ಮಂಡ್ಯ: ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಆರೋಪಿ ವಿರುದ್ಧ ಮುಂದಿನ ಹತ್ತು ದಿನಗಳಲ್ಲಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು.
ಮಳವಳ್ಳಿಯ ಮೈಸೂರು ರಸ್ತೆಯಲ್ಲಿರುವ ಮೃತ ಬಾಲಕಿಯ ಮನೆಗೆ ಶುಕ್ರವಾರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ನಂತರ ಸುದ್ದಿಗಾರರೊಂದಿಗೆ ವಾತನಾಡಿದ ಅವರು, ಅತ್ಯಾಚಾರಿ ಆರೋಪಿಗೆ ಕಠಿಣ ಶಿಕ್ಷೆ ಆಗುತ್ತದೆ. ಈ ಪ್ರಕರಣವನ್ನು ಶೀಘ್ರಗತಿ ನ್ಯಾಾಂಲುಂಕ್ಕೆ ವಹಿಸಲು ಕ್ರಮಕೈಗೊಳ್ಳುವುದಾಗಿ ತಿಳಿಸಿದರು.
ಈ ಪ್ರಕರಣ ಸಂಬಂಧ ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊವ್ಮಾಯಿ ಅವರೊಂದಿಗೆ ವಾತುಕತೆ ನಡೆಸಲಾಗಿದ್ದು, ನೊಂದ ಕುಟುಂಬಕ್ಕೆ ನ್ಯಾಯ ಕೊಡಿಸಲಾಗುವುದು. ಮುಂದಿನ ದಿನಗಳಲ್ಲಿ ಬಾಲಕಿ ಕುಟುಂಬಕ್ಕೆ ಪರಿಹಾರ ಕೊಡಿಸುತ್ತೇವೆ. ಆದರೆ ಎಷ್ಟೇ ಪರಿಹಾರ ಕೊಟ್ಟರೂ ಬಾಲಕಿಯನ್ನು ವಾಪಸ್ ತರಲು ಆಗುವುದಿಲ್ಲ. ನಮಗೂ ಅತೀವ ಆ ದುಃಖ ಇದೆ ಎಂದು ಹೇಳಿದರು.
ಹಾಸನ ಹಾಗೂ ಕೆ.ಆರ್.ಪೇಟೆಯಲ್ಲಿ ಧಾರ್ಮಿಕ ಕಾರ್ಯಕ್ರಮ ಇದ್ದ ಕಾರಣದಿಂದ ಇಲ್ಲಿಗೆ ಬರುವುದು ತಡವಾಯಿತು. ಪ್ರಕರಣದ ಬಗ್ಗೆ ಎಲ್ಲ ಆಯಾಮಗಳಿಂದಲೂ ತನಿಖೆ ವಾಡುವಂತೆ ಸೂಚನೆ ನೀಡಲಾಗಿದೆ ಎಂದರು.
ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್.ಅಶ್ವತ್ಥ ನಾರಾಯಣ ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.
ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…