ಜಿಲ್ಲೆಗಳು

ಮಂಡ್ಯ – ಅತ್ಯಾಚಾರಕ್ಕೀಡಾಗಿ ಕೊಲೆಯಾದ ಬಾಲಕಿ ಕುಟುಂಬಕ್ಕೆ ಪರಿಹಾರ ವಿತರಿಸಿದ ಜಮೀರ್ ಅಹ್ಮದ್ ಖಾನ್

ಮಂಡ್ಯ : ಕಳೆದ ವಾರದಂದು ಅತ್ಯಾಚಾರಕ್ಕೀಡಾಗಿ ಕೊಲೆಯಾದ ಬಾಲಕಿ ಕುಟುಂಬಕ್ಕೆ ಇಂದು ಜಮೀರ್‌ ಅಹಮ್ಮದ್‌ ಅವರು ಭೇಟಿ ನೀಡಿ, ಕೊಲೆಯಾದ ಬಾಲಕಿಯ ತಂದೆ ತಾಯಿಗಳಿಗೆ ಸಾಂತ್ಬನ ಹೇಳಿದರು.
ನಳಿಕ ಮಾನವೀಯ ಹಿನ್ನೆಲೆ ಕುಟುಂಬಕ್ಕೆ ಆರ್ಥಿಕವಾಗಿ ನೆರವಾಗು ಉದ್ದೇಶದಿಂದ 5 ಲಕ್ಷ ರೂಪಾಯಿಗಳ ಪರಿಹಾರವನ್ನು ವಿತರಿಸಿ,ಬಾಲಕಿಯ ತಂದೆ ತಾಯಿಗೆ ಧೈರ್ಯತುಂಬಿದ್ದಾರೆ.

ಮನೆಪಾಠಕ್ಕೆoದು ತೆರಳಿ ಕೊಲೆಯಾಗಿದ್ದ ಬಾಲಕಿ ಮೇಲೆ ಅತ್ಯಾಚಾರ ನಡೆದಿರುವುದು ವೈದ್ಯಕೀಯ ವರದಿಯಿಂದ ದೃಢಪಟ್ಟಿದೆ. ಹೀಗಾಗಿ ಆರೋಪಿ ವಿರುದ್ಧ ಅತ್ಯಾಚಾರ ಮತ್ತು ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಾಗಿದೆ. ಜತೆಗೆ, ಆರೋಪಿಯನ್ನು ಗುರುವಾರ ರಾತ್ರಿ ನ್ಯಾಯಾಧೀಶರ ಎದುರು ಹಾಜರುಪಡಿಸಿ ಮತ್ತೆ ಪೊಲೀಸ್ ವಶಕ್ಕೆ ಪಡೆಯಲಾಯಿತು.

ಪಟ್ಟಣದ ೧೦ ವರ್ಷದ ಬಾಲಕಿಯನ್ನು ಟ್ಯೂಷನ್ ಸಂಸ್ಥೆ ಮಾಲೀಕ, ಮಳವಳ್ಳಿ ತಾಲೂಕು ನೆಲಮಾಕನಹಳ್ಳಿ ನಿವಾಸಿ ಕಾಂತರಾಜು ಅತ್ಯಾಚಾರವೆಸಗಿ, ಕೊಲೆ ಮಾಡಿದ್ದನು. ಬಳಿಕ ಬಾಲಕಿಯ ಶವವನ್ನು ಟ್ಯೂಷನ್ ನಡೆಯುತ್ತಿದ್ದ ಕಟ್ಟಡದ ಪಕ್ಕದಲ್ಲಿ ನಿರ್ಮಾಣ ಹಂತದಲ್ಲಿದ್ದ ಮನೆಯ ನೀರಿನ ಸಂಪ್‌ನೊಳಗೆ ಹಾಕಿದ್ದರು.
ಮನೆಗೆ ಬಾರದ ಬಾಲಕಿಗಾಗಿ ಪೋಷಕರು ಹುಡುಕಾಟ ನಡೆಸಿದಾಗ, ಕಾಂತರಾಜು ಕೂಡ ಅವರೊಂದಿಗೆ ಸೇರಿ ಬಾಲಕಿಯನ್ನು ಹುಡುಕುವ ನಾಟಕವಾಡಿದ್ದನು. ಶವ ಪತ್ತೆಯಾದ ಬಳಿಕ ಕಾಂತರಾಜು ಮೇಲೆ ಅನುಮಾನ ವ್ಯಕ್ತಪಡಿಸಿ, ಆತನೇ ಕೊಲೆ ಮಾಡಿದ್ದಾನೆಂದು ಆರೋಪಿಸಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಬುಧವಾರ ರಾತ್ರಿಯೇ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದರು.
ಜತೆಗೆ, ಪೋಷಕರು ನೀಡಿದ ದೂರು ಆಧರಿಸಿ ಪೊಲೀಸರು ಐಪಿಸಿ ಸೆಕ್ಷನ್ ೩೦೨ ಪ್ರಕಾರ ಪ್ರಕರಣ ದಾಖಲಿಸಿಕೊಂಡಿದ್ದರು. ಆದರೆ, ಗುರುವಾರ ಬಂದ ವೈದ್ಯಕೀಯ ವರದಿಯಲ್ಲಿ ಬಾಲಕಿ ಮೇಲೆ ಅತ್ಯಾಚಾರ ನಡೆದಿರುವುದು ಖಚಿತವಾಗಿದೆ. ಈ ಹಿನ್ನೆಲೆಯಲ್ಲಿ ಐಪಿಸಿ ಸೆಕ್ಷನ್ ೩೦೨ ಜತೆಗೆ, ೨೦೧, ೩೭೬(ಎ), ೩೭೬(ಎಬಿ), ಕಲಂ ೫(ಐ) ೫(ಎಂ) ೪ ಮತ್ತು ೬ ಹಾಗೂ ಪೋಕ್ಸೋ ಕಾಯಿದೆ-೨೦೧೨ನ್ನು ಸೇರಿಸಲಾಗಿದೆ.

andolanait

Recent Posts

ನಂಜನಗೂಡು | ಲೋಕಾ ಬಲೆಗೆ ಬಿದ್ದ ಸರ್ವೆಯರ್‌

ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…

50 mins ago

ಅನೈತಿಕ ಸಂಬಂಧದ ಶಂಕೆ : ರಾಡ್‌ನಿಂದ ಹೊಡೆದು ಪತ್ನಿ ಕೊಂದ ಪತಿ

ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…

2 hours ago

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

9 hours ago

ಕೊಡಗಿನಲ್ಲಿ ಸಾಧಾರಣ ಮಳೆ: ಹಾರಂಗಿ ಜಲಾಶಯದ ಒಳಹರಿವು ಹೆಚ್ಚಳ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…

9 hours ago

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

13 hours ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

13 hours ago