ಜಿಲ್ಲೆಗಳು

ಅತ್ಯಾಚಾರ, ಕೊಲೆ ಆರೋಪಿ ವಿರುದ್ಧ ಶೀಘ್ರ ಚಾರ್ಜ್ ಶೀಟ್: ಗೋಪಾಲಯ್ಯ

ಮಂಡ್ಯ: ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಆರೋಪಿ ವಿರುದ್ಧ ಮುಂದಿನ ಹತ್ತು ದಿನಗಳಲ್ಲಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು.
ಮಳವಳ್ಳಿಯ ಮೈಸೂರು ರಸ್ತೆಯಲ್ಲಿರುವ ಮೃತ ಬಾಲಕಿಯ ಮನೆಗೆ ಶುಕ್ರವಾರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ನಂತರ ಸುದ್ದಿಗಾರರೊಂದಿಗೆ ವಾತನಾಡಿದ ಅವರು, ಅತ್ಯಾಚಾರಿ ಆರೋಪಿಗೆ ಕಠಿಣ ಶಿಕ್ಷೆ ಆಗುತ್ತದೆ. ಈ ಪ್ರಕರಣವನ್ನು ಶೀಘ್ರಗತಿ ನ್ಯಾಾಂಲುಂಕ್ಕೆ ವಹಿಸಲು ಕ್ರಮಕೈಗೊಳ್ಳುವುದಾಗಿ ತಿಳಿಸಿದರು.
ಈ ಪ್ರಕರಣ ಸಂಬಂಧ ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊವ್ಮಾಯಿ ಅವರೊಂದಿಗೆ ವಾತುಕತೆ ನಡೆಸಲಾಗಿದ್ದು, ನೊಂದ ಕುಟುಂಬಕ್ಕೆ ನ್ಯಾಯ ಕೊಡಿಸಲಾಗುವುದು. ಮುಂದಿನ ದಿನಗಳಲ್ಲಿ ಬಾಲಕಿ ಕುಟುಂಬಕ್ಕೆ ಪರಿಹಾರ ಕೊಡಿಸುತ್ತೇವೆ. ಆದರೆ ಎಷ್ಟೇ ಪರಿಹಾರ ಕೊಟ್ಟರೂ ಬಾಲಕಿಯನ್ನು ವಾಪಸ್ ತರಲು ಆಗುವುದಿಲ್ಲ. ನಮಗೂ ಅತೀವ ಆ ದುಃಖ ಇದೆ ಎಂದು ಹೇಳಿದರು.
ಹಾಸನ ಹಾಗೂ ಕೆ.ಆರ್.ಪೇಟೆಯಲ್ಲಿ ಧಾರ್ಮಿಕ ಕಾರ್ಯಕ್ರಮ ಇದ್ದ ಕಾರಣದಿಂದ ಇಲ್ಲಿಗೆ ಬರುವುದು ತಡವಾಯಿತು. ಪ್ರಕರಣದ ಬಗ್ಗೆ ಎಲ್ಲ ಆಯಾಮಗಳಿಂದಲೂ ತನಿಖೆ ವಾಡುವಂತೆ ಸೂಚನೆ ನೀಡಲಾಗಿದೆ ಎಂದರು.
ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್.ಅಶ್ವತ್ಥ ನಾರಾಯಣ ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

andolanait

Recent Posts

ಕೊಳೆಗೇರಿ ಮಕ್ಕಳ ಬದುಕು ರೂಪಿಸುವ ‘ಖೇಲ್ ಘರ್’ ಎಂಬ ಆಟದ ಮನೆ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ೧೯೯೬ರಲ್ಲಿ ‘ಪಾಲಕ್ ನೀತಿ ಪರಿವಾರ್’ ಎಂಬ ಸರ್ಕಾರೇತರ ಸಂಸ್ಥೆಯಡಿ ‘ಈ ಮನೆ’ ಆರಂಭ ಪುಣೆಯ…

3 hours ago

ಮಡಿಕೇರಿ ಅರಮನೆಗೆ ಕೇಂದ್ರದಿಂದ ಸಂರಕ್ಷಿತ ಸ್ಮಾರಕ ಸ್ಥಾನಮಾನ

ಪುನೀತ್ ಮಡಿಕೇರಿ ಡಿಜಿಟಲ್ ಮ್ಯೂಸಿಯಂ ಕನಸು ಸಾಕಾರಕ್ಕೆ ಕೇಂದ್ರ ಸರ್ಕಾರದ ನೆರವು ಕೊಡಗಿನ ಹೆಮ್ಮೆಯ ಸಂಕೇತವಾದ ಮಡಿಕೇರಿ ಅರಮನೆಗೆ ಕೇಂದ್ರ ಸರ್ಕಾರದಿಂದ…

3 hours ago

ಹೆಸರಿಗಷ್ಟೆ ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೌಲಭ್ಯ!

ಮಹೇಂದ್ರ ಹಸಗೂಲಿ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ ಎಂದು ಸಿಎಂ ಘೋಷಣೆ ಮಾಡಿದರೂ ಹಣ ಪಡೆದು ಪಾಸ್ ವಿತರಣೆಗೆ ಆಕ್ರೋಶ  ಗುಂಡ್ಲುಪೇಟೆ:…

3 hours ago

ಎಲೆ ತೋಟ; ಸ್ಥಳೀಯರಿಗೆ ಅನೈರ್ಮಲ್ಯದ ಸಂಕಟ

ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರಿನ ಅಗ್ರಹಾರದ ರಾಮಾನುಜ ರಸ್ತೆಯ ೧೩ನೇ ಕ್ರಾಸ್ ನಿವಾಸಿಗಳ ಪರದಾಟ ಮೈಸೂರು: ಮನೆಯ ಬಾಗಿಲು ತೆರೆದರೆ ಮೂಗಿಗ…

3 hours ago

ಪ್ರತ್ಯೇಕ ಪ್ರಕರಣ: ಮನೆ, ದೇವಸ್ಥಾನದಲ್ಲಿ ಕಳವು

ಹನಗೋಡು: ಹಾಡಹಗಲೇ ಮನೆ ಬೀಗ ಒಡೆದು ಚಿನ್ನಾಭರಣ ಮತ್ತು ನಗದು ಕಳವು ಮಾಡಿರುವ ಘಟನೆ ನಡೆದಿದೆ. ಹನಗೋಡು ಹೋಬಳಿಯ ಕಡೇಮನುಗನಹಳ್ಳಿ…

16 hours ago