ಜಿಲ್ಲೆಗಳು

ಮಳವಳ್ಳಿ ಅತ್ಯಾಚಾರ ಪ್ರಕರಣ : ಮಕ್ಕಳ ಆಯೋಗಕ್ಕೆ ಎಎಪಿ ದೂರು, ಸಿಬಿಐ ತನಿಖೆಗೆ ಆಗ್ರಹ

ಬೆಂಗಳೂರು: ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಸಿಬಿಐ ಮೂಲಕ ತನಿಖೆ ನಡೆಸುವಂತೆ ಸರ್ಕಾರಕ್ಕೆ ಶಿಫಾರಸು ಮಾಡಬೇಕೆಂದು ಕೋರಿ ಆಮ್‌ ಆದ್ಮಿ ಪಾರ್ಟಿಯ ಮಹಿಳಾ ಘಟಕವು ರಾಜ್ಯ ಮಕ್ಕಳ ಹಕ್ಕು ಆಯೋಗಕ್ಕೆ ದೂರು ನೀಡಿತು.

ನಂತರ ಮಾತನಾಡಿದ ಎಎಪಿ ಬೆಂಗಳೂರು ಮಹಿಳಾ ಘಟಕದ ಅಧ್ಯಕ್ಷೆ ಕುಶಲಸ್ವಾಮಿ, “ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಅ. 11ರಂದು ಹತ್ತು ವರ್ಷದ ಬಾಲಕಿಯನ್ನು ಅತ್ಯಾಚಾರ ಹಾಗೂ ಕೊಲೆ ಮಾಡಿರುವ ದುರ್ಘಟನೆ ನಡೆದಿದೆ. ಕೊಲೆ ಬಳಿಕ ಆಕೆಯ ಮೃತದೇಹವನ್ನು ನಿರ್ಮಾಣ ಹಂತದ ಕಟ್ಟಡದ ಸಂಪ್‌ ಒಳಗೆ ಎಸೆಯಲಾಗಿದೆ. ಘಟನೆ ಸಂಬಂಧ ಕಾಂತರಾಜು ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ತಾನೇ ದುಷ್ಕೃತ್ಯ ಎಸೆದಿರುವುದಾಗಿ ಆತ ತಪ್ಪೊಪ್ಪಿಕೊಂಡಿದ್ದಾನೆ. ಬಂಧಿತ ಆರೋಪಿಯು ಈ ಹಿಂದೆಯೂ ಇಂತಹ ದುಷ್ಕೃತ್ಯ ಎಸಗಿದ್ದರೂ ಆತನ ವಿರುದ್ಧ ಪೊಲೀಸರು ಯಾವುದೇ ಕಠಿಣ ಕ್ರಮ ಕೈಗೊಂಡಿರುವುದಿಲ್ಲ. ಪರಿಣಾಮ ಈಗ ಮಳವಳ್ಳಿಯ ಅಮಾಯಕ ಬಾಲಕಿ ಆತನಿಂದ ಬಲಿಯಾಗಿದ್ದಾಳೆ” ಎಂದು ದೂರಿದರು.

“ಇದೊಂದು ಗಂಭೀರ ಪ್ರಕರಣವಾಗಿದ್ದು, ಪೊಲೀಸ್‌ ಇಲಾಖೆಯ ವೈಫಲ್ಯವು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಆದ್ದರಿಂದ ಹೆಚ್ಚಿನ ತನಿಖೆಗಾಗಿ ಪ್ರಕರರಣವನ್ನು ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸುತ್ತಿದ್ದೇವೆ. ಬಾಲಕಿಯ ಅತ್ಯಾಚಾರ ಹಾಗೂ ಕೊಲೆಗೆ ಕಾರಣರಾದ ಎಲ್ಲರಿಗೂ ಕಠಿಣ ಶಿಕ್ಷೆಯಾಗಬೇಕು. ಆಗ ಮಾತ್ರ ಮುಂದಿನ ದಿನಗಳಲ್ಲಿ ಇಂತಹ ದುರ್ಘಟನೆಗಳು ಮರುಕಳಿಸುವುದು ಕಡಿಮೆಯಾಗುತ್ತದೆ” ಎಂದು ಕುಶಲಸ್ವಾಮಿ ಹೇಳಿದರು.

“ಅತ್ಯಾಚಾರ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುವುದರಲ್ಲಿ ರಾಜ್ಯ ಗೃಹ ಇಲಾಖೆ ವಿಫಲವಾಗಿದೆ. ಇದರಿಂದಾಗಿ ಕಾಮುಕರಿಗೆ ಕಾನೂನಿನ ಭಯವೇ ಇಲ್ಲವಾಗಿದೆ. ಮಾಧ್ಯಮಗಳಲ್ಲಿ ದೊಡ್ಡದಾಗಿ ವರದಿಯಾಗುವ ಪ್ರಕರಣಗಳನ್ನಷ್ಟೇ ಗಂಭೀರವಾಗಿ ಪರಿಗಣಿಸಲಾಗುತ್ತಿದೆ. ಕೆಲವು ತಿಂಗಳ ಹಿಂದೆ ಮೈಸೂರಿನಲ್ಲಿ ಯುವತಿ ಮೇಲೆ ಅತ್ಯಾಚಾರವಾದಾಗ, ಸಂತ್ರಸ್ತೆಯು ಆ ವೇಳೆ ಅಲ್ಲಿಗೆ ಬಂದಿದ್ದೇ ತಪ್ಪೆಂಬಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಮಾತಾನಾಡಿದ್ದರು. ಗೃಹ ಸಚಿವರ ಇಂತಹ ಮನಸ್ಥಿತಿಯಿಂದಾಗಿ ಕಾಮುಕರಿಗೆ ಹೆದರಿಕೆ ಇಲ್ಲದಂತಾಗಿದೆ” ಎಂದು ಕುಶಲಸ್ವಾಮಿ ಹೇಳಿದರು.

andolanait

Recent Posts

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

1 hour ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

1 hour ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

1 hour ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

2 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

2 hours ago

ಹಿಂದಿನ ಉಸ್ತುವಾರಿಗಿದ್ದ ಖಾತೆಗಳು ಪುಟ್ಟರಂಗಶೆಟ್ಟರಿಗೆ!

ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ  ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…

2 hours ago