ಮಾಡಲಾಗಿದ್ದು ಕೃತಿ ಬಿಡುಗಡೆ ಕಾರ್ಯಕ್ರಮದಲ್ಲಿ ಸಾಹಿತಿ ಎಸ್​.ಎಲ್.ಭೈರಪ್ಪ, ಸಂಸದ ಪ್ರತಾಪ್ ಸಿಂಹ, ರೋಹಿತ್​ ಚಕ್ರತೀರ್ಥ ಪಾಲ್ಗೊಳ್ಳುತ್ತಾರೆ. ನ.20ರಂದು 3 ಗಂಟೆ 20 ನಿಮಿಷದ ನಾಟಕ ಪ್ರದರ್ಶನ ಆಗಲಿದೆ ಎಂದು ಅಡ್ಡಂಡ ಕಾರ್ಯಪ್ಪ ತಿಳಿಸಿದ್ದಾರೆ.

‘ಟಿಪ್ಪು ನಿಜ ಕನಸುಗಳು’ ನಾಟಕವನ್ನು ಸುಮಾರು 30 ಕಲಾವಿದರ ತಂಡ ಒಟ್ಟು 100 ಪ್ರದರ್ಶನಗಳನ್ನು ಮಾಡುವ ಉದ್ದೇಶವನ್ನು ಹೊಂದಿದೆ. ಅಯೋಧ್ಯಾ ಪ್ರಕಾಶನದಿಂದ ಟಿಪ್ಪು ನಿಜ ಕನಸುಗಳು ಪುಸ್ತಕ ಪ್ರಕಟವಾಗಿದ್ದು ಎಸ್ ಎಲ್ ಭೈರಪ್ಪ ಮುನ್ನುಡಿ ಬರೆದಿದ್ದಾರೆ. ಹಾಗೂ ಚಕ್ರವರ್ತಿ ಸೂಲಿಬೆಲೆ ಹಿನ್ನುಡಿ ಬರೆದಿದ್ದಾರೆ.

ಡಿ.8ರಿಂದ 15ರವರೆಗೆ ಬಹುರೂಪಿ ರಾಷ್ಟ್ರೀಯ ರಂಗೋತ್ಸವ

ಮೈಸೂರಿನಲ್ಲಿ ಈ ಬಾರಿ ಡಿಸೆಂಬರ್ 08 ರಿಂದ ಡಿಸೆಂಬರ್ 15ರವರೆಗೆ ಬಹುರೂಪಿ ರಾಷ್ಟ್ರೀಯ ರಂಗೋತ್ಸವ ಕಾರ್ಯಕ್ರಮ ನಡೆಯಲಿದೆ. ಭಾರತೀಯತೆ ವಸ್ತು ವಿಷಯದೊಂದಿಗೆ ರಂಗೋತ್ಸವಕ್ಕೆ ಸಿದ್ಧತೆ ನಡೆದಿದೆ. ಭಾರತೀಯತೆಯ ಬಗ್ಗೆ ಸಾವಿರಾರು ವರ್ಷಗಳ ಇತಿಹಾಸವಿದೆ. ಮಹಾಪುರುಷರ ಪರಿಚಯ ಮಾಡಿಕೊಡುವುದು. ರಾಷ್ಟ್ರಪ್ರೇಮದ ಪಾಂಚಜನ್ಯ ಮೊಳಗಿಸುವುದು ಇದರ ಉದ್ದೇಶ ಎಂದು ಮೈಸೂರಿನಲ್ಲಿ ರಂಗಾಯಣ ನಿರ್ದೇಶಕ ಅಡ್ಡಂಡ ಸಿ ಕಾರ್ಯಪ್ಪ ಮಾಹಿತಿ ನೀಡಿದರು.

andolana

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

2 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

3 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

4 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

4 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

5 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

6 hours ago