ಜಿಲ್ಲೆಗಳು

ಅತ್ಯಾಚಾರಕ್ಕೆ ತುತ್ತಾಗಿ ಕೊಲೆಯಾದ ಬಾಲಕಿ ಕುಟುಂಬಕ್ಕೆ ನಿಖಿಲ್‌ ಕುಮಾರಸ್ವಾಮಿ ಸಾಂತ್ವನ

ಮಂಡ್ಯ : ಅತ್ಯಾಚಾರಕ್ಕೆ ತುತ್ತಾಗಿ ಬರ್ಬರವಾಗಿ ಕೊಲೆಯಾದ ಮಳವಳ್ಳಿಯ ಬಾಲಕಿ ನಿವಾಸಕ್ಕೆ ಇಂದು ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್‌ ಕುಮಾರಸ್ವಾಮಿ ಅವರು ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.
ಈ ಘಟನೆ ನನ್ನ ಮನಸ್ಸಿಗೆ ತೀವ್ರ ನೋವುಂಟು ಮಾಡಿದೆ. ಆ ತಂದೆ ತಾಯಿ ಗೋಳು ಯಾರಿಗೂ ಬಾರದಿರಲಿ. ನೂರುಕಾಲ ಬಾಳಿ ಬದುಕಬೇಕಿದ್ದ ಮಗಳನ್ನು ಕಳೆದುಕೊಂಡ ತಂದೆ-ತಾಯಿ ಮತ್ತು ಇಡೀ ಕುಟುಂಬದ ದುಃಖದಲ್ಲಿ ನಾನು ಭಾಗಿಯಾಗುತ್ತೇನೆ ಎಂದರು.
ಮುಂದುವರಿದು, ಪುಟ್ಟ ಕಂದಮ್ಮ ಅರಳುವ ಮುನ್ನವೇ ರಕ್ಕಸನ ಅಟ್ಟಹಾಸಕ್ಕೆ ಬಾಡಿಹೊದದ್ದು ದುರಂತ.
ಇದೊಂದು ಪೈಶಾಚಿಕ ಕೃತ್ಯ. ಆರೋಪಿಗೆ ಗರಿಷ್ಠ ಶಿಕ್ಷೆಯಾಗುವಂತೆ ಸರ್ಕಾರ ಹಾಗೂ ಪೋಲಿಸ್ ಇಲಾಖೆ ಎಚ್ಚರ ವಹಿಸಬೇಕು. ಈ ಹೋರಾಟದಲ್ಲಿ ನ್ಯಾಯ ಸಿಗುವವರೆಗೂ ಆ ಕುಟುಂಬದ ಪರವಾಗಿ ಇರುವೆ ಎಂದರು.
ಈ ಸಂದರ್ಭದಲ್ಲಿ ಮಳವಳ್ಳಿ ಶಾಸಕರಾದ ಅನ್ನದಾನಿ ಅವರು, ಮನ್ಮುಲ್ ಅಧ್ಯಕ್ಷರಾದ ಬಿ.ಆರ್.ರಾಮಚಂದ್ರ ಅವರು, ಜೆಡಿಎಸ್ ತಾಲ್ಲೂಕು ಅಧ್ಯಕ್ಷರು ಹಾಗೂ ಮನ್ಮುಲ್ ನಿರ್ದೇಶಕರಾದ ವಿ.ಎಂ. ವಿಶ್ವನಾಥ್ ಅವರು, ಮಂಡ್ಯ ಯುವ ಜನತಾದಳ ಅಧ್ಯಕ್ಷರಾದ ರವಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

2 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

3 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

4 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

4 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

5 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

6 hours ago