ಜಿಲ್ಲೆಗಳು

ಅಪ್ರಾಪ್ತೆ ಮೇಲೆ ಅತ್ಯಾಚಾರ : ಆರೋಪಿಗೆ 22 ವರ್ಷ ಜೈಲು ಶಿಕ್ಷೆ

ಮೊದಲನೇ ಅಪರಾಧಿಗೆ 22 ವರ್ಷ, 2ನೇ ಅಪರಾಧಿಗೆ 3 ವರ್ಷ ಸಜೆ

ಮಂಡ್ಯ: ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಿದ್ದು ಹಾಗೂ ಲೈಂಗಿಕ ಕಿರುಕುಳ ನೀಡಿದ್ದು ಸಾಬೀತಾದ ಹಿನ್ನೆಲೆಯಲ್ಲಿ ಮೊದಲನೇ ಅಪರಾಧಿಗೆ 22 ವರ್ಷ ಕಠಿಣ ಸಜೆ, 50 ಸಾವಿರ ರೂ. ದಂಡ ಹಾಗೂ ಆಕೆಗೆ ಲೈಂಗಿಕ ಕಿರುಕುಳ ನೀಡಿದ ಅಪರಾಧಿಗೆ 3 ವರ್ಷ ಜೈಲು ಸಜೆ ಹಾಗೂ 19 ಸಾವಿರ ರೂ. ದಂಡ ವಿಧಿಸಿ ಮಂಡ್ಯದ 2ನೇ ಅಧಿಕ ಸತ್ರ ಮತ್ತು ನ್ಯಾಯಾಲಯದ ನ್ಯಾಯಾಧೀಶರು ತೀರ್ಪು ನೀಡಿದ್ದಾರೆ.
ಮಳವಳ್ಳಿ ತಾಲ್ಲೂಕಿನ ಹಲಗೂರು ಬಳಿಯ ಗ್ರಾಮವೊಂದರ ರವಿ ಹಾಗೂ ಮಹೇಶ್ ಎಂಬವರೇ ಶಿಕ್ಷೆಗೊಳಗಾದವರು.
ಕೋವಿಡ್ ಲಾಕ್‌ಡೌನ್ ಸಮಯದಲ್ಲಿ ಪಾಲಕರು ಕೂಲಿ ಕೆಲಸಕ್ಕೆಂದು ಹೊರಗೆ ಹೋದ ವೇಳೆ 7ನೇ ತರಗತಿ ವಿದ್ಯಾರ್ಥಿನಿ ಮೇಲೆ ರವಿ ಅತ್ಯಾಚಾರ ಎಸಗಿದ್ದನು. ಈ ವಿಷಯವನ್ನು ಯಾರಿಗಾದರೂ ಹೇಳಿದರೆ ನಿಮ್ಮ ತಂದೆ-ತಾಯಿಯನ್ನು ಕೊಲೆ ಮಾಡುವುದಾಗಿ ಬೆದರಿಸಿ ದೈಹಿಕ ಸಂಪರ್ಕ ಹೊಂದಿದ್ದನು. ಪರಿಣಾಮ ಅಪ್ರಾಪ್ತೆ ಗರ್ಭಿಣಿಯಾಗಿದ್ದಳು.
ಇತ್ತ ನನ್ನೊಂದಿಗೂ ದೈಹಿಕ ಸಂಪರ್ಕಕ್ಕೆ ಸಹಕರಿಸುವಂತೆ ಮಹೇಶ್ ಕಿರುಕುಳ ನೀಡಿದ್ದನು. ಇಬ್ಬರ ವಿರುದ್ಧ ಹಲಗೂರು ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧವಾಗಿ ಇಬ್ಬರು ಆರೋಪಿಗಳ ವಿರುದ್ಧ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಕೆ.ಎ.ನಾಗಜ್ಯೋತಿ ಅವರು ಇಬ್ಬರು ಆರೋಪಿಗಳಿಗೂ ಶಿಕ್ಷೆ ಪ್ರಕಟಿಸಿದ್ದಾರೆ.
ಸರ್ಕಾರಿ ಅಭಿಯೋಜಕಿ ಪಿ.ಕೆ.ಶಕೀಲಾ ಅಬೂಬಕರ್ ಅವರು ವಾದ ಮಂಡಿಸಿದ್ದರು.

andolanait

Recent Posts

ಕರ್ನಾಟಕದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್‌ ನಿಷೇಧ: ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಿಷ್ಟು.!

ಬೆಂಗಳೂರು: ಕರ್ನಾಟಕದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್‌ ಫೋನ್‌ ಬಳಸುವುದನ್ನು ನಿಷೇಧಿಸುವ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ…

1 hour ago

ಸಿದ್ದರಾಮಯ್ಯ ಸಾಮಾಜಿಕ ನ್ಯಾಯಕ್ಕೆ ಬದ್ಧವಾಗಿದ್ದಾರೆ: ಸಚಿವ ಪರಮೇಶ್ವರ್‌

ಬೆಂಗಳೂರು: ಸಿಎಂ ಸಿದ್ದರಾಮಯ್ಯ-ಕೇಂದ್ರ ಸಚಿವ ಕುಮಾರಸ್ವಾಮಿ ನಡುವಿನ ಜಟಾಪಟಿಯಲ್ಲಿ ಸಾಮಾಜಿಕ ನ್ಯಾಯದ ಬಗ್ಗೆ ಸಿಎಂ ಸಿದ್ದರಾಮಯ್ಯ ನಿಲುವುಗಳನ್ನು ಸಚಿವ ಪರಮೇಶ್ವರ್‌…

2 hours ago

ರಾಜ್ಯದ ಪ್ರತಿ ಜಿಲ್ಲೆಯಲ್ಲಿಯೂ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ: ಸಿಎಂ ಸಿದ್ದರಾಮಯ್ಯ

ಕಾರವಾರ: ರಾಜ್ಯದ ಪ್ರತಿ ಜಿಲ್ಲೆಯಲ್ಲಿಯೂ ಬಡ ಹಾಗೂ ಸಾಮಾನ್ಯ ಜನರಿಗೆ ಕೈಗೆಟಕುವ ದರದಲ್ಲಿ ವೈದ್ಯಕೀಯ ಸೌಲಭ್ಯ ಒದಗಿಸಲು ಸೂಪರ್‌ ಸ್ಪೆಷಾಲಿಟಿ…

2 hours ago

ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್‌

ಬೆಂಗಳೂರು: ಮೈಸೂರು ಮುಡಾ ಹಗರಣದ ದೂರುದಾರ, ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್‌ ದಾಖಲಾಗಿದೆ. ಪವಿತ್ರಾ ಎಂಬ…

3 hours ago

ಪ್ರಯಾಣಿಕರಿಗೆ ಗುಡ್‌ನ್ಯೂಸ್‌ ಕೊಟ್ಟ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಸದ್ಯಕ್ಕೆ ಬಸ್‌ ಟಿಕೆಟ್‌ ದರ ಹೆಚ್ಚಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ…

3 hours ago

ಹಾಸನ| ರಸ್ತೆಯಲ್ಲಿ ಹಂಪ್ಸ್‌ ಕಾಣದೇ ದುರಂತ: ಸ್ಕೂಟರ್‌ನಿಂದ ಬಿದ್ದು ಯುವತಿ ಸಾವು

ಹಾಸನ: ರಸ್ತೆಯಲ್ಲಿ ಹಂಪ್ಸ್‌ ಕಾಣದೇ ದುರಂತ ಸಂಭವಿಸಿದ್ದು, ಸ್ಕೂಟರ್‌ನಿಂದ ಬಿದ್ದು ಯುವತಿ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿ…

3 hours ago