ಜಿಲ್ಲೆಗಳು

ಅಪ್ರಾಪ್ತೆ ಮೇಲೆ ಅತ್ಯಾಚಾರ : ಆರೋಪಿಗೆ 22 ವರ್ಷ ಜೈಲು ಶಿಕ್ಷೆ

ಮೊದಲನೇ ಅಪರಾಧಿಗೆ 22 ವರ್ಷ, 2ನೇ ಅಪರಾಧಿಗೆ 3 ವರ್ಷ ಸಜೆ

ಮಂಡ್ಯ: ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಿದ್ದು ಹಾಗೂ ಲೈಂಗಿಕ ಕಿರುಕುಳ ನೀಡಿದ್ದು ಸಾಬೀತಾದ ಹಿನ್ನೆಲೆಯಲ್ಲಿ ಮೊದಲನೇ ಅಪರಾಧಿಗೆ 22 ವರ್ಷ ಕಠಿಣ ಸಜೆ, 50 ಸಾವಿರ ರೂ. ದಂಡ ಹಾಗೂ ಆಕೆಗೆ ಲೈಂಗಿಕ ಕಿರುಕುಳ ನೀಡಿದ ಅಪರಾಧಿಗೆ 3 ವರ್ಷ ಜೈಲು ಸಜೆ ಹಾಗೂ 19 ಸಾವಿರ ರೂ. ದಂಡ ವಿಧಿಸಿ ಮಂಡ್ಯದ 2ನೇ ಅಧಿಕ ಸತ್ರ ಮತ್ತು ನ್ಯಾಯಾಲಯದ ನ್ಯಾಯಾಧೀಶರು ತೀರ್ಪು ನೀಡಿದ್ದಾರೆ.
ಮಳವಳ್ಳಿ ತಾಲ್ಲೂಕಿನ ಹಲಗೂರು ಬಳಿಯ ಗ್ರಾಮವೊಂದರ ರವಿ ಹಾಗೂ ಮಹೇಶ್ ಎಂಬವರೇ ಶಿಕ್ಷೆಗೊಳಗಾದವರು.
ಕೋವಿಡ್ ಲಾಕ್‌ಡೌನ್ ಸಮಯದಲ್ಲಿ ಪಾಲಕರು ಕೂಲಿ ಕೆಲಸಕ್ಕೆಂದು ಹೊರಗೆ ಹೋದ ವೇಳೆ 7ನೇ ತರಗತಿ ವಿದ್ಯಾರ್ಥಿನಿ ಮೇಲೆ ರವಿ ಅತ್ಯಾಚಾರ ಎಸಗಿದ್ದನು. ಈ ವಿಷಯವನ್ನು ಯಾರಿಗಾದರೂ ಹೇಳಿದರೆ ನಿಮ್ಮ ತಂದೆ-ತಾಯಿಯನ್ನು ಕೊಲೆ ಮಾಡುವುದಾಗಿ ಬೆದರಿಸಿ ದೈಹಿಕ ಸಂಪರ್ಕ ಹೊಂದಿದ್ದನು. ಪರಿಣಾಮ ಅಪ್ರಾಪ್ತೆ ಗರ್ಭಿಣಿಯಾಗಿದ್ದಳು.
ಇತ್ತ ನನ್ನೊಂದಿಗೂ ದೈಹಿಕ ಸಂಪರ್ಕಕ್ಕೆ ಸಹಕರಿಸುವಂತೆ ಮಹೇಶ್ ಕಿರುಕುಳ ನೀಡಿದ್ದನು. ಇಬ್ಬರ ವಿರುದ್ಧ ಹಲಗೂರು ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧವಾಗಿ ಇಬ್ಬರು ಆರೋಪಿಗಳ ವಿರುದ್ಧ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಕೆ.ಎ.ನಾಗಜ್ಯೋತಿ ಅವರು ಇಬ್ಬರು ಆರೋಪಿಗಳಿಗೂ ಶಿಕ್ಷೆ ಪ್ರಕಟಿಸಿದ್ದಾರೆ.
ಸರ್ಕಾರಿ ಅಭಿಯೋಜಕಿ ಪಿ.ಕೆ.ಶಕೀಲಾ ಅಬೂಬಕರ್ ಅವರು ವಾದ ಮಂಡಿಸಿದ್ದರು.

andolanait

Recent Posts

ವಿಧಾನಸಭೆಯಲ್ಲಿ ಹನೂರು ಎನ್‌ಕೌಂಟರ್‌ ಸದ್ದು: ಗದ್ದಲ ಕೋಲಾಹಲ

ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್‌ಕೌಂಟರ್‌ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್‌,…

16 mins ago

ಕಾರ್ಮಿಕರ ಮೇಲೆ ಕಾಡಾನೆ ದಾಳಿ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…

3 hours ago

ಕಾವೇರಿ ವನ್ಯಜೀವಿಧಾಮದಲ್ಲಿ ಎನ್‌ಕೌಂಟರ್: ಮೃತ 3 ಕುಟುಂಬಗಳಿಗೆ ಶಾಸಕ ಎಂ.ಆರ್. ಮಂಜುನಾಥ್ 15 ಲಕ್ಷ ಪರಿಹಾರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…

3 hours ago

ಹನೂರಿನಲ್ಲಿ ಮೂವರ ಎನ್‌ಕೌಂಟರ್ ಪ್ರಕರಣ: ಘಟನಾ ಸ್ಥಳಕ್ಕೆ ತನಿಖಾ ತಂಡ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ…

4 hours ago

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

7 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

7 hours ago