ಜಿಲ್ಲೆಗಳು

ಅತ್ಯಾಚಾರಕ್ಕೆ ತುತ್ತಾಗಿ ಕೊಲೆಯಾದ ಬಾಲಕಿ ಕುಟುಂಬಕ್ಕೆ ನಿಖಿಲ್‌ ಕುಮಾರಸ್ವಾಮಿ ಸಾಂತ್ವನ

ಮಂಡ್ಯ : ಅತ್ಯಾಚಾರಕ್ಕೆ ತುತ್ತಾಗಿ ಬರ್ಬರವಾಗಿ ಕೊಲೆಯಾದ ಮಳವಳ್ಳಿಯ ಬಾಲಕಿ ನಿವಾಸಕ್ಕೆ ಇಂದು ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್‌ ಕುಮಾರಸ್ವಾಮಿ ಅವರು ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.
ಈ ಘಟನೆ ನನ್ನ ಮನಸ್ಸಿಗೆ ತೀವ್ರ ನೋವುಂಟು ಮಾಡಿದೆ. ಆ ತಂದೆ ತಾಯಿ ಗೋಳು ಯಾರಿಗೂ ಬಾರದಿರಲಿ. ನೂರುಕಾಲ ಬಾಳಿ ಬದುಕಬೇಕಿದ್ದ ಮಗಳನ್ನು ಕಳೆದುಕೊಂಡ ತಂದೆ-ತಾಯಿ ಮತ್ತು ಇಡೀ ಕುಟುಂಬದ ದುಃಖದಲ್ಲಿ ನಾನು ಭಾಗಿಯಾಗುತ್ತೇನೆ ಎಂದರು.
ಮುಂದುವರಿದು, ಪುಟ್ಟ ಕಂದಮ್ಮ ಅರಳುವ ಮುನ್ನವೇ ರಕ್ಕಸನ ಅಟ್ಟಹಾಸಕ್ಕೆ ಬಾಡಿಹೊದದ್ದು ದುರಂತ.
ಇದೊಂದು ಪೈಶಾಚಿಕ ಕೃತ್ಯ. ಆರೋಪಿಗೆ ಗರಿಷ್ಠ ಶಿಕ್ಷೆಯಾಗುವಂತೆ ಸರ್ಕಾರ ಹಾಗೂ ಪೋಲಿಸ್ ಇಲಾಖೆ ಎಚ್ಚರ ವಹಿಸಬೇಕು. ಈ ಹೋರಾಟದಲ್ಲಿ ನ್ಯಾಯ ಸಿಗುವವರೆಗೂ ಆ ಕುಟುಂಬದ ಪರವಾಗಿ ಇರುವೆ ಎಂದರು.
ಈ ಸಂದರ್ಭದಲ್ಲಿ ಮಳವಳ್ಳಿ ಶಾಸಕರಾದ ಅನ್ನದಾನಿ ಅವರು, ಮನ್ಮುಲ್ ಅಧ್ಯಕ್ಷರಾದ ಬಿ.ಆರ್.ರಾಮಚಂದ್ರ ಅವರು, ಜೆಡಿಎಸ್ ತಾಲ್ಲೂಕು ಅಧ್ಯಕ್ಷರು ಹಾಗೂ ಮನ್ಮುಲ್ ನಿರ್ದೇಶಕರಾದ ವಿ.ಎಂ. ವಿಶ್ವನಾಥ್ ಅವರು, ಮಂಡ್ಯ ಯುವ ಜನತಾದಳ ಅಧ್ಯಕ್ಷರಾದ ರವಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

9 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

9 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

9 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

9 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

9 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

9 hours ago