ಜಿಲ್ಲೆಗಳು

ಅತ್ಯಾಚಾರ ಆರೋಪಿಯನ್ನು ಗಲ್ಲಿಗೇರಿಸಲು ಆಗ್ರಹ

ಪ್ರವರ್ಗ-1ರ ಜಾತಿಗಳ ಒಕ್ಕೂಟದ ಮುಖಂಡರಿಂದ ಪ್ರತಿಭಟನೆ

ಚಾಮರಾಜನಗರ: ಮಳವಳ್ಳಿಯಲ್ಲಿ ಬಾಲಕಿ ಮೇಲೆ ಅತ್ಚಾಚಾರ ಎಸಗಿದ ಶಿಕ್ಷಕ ಕಾಂತರಾಜು ಅವರನ್ನು ಗಲ್ಲುಶಿಕ್ಷೆಗೆ ಗುರಿಪಡಿಸಬೇಕು ಎಂದು ಒತ್ತಾಯಿಸಿ ಪ್ರವರ್ಗ-೧ರ ಜಾತಿಗಳ ಒಕ್ಕೂಟ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದ ಮುಖಂಡರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದ ಆವರಣದಿಂದ ಮೆರವಣಿಗೆ ಹೊರಟ ಪ್ರತಿಭಟನಾಕಾರರು ಭುವನೇಶ್ವರಿ ವೃತ್ತ, ಜೋಡಿರಸ್ತೆ ಮೂಲಕ ಜಿಲ್ಲಾಡಳಿತ ಭವನಕ್ಕೆ ತೆರಳಿ ಕೆಲಕಾಲ ಪ್ರತಿಭಟನೆ ನಡೆಸಿದರು. ನಂತರ ಜಿಲ್ಲಾಧಿಕಾರಿ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಿದರು.
ಒಕ್ಕೂಟದ ಜಿಲ್ಲಾಧ್ಯಕ್ಷ ಬಾಗಳಿರೇವಣ್ಣ ಮಾತನಾಡಿ, ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಅಪ್ರಾಪ್ತ ಬಾಲಕಿ ದಿವ್ಯಾ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದು, ನೀರಿನ ಸಂಪ್‌ನಲ್ಲಿ ಬಿಸಾಕಿರುವ ಶಿಕ್ಷಕ ಕಾಂತರಾಜು ಅವರಿಗೆ ಮರಣ ದಂಡನೆ ವಿಧಿಸ ಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಚುಂಗಡಿಪುರ ಮಹೇಶ್, ಕೋಟಂಬಳ್ಳಿ ಕುಮಾರ್, ಬೋರ್‌ವೆಲ್ ರಾಜುಗೌಡ, ಶಾಂತರಾಜು, ನಾಗರಾಜು, ಕೆ.ಕೆ.ಹುಂಡಿರಾಜು, ಕುದೇರು ಸುರೇಶ್, ಇರಸವಾಡಿ ಮಹದೇವಶೆಟ್ಟರು, ಬೂದಿತಿಟ್ಟು ಮಹದೇವು, ಸಿದ್ದಮುಳ್ಳೂರು, ವೆಂಕಟೇಶ್, ನಿರಂಜನ್, ಮಂಗಲಕುಮಾರ್, ಸಿದ್ದರಾಜು ಇತರರು ಪಾಲ್ಗೊಂಡಿದ್ದರು.

andolanait

Recent Posts

ಸಂಪ್ರದಾಯವಾಗಿ ನಡೆಯದ ವಿವಾಹ ಅಮಾನ್ಯ ; ಗುಜರಾತ್ ಹೈಕೋರ್ಟ್ ತೀರ್ಪು

ಸಪ್ತಪದಿ ಹಿಂದೂ ವಿವಾಹದ ಅಡಿಪಾಯ ; ಗುಜರಾತ್‌ ಹೈಕೋರ್ಟ್‌ ತೀರ್ಪು ಅಹಮದಾಬಾದ್ : ಸಪ್ತಪದಿಯಂತಹ ಸಾಂಪ್ರದಾಯಿಕ ವಿಧಿವಿಧಾನಗಳು ಮತ್ತು ಸಮಾರಂಭಗಳನ್ನು…

10 hours ago

ಬೋರ್‌ವೆಲ್, ಪಂಪ್‌ಸೆಟ್ ಕೇಬಲ್‌ ಕಳ್ಳತನ ಯುವಕರಿಗೆ ಧರ್ಮದೇಟು

ಮಂಡ್ಯ : ಬೋರ್‌ವೆಲ್, ಪಂಪ್‌ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ…

11 hours ago

ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ ; ಸುಟ್ಟು ಹೋದ 6 ಎಕರೆ ಕಬ್ಬು

ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…

12 hours ago

ಆಷಾಢ ಶುಕ್ರವಾರ, ಶನಿವಾರ, ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ

ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…

16 hours ago

ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’

ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…

17 hours ago

ಅಲೆಮಾರಿ ಜನಾಂಗ ನಾಡಿನ ಸಂಸ್ಕೃತಿಯ ಜೀವಂತಿಕೆ

ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…

23 hours ago