ಜಿಲ್ಲೆಗಳು

ʼಟಿಪ್ಪು ನಿಜ ಕನಸುಗಳುʼ ಕೃತಿ ಬಿಡುಗಡೆಯ ಜೊತೆಗೆ ನಾಟಕ ಪ್ರದರ್ಶಿಸಲು ಮುಂದಾಗಿರುವ ರಂಗಾಯಣ

ಮೈಸೂರು: ನವೆಂಬರ್ 13ರಂದು ‘ಟಿಪ್ಪು ನಿಜ ಕನಸುಗಳು’ ಎಂಬ ಕೃತಿ ಬಿಡುಗಡೆ ಮಾಡುತ್ತೇವೆ. ನವೆಂಬರ್​ 20ರಂದು ಟಿಪ್ಪು ನಿಜ ಕನಸುಗಳು ನಾಟಕ ಪ್ರದರ್ಶನ ಮಾಡಲಾಗುತ್ತೆ ಎಂದು ಮೈಸೂರು ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಮಾಹಿತಿ ನೀಡಿದ್ದಾರೆ.

ಟಿಪ್ಪುವಿನ ಸತ್ಯ ವಿಚಾರಗಳನ್ನು ತಿಳಿಸುವ ಉದ್ದೇಶದಿಂದ ಕೃತಿ ರಚನೆ ಮಾಡಲಾಗಿದ್ದು ಕೃತಿ ಬಿಡುಗಡೆ ಕಾರ್ಯಕ್ರಮದಲ್ಲಿ ಸಾಹಿತಿ ಎಸ್​.ಎಲ್.ಭೈರಪ್ಪ, ಸಂಸದ ಪ್ರತಾಪ್ ಸಿಂಹ, ರೋಹಿತ್​ ಚಕ್ರತೀರ್ಥ ಪಾಲ್ಗೊಳ್ಳುತ್ತಾರೆ. ನ.20ರಂದು 3 ಗಂಟೆ 20 ನಿಮಿಷದ ನಾಟಕ ಪ್ರದರ್ಶನ ಆಗಲಿದೆ ಎಂದು ಅಡ್ಡಂಡ ಕಾರ್ಯಪ್ಪ ತಿಳಿಸಿದ್ದಾರೆ.

‘ಟಿಪ್ಪು ನಿಜ ಕನಸುಗಳು’ ನಾಟಕವನ್ನು ಸುಮಾರು 30 ಕಲಾವಿದರ ತಂಡ ಒಟ್ಟು 100 ಪ್ರದರ್ಶನಗಳನ್ನು ಮಾಡುವ ಉದ್ದೇಶವನ್ನು ಹೊಂದಿದೆ. ಅಯೋಧ್ಯಾ ಪ್ರಕಾಶನದಿಂದ ಟಿಪ್ಪು ನಿಜ ಕನಸುಗಳು ಪುಸ್ತಕ ಪ್ರಕಟವಾಗಿದ್ದು ಎಸ್ ಎಲ್ ಭೈರಪ್ಪ ಮುನ್ನುಡಿ ಬರೆದಿದ್ದಾರೆ. ಹಾಗೂ ಚಕ್ರವರ್ತಿ ಸೂಲಿಬೆಲೆ ಹಿನ್ನುಡಿ ಬರೆದಿದ್ದಾರೆ.

ಡಿ.8ರಿಂದ 15ರವರೆಗೆ ಬಹುರೂಪಿ ರಾಷ್ಟ್ರೀಯ ರಂಗೋತ್ಸವ

ಮೈಸೂರಿನಲ್ಲಿ ಈ ಬಾರಿ ಡಿಸೆಂಬರ್ 08 ರಿಂದ ಡಿಸೆಂಬರ್ 15ರವರೆಗೆ ಬಹುರೂಪಿ ರಾಷ್ಟ್ರೀಯ ರಂಗೋತ್ಸವ ಕಾರ್ಯಕ್ರಮ ನಡೆಯಲಿದೆ. ಭಾರತೀಯತೆ ವಸ್ತು ವಿಷಯದೊಂದಿಗೆ ರಂಗೋತ್ಸವಕ್ಕೆ ಸಿದ್ಧತೆ ನಡೆದಿದೆ. ಭಾರತೀಯತೆಯ ಬಗ್ಗೆ ಸಾವಿರಾರು ವರ್ಷಗಳ ಇತಿಹಾಸವಿದೆ. ಮಹಾಪುರುಷರ ಪರಿಚಯ ಮಾಡಿಕೊಡುವುದು. ರಾಷ್ಟ್ರಪ್ರೇಮದ ಪಾಂಚಜನ್ಯ ಮೊಳಗಿಸುವುದು ಇದರ ಉದ್ದೇಶ ಎಂದು ಮೈಸೂರಿನಲ್ಲಿ ರಂಗಾಯಣ ನಿರ್ದೇಶಕ ಅಡ್ಡಂಡ ಸಿ ಕಾರ್ಯಪ್ಪ ಮಾಹಿತಿ ನೀಡಿದರು.

andolana

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

12 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

12 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

12 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

12 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

12 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

15 hours ago