ಜಿಲ್ಲೆಗಳು

ಮಳವಳ್ಳಿ ಅತ್ಯಾಚಾರ ಪ್ರಕರಣ : ಮಕ್ಕಳ ಆಯೋಗಕ್ಕೆ ಎಎಪಿ ದೂರು, ಸಿಬಿಐ ತನಿಖೆಗೆ ಆಗ್ರಹ

ಬೆಂಗಳೂರು: ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಸಿಬಿಐ ಮೂಲಕ ತನಿಖೆ ನಡೆಸುವಂತೆ ಸರ್ಕಾರಕ್ಕೆ ಶಿಫಾರಸು ಮಾಡಬೇಕೆಂದು ಕೋರಿ ಆಮ್‌ ಆದ್ಮಿ ಪಾರ್ಟಿಯ ಮಹಿಳಾ ಘಟಕವು ರಾಜ್ಯ ಮಕ್ಕಳ ಹಕ್ಕು ಆಯೋಗಕ್ಕೆ ದೂರು ನೀಡಿತು.

ನಂತರ ಮಾತನಾಡಿದ ಎಎಪಿ ಬೆಂಗಳೂರು ಮಹಿಳಾ ಘಟಕದ ಅಧ್ಯಕ್ಷೆ ಕುಶಲಸ್ವಾಮಿ, “ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಅ. 11ರಂದು ಹತ್ತು ವರ್ಷದ ಬಾಲಕಿಯನ್ನು ಅತ್ಯಾಚಾರ ಹಾಗೂ ಕೊಲೆ ಮಾಡಿರುವ ದುರ್ಘಟನೆ ನಡೆದಿದೆ. ಕೊಲೆ ಬಳಿಕ ಆಕೆಯ ಮೃತದೇಹವನ್ನು ನಿರ್ಮಾಣ ಹಂತದ ಕಟ್ಟಡದ ಸಂಪ್‌ ಒಳಗೆ ಎಸೆಯಲಾಗಿದೆ. ಘಟನೆ ಸಂಬಂಧ ಕಾಂತರಾಜು ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ತಾನೇ ದುಷ್ಕೃತ್ಯ ಎಸೆದಿರುವುದಾಗಿ ಆತ ತಪ್ಪೊಪ್ಪಿಕೊಂಡಿದ್ದಾನೆ. ಬಂಧಿತ ಆರೋಪಿಯು ಈ ಹಿಂದೆಯೂ ಇಂತಹ ದುಷ್ಕೃತ್ಯ ಎಸಗಿದ್ದರೂ ಆತನ ವಿರುದ್ಧ ಪೊಲೀಸರು ಯಾವುದೇ ಕಠಿಣ ಕ್ರಮ ಕೈಗೊಂಡಿರುವುದಿಲ್ಲ. ಪರಿಣಾಮ ಈಗ ಮಳವಳ್ಳಿಯ ಅಮಾಯಕ ಬಾಲಕಿ ಆತನಿಂದ ಬಲಿಯಾಗಿದ್ದಾಳೆ” ಎಂದು ದೂರಿದರು.

“ಇದೊಂದು ಗಂಭೀರ ಪ್ರಕರಣವಾಗಿದ್ದು, ಪೊಲೀಸ್‌ ಇಲಾಖೆಯ ವೈಫಲ್ಯವು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಆದ್ದರಿಂದ ಹೆಚ್ಚಿನ ತನಿಖೆಗಾಗಿ ಪ್ರಕರರಣವನ್ನು ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸುತ್ತಿದ್ದೇವೆ. ಬಾಲಕಿಯ ಅತ್ಯಾಚಾರ ಹಾಗೂ ಕೊಲೆಗೆ ಕಾರಣರಾದ ಎಲ್ಲರಿಗೂ ಕಠಿಣ ಶಿಕ್ಷೆಯಾಗಬೇಕು. ಆಗ ಮಾತ್ರ ಮುಂದಿನ ದಿನಗಳಲ್ಲಿ ಇಂತಹ ದುರ್ಘಟನೆಗಳು ಮರುಕಳಿಸುವುದು ಕಡಿಮೆಯಾಗುತ್ತದೆ” ಎಂದು ಕುಶಲಸ್ವಾಮಿ ಹೇಳಿದರು.

“ಅತ್ಯಾಚಾರ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುವುದರಲ್ಲಿ ರಾಜ್ಯ ಗೃಹ ಇಲಾಖೆ ವಿಫಲವಾಗಿದೆ. ಇದರಿಂದಾಗಿ ಕಾಮುಕರಿಗೆ ಕಾನೂನಿನ ಭಯವೇ ಇಲ್ಲವಾಗಿದೆ. ಮಾಧ್ಯಮಗಳಲ್ಲಿ ದೊಡ್ಡದಾಗಿ ವರದಿಯಾಗುವ ಪ್ರಕರಣಗಳನ್ನಷ್ಟೇ ಗಂಭೀರವಾಗಿ ಪರಿಗಣಿಸಲಾಗುತ್ತಿದೆ. ಕೆಲವು ತಿಂಗಳ ಹಿಂದೆ ಮೈಸೂರಿನಲ್ಲಿ ಯುವತಿ ಮೇಲೆ ಅತ್ಯಾಚಾರವಾದಾಗ, ಸಂತ್ರಸ್ತೆಯು ಆ ವೇಳೆ ಅಲ್ಲಿಗೆ ಬಂದಿದ್ದೇ ತಪ್ಪೆಂಬಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಮಾತಾನಾಡಿದ್ದರು. ಗೃಹ ಸಚಿವರ ಇಂತಹ ಮನಸ್ಥಿತಿಯಿಂದಾಗಿ ಕಾಮುಕರಿಗೆ ಹೆದರಿಕೆ ಇಲ್ಲದಂತಾಗಿದೆ” ಎಂದು ಕುಶಲಸ್ವಾಮಿ ಹೇಳಿದರು.

andolanait

Recent Posts

ದೂರ ಗ್ರಾಮಕ್ಕೆ ನಟ ಪ್ರಭುದೇವ ಭೇಟಿ

ದೂರ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ದೂರ ಗ್ರಾಮಕ್ಕೆ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಶನಿವಾರ ಆಗಮಿಸಿದ್ದರು. ಅವರು ಮೊದಲು…

8 hours ago

ಸೌದಿ ಅರಾಮ್ಕೊ ತೈಲ ಕಂಪನಿಯ ಹೆಲಿಕಾಪ್ಟರ್‌ ಪತನ: 14 ಮಂದಿ ದುರ್ಮರಣ

ರಿಯಾಧ್:‌ ಸೌದಿ ಅರಾಮ್ಕೊ ತೈಲ ಕಂಪನಿಗೆ ಸೇರಿದ ಹೆಲಿಕಾಪ್ಟರ್‌ ಅಪಘಾತಕ್ಕೀಡಾಗಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ. ಸೌದಿ ಅರೇಬಿಯಾದ ರಾಸ್‌…

9 hours ago

ಒಂದೇ ಕುಟುಂಬದ ಮೂವರ ಆತ್ಮಹತ್ಯೆ ಪ್ರಕರಣ: ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ

ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…

10 hours ago

ಮೈಸೂರಿನ ಎರಡು ಪ್ರಮುಖ ಹೋಟೆಲ್‌ಗಳಿಗೆ ಬಾಂಬ್‌ ಬೆದರಿಕೆ ಕರೆ: ಕೆಲಕಾಲ ಆತಂಕ ಸೃಷ್ಟಿ

ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್‌ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…

10 hours ago

ಜಮೀನಿನಲ್ಲಿ ಯುವತಿಗೆ ಹಾವು ಕಡಿತ

ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…

10 hours ago

ಸರಗೂರು: ಹುಲಿ ದಾಳಿಗೆ ಕರು ಬಲಿ

ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…

11 hours ago