ಜಿಲ್ಲೆಗಳು

ಮಂಡ್ಯ – ಅತ್ಯಾಚಾರಕ್ಕೀಡಾಗಿ ಕೊಲೆಯಾದ ಬಾಲಕಿ ಕುಟುಂಬಕ್ಕೆ ಪರಿಹಾರ ವಿತರಿಸಿದ ಜಮೀರ್ ಅಹ್ಮದ್ ಖಾನ್

ಮಂಡ್ಯ : ಕಳೆದ ವಾರದಂದು ಅತ್ಯಾಚಾರಕ್ಕೀಡಾಗಿ ಕೊಲೆಯಾದ ಬಾಲಕಿ ಕುಟುಂಬಕ್ಕೆ ಇಂದು ಜಮೀರ್‌ ಅಹಮ್ಮದ್‌ ಅವರು ಭೇಟಿ ನೀಡಿ, ಕೊಲೆಯಾದ ಬಾಲಕಿಯ ತಂದೆ ತಾಯಿಗಳಿಗೆ ಸಾಂತ್ಬನ ಹೇಳಿದರು.
ನಳಿಕ ಮಾನವೀಯ ಹಿನ್ನೆಲೆ ಕುಟುಂಬಕ್ಕೆ ಆರ್ಥಿಕವಾಗಿ ನೆರವಾಗು ಉದ್ದೇಶದಿಂದ 5 ಲಕ್ಷ ರೂಪಾಯಿಗಳ ಪರಿಹಾರವನ್ನು ವಿತರಿಸಿ,ಬಾಲಕಿಯ ತಂದೆ ತಾಯಿಗೆ ಧೈರ್ಯತುಂಬಿದ್ದಾರೆ.

ಮನೆಪಾಠಕ್ಕೆoದು ತೆರಳಿ ಕೊಲೆಯಾಗಿದ್ದ ಬಾಲಕಿ ಮೇಲೆ ಅತ್ಯಾಚಾರ ನಡೆದಿರುವುದು ವೈದ್ಯಕೀಯ ವರದಿಯಿಂದ ದೃಢಪಟ್ಟಿದೆ. ಹೀಗಾಗಿ ಆರೋಪಿ ವಿರುದ್ಧ ಅತ್ಯಾಚಾರ ಮತ್ತು ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಾಗಿದೆ. ಜತೆಗೆ, ಆರೋಪಿಯನ್ನು ಗುರುವಾರ ರಾತ್ರಿ ನ್ಯಾಯಾಧೀಶರ ಎದುರು ಹಾಜರುಪಡಿಸಿ ಮತ್ತೆ ಪೊಲೀಸ್ ವಶಕ್ಕೆ ಪಡೆಯಲಾಯಿತು.

ಪಟ್ಟಣದ ೧೦ ವರ್ಷದ ಬಾಲಕಿಯನ್ನು ಟ್ಯೂಷನ್ ಸಂಸ್ಥೆ ಮಾಲೀಕ, ಮಳವಳ್ಳಿ ತಾಲೂಕು ನೆಲಮಾಕನಹಳ್ಳಿ ನಿವಾಸಿ ಕಾಂತರಾಜು ಅತ್ಯಾಚಾರವೆಸಗಿ, ಕೊಲೆ ಮಾಡಿದ್ದನು. ಬಳಿಕ ಬಾಲಕಿಯ ಶವವನ್ನು ಟ್ಯೂಷನ್ ನಡೆಯುತ್ತಿದ್ದ ಕಟ್ಟಡದ ಪಕ್ಕದಲ್ಲಿ ನಿರ್ಮಾಣ ಹಂತದಲ್ಲಿದ್ದ ಮನೆಯ ನೀರಿನ ಸಂಪ್‌ನೊಳಗೆ ಹಾಕಿದ್ದರು.
ಮನೆಗೆ ಬಾರದ ಬಾಲಕಿಗಾಗಿ ಪೋಷಕರು ಹುಡುಕಾಟ ನಡೆಸಿದಾಗ, ಕಾಂತರಾಜು ಕೂಡ ಅವರೊಂದಿಗೆ ಸೇರಿ ಬಾಲಕಿಯನ್ನು ಹುಡುಕುವ ನಾಟಕವಾಡಿದ್ದನು. ಶವ ಪತ್ತೆಯಾದ ಬಳಿಕ ಕಾಂತರಾಜು ಮೇಲೆ ಅನುಮಾನ ವ್ಯಕ್ತಪಡಿಸಿ, ಆತನೇ ಕೊಲೆ ಮಾಡಿದ್ದಾನೆಂದು ಆರೋಪಿಸಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಬುಧವಾರ ರಾತ್ರಿಯೇ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದರು.
ಜತೆಗೆ, ಪೋಷಕರು ನೀಡಿದ ದೂರು ಆಧರಿಸಿ ಪೊಲೀಸರು ಐಪಿಸಿ ಸೆಕ್ಷನ್ ೩೦೨ ಪ್ರಕಾರ ಪ್ರಕರಣ ದಾಖಲಿಸಿಕೊಂಡಿದ್ದರು. ಆದರೆ, ಗುರುವಾರ ಬಂದ ವೈದ್ಯಕೀಯ ವರದಿಯಲ್ಲಿ ಬಾಲಕಿ ಮೇಲೆ ಅತ್ಯಾಚಾರ ನಡೆದಿರುವುದು ಖಚಿತವಾಗಿದೆ. ಈ ಹಿನ್ನೆಲೆಯಲ್ಲಿ ಐಪಿಸಿ ಸೆಕ್ಷನ್ ೩೦೨ ಜತೆಗೆ, ೨೦೧, ೩೭೬(ಎ), ೩೭೬(ಎಬಿ), ಕಲಂ ೫(ಐ) ೫(ಎಂ) ೪ ಮತ್ತು ೬ ಹಾಗೂ ಪೋಕ್ಸೋ ಕಾಯಿದೆ-೨೦೧೨ನ್ನು ಸೇರಿಸಲಾಗಿದೆ.

andolanait

Recent Posts

ಪ್ರೀಮಿಯಂ ಪೆಟ್ರೋಲ್‌ ದರ 2 ರೂ ಏರಿಕೆ

ನವದೆಹಲಿ: ಇರಾನ್‌ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್‌ ದರವನ್ನು 2 ರೂಗೆ ಏರಿಕೆ ಮಾಡಿದೆ.…

26 mins ago

ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್:‌ ಸವಾರ ಸಾವು

ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…

35 mins ago

ಚಿಕ್ಕಮಗಳೂರು| ಹೊತ್ತಿ ಉರಿಯುತ್ತಿರುವ ಶೋಲಾರಣ್ಯ: ಅಪರೂಪದ ಸಸ್ಯ ಸಂಪತ್ತು ನಾಶ

ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…

41 mins ago

ಇರಾನ್‌ ಮೇಲೆ ಅಮೇರಿಕಾ-ಇಸ್ರೇಲ್‌ ವೈಮಾನಿಕ ದಾಳಿ: ಇರಾನ್‌ ಗುಪ್ತಚರ ಸಚಿವ ಸಾವು

ಟೆಹರಾನ್:‌ ಇರಾನ್‌ ಮೇಲೆ ಅಮೇರಿಕಾ ಹಾಗೂ ಇಸ್ರೇಲ್‌ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್‌ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…

1 hour ago

ಸರ್ಕಾರ ರಾಜ್ಯದ ಜನರ ಭರವಸೆ ನುಚ್ಚು ನೂರು ಮಾಡಿದೆ: ವಿಜಯೇಂದ್ರ ಆಕ್ರೋಶ

ಕಲಬುರ್ಗಿ: ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ಗೆ ಆಡಳಿತ ಪಕ್ಷದಲ್ಲೇ ವಿರೋಧ ವ್ಯಕ್ತವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ಮಾಡಿದ್ದಾರೆ.…

1 hour ago

ಧುರಂಧರ್‌-2 ಚಿತ್ರ ವೀಕ್ಷಿಸಿ ನಟಿ ರಮ್ಯಾ ಗರಂ: ಫ್ಯಾನ್ಸ್‌ಗೆ ಏನಂದು ಗೊತ್ತಾ?

ಬಹುನಿರೀಕ್ಷಿತ ಧುರಂಧರ್‌-2 ಸಿನಿಮಾ ಬಗ್ಗೆ ನಟಿ ರಮ್ಯಾ ಬರೆದಿರುವ ಟೂ ಪೇಜ್‌ ವಿಮರ್ಶೆ ಈಗ ಸೋಚಷಿಯಲ್‌ ಮೀಡಿಯಾದಲ್ಲಿ ಕಿಚ್ಚು ಹಬ್ಬಿಸಿದೆ.…

2 hours ago