ಪ್ರವರ್ಗ-1ರ ಜಾತಿಗಳ ಒಕ್ಕೂಟದ ಮುಖಂಡರಿಂದ ಪ್ರತಿಭಟನೆ
ಚಾಮರಾಜನಗರ: ಮಳವಳ್ಳಿಯಲ್ಲಿ ಬಾಲಕಿ ಮೇಲೆ ಅತ್ಚಾಚಾರ ಎಸಗಿದ ಶಿಕ್ಷಕ ಕಾಂತರಾಜು ಅವರನ್ನು ಗಲ್ಲುಶಿಕ್ಷೆಗೆ ಗುರಿಪಡಿಸಬೇಕು ಎಂದು ಒತ್ತಾಯಿಸಿ ಪ್ರವರ್ಗ-೧ರ ಜಾತಿಗಳ ಒಕ್ಕೂಟ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದ ಮುಖಂಡರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದ ಆವರಣದಿಂದ ಮೆರವಣಿಗೆ ಹೊರಟ ಪ್ರತಿಭಟನಾಕಾರರು ಭುವನೇಶ್ವರಿ ವೃತ್ತ, ಜೋಡಿರಸ್ತೆ ಮೂಲಕ ಜಿಲ್ಲಾಡಳಿತ ಭವನಕ್ಕೆ ತೆರಳಿ ಕೆಲಕಾಲ ಪ್ರತಿಭಟನೆ ನಡೆಸಿದರು. ನಂತರ ಜಿಲ್ಲಾಧಿಕಾರಿ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಿದರು.
ಒಕ್ಕೂಟದ ಜಿಲ್ಲಾಧ್ಯಕ್ಷ ಬಾಗಳಿರೇವಣ್ಣ ಮಾತನಾಡಿ, ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಅಪ್ರಾಪ್ತ ಬಾಲಕಿ ದಿವ್ಯಾ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದು, ನೀರಿನ ಸಂಪ್ನಲ್ಲಿ ಬಿಸಾಕಿರುವ ಶಿಕ್ಷಕ ಕಾಂತರಾಜು ಅವರಿಗೆ ಮರಣ ದಂಡನೆ ವಿಧಿಸ ಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಚುಂಗಡಿಪುರ ಮಹೇಶ್, ಕೋಟಂಬಳ್ಳಿ ಕುಮಾರ್, ಬೋರ್ವೆಲ್ ರಾಜುಗೌಡ, ಶಾಂತರಾಜು, ನಾಗರಾಜು, ಕೆ.ಕೆ.ಹುಂಡಿರಾಜು, ಕುದೇರು ಸುರೇಶ್, ಇರಸವಾಡಿ ಮಹದೇವಶೆಟ್ಟರು, ಬೂದಿತಿಟ್ಟು ಮಹದೇವು, ಸಿದ್ದಮುಳ್ಳೂರು, ವೆಂಕಟೇಶ್, ನಿರಂಜನ್, ಮಂಗಲಕುಮಾರ್, ಸಿದ್ದರಾಜು ಇತರರು ಪಾಲ್ಗೊಂಡಿದ್ದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದ ಶಾಖೆ ಅರಣ್ಯದಲ್ಲಿ ನಡೆದ ಗುಂಡಿನ…
ಕುಶಾಲನಗರ: ತಾಲ್ಲೂಕಿನ ಕೂಡಿಗೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಮುಂದುವರಿದಿದ್ದು, ವ್ಯಕ್ತಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಹೆಗ್ಗಡಹಳ್ಳಿ ಗ್ರಾಮದ…
ಜಕಾರ್ತ: ಇಂಡೋನೇಷ್ಯಾದ ಫ್ಲೋರ್ಸ್ ದ್ವೀಪದಲ್ಲಿ ಶನಿವಾರ ಮುಂಜಾನೆ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಮೃತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.…
ಅಯೋಧ್ಯೆ: ಅಯೋಧ್ಯೆ ರಾಮಮಂದಿರದ ಅರ್ಚಕರಿಗೆ ಹಳದಿ ರೇಷ್ಮೆ ಧೋತಿಯನ್ನು ಹೊಸ ಡ್ರೆಸ್ ಕೋಡ್ ಆಗಿ ಜಾರಿಗೆ ತರಲಾಗಿದೆ. ರಾಮನಂದಿ ಸಂಪ್ರದಾಯಕ್ಕೆ…
ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…