ಮೈಸೂರು: ಸಮಯಕ್ಕೆ ಸರಿಯಾಗಿ ಊಟ-ತಿಂಡಿ ದೊರೆಯದೆ ಇರುವ ಜೊತೆಗೆ ಮೂಲ ಸೌಕರ್ಯಗಳ ಕೊರತೆ ಎದುರಿಸುತ್ತಿರುವ ವಿದ್ಯಾರ್ಥಿಗಳಿಗೆ ಉಣ ಬಿಡಿಸಿದ ಬೆಳಗಿನ ಉಪಹಾರದಲ್ಲಿ ಇಲಿ ಪ್ರೈ ಮಾಡಿ ಬಡಿಸಿದ್ದು, ಇದರಿಂದಾಗಿ ಕುಪಿತಗೊಂಡ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಮೈಸೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿನಿಲಯದ ಬ್ಲಾಕ್-೨ನಲ್ಲಿ ಬುಧವಾರ ಬೆಳಿಗ್ಗೆ ಎಂದಿನಂತೆ ಬಾತ್ನ್ನು ಸಿದ್ಧಪಡಿಸಿ ವಿದ್ಯಾರ್ಥಿಗಳಿಗೆ ಕೊಡಲಾಗಿದೆ. ಕೆಲವರು ಮಾಮೂಲಿಯಂತೆ ಸವಿದರೆ, ಹಲವರಿಗೆ ಇಲಿಯ ತುಂಡುಗಳು ಕಾಣಿಸಿಕೊಂಡಿದೆ. ಇದರಿಂದ ಗಾಬರಿಗೊಂಡ ವಿದ್ಯಾರ್ಥಿಗಳು ಹಾಸ್ಟೆಲ್ನ ಅಡುಗೆ ಸಿಬ್ಬಂದಿಗೆ ತೋರಿಸಿದ್ದಾರೆ. ನಂತರ ತಿಂಡಿ ಮಾಡಿದ್ದ ಪಾತ್ರೆಗಳನ್ನು ನೋಡಿದಾಗ ಇಲಿಯು ಬಿದ್ದಿರುವುದನ್ನು ಗಮನಿಸದೆ ಹೋಗಿದ್ದರಿಂದ ಸೌಟನ್ನು ಆಡಿಸಿದ್ದರಿಂದ ಈ ರೀತಿಯಾಗಿರಬಹುದೆಂದು ಹೇಳಿ ವಾಪಸ್ ತಿಂಡಿಯನ್ನು ಪಡೆದು ಬದಲಿ ವ್ಯವಸ್ಥೆ ಮಾಡಿಕೊಡುವ ಮಾತನ್ನು ಹೇಳಿದ್ದಾರೆ. ಆದರೆ, ಕ್ಯಾಂಟೀನ್ ನಡೆಸುವವರ ಹಾಗೂ ಹಾಸ್ಟೆಲ್ ನಿರ್ವಹಣೆ ಮಾಡುವವರ ವಿರುದ್ಧ ಆಕ್ರೋಶಗೊಂಡ ವಿದ್ಯಾರ್ಥಿಗಳು ಗಂಗೋತ್ರಿ ಕ್ಯಾಂಪಸ್ನ ಪ್ರವೇಶ ದ್ವಾರದ ಎದುರು ಜಮಾಯಿಸಿ ಪ್ರತಿಭಟನೆ ನಡೆಸಿದರು.
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್.ಪುರಂ ಕ್ಷೇತ್ರದ ಶಾಸಕ ಭೈರತಿ ಬಸವರಾಜ್…
ಬೆಂಗಳೂರು: ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ಮೈಸೂರು: ಪಂಚ ಗ್ಯಾರಂಟಿಗಳನ್ನು ನೀಡಿದ ನಂತರ ರಾಜ್ಯದಲ್ಲಿ ಅಭಿವೃದ್ಧಿ ಆಗಿದೆಯೋ ಇಲ್ಲವೋ ಎಂಬ ಬಗ್ಗೆ ಸಮೀಕ್ಷೆ ನಡೆಸಲು ತಜ್ಞರ ಸಮಿತಿ…
ಹಾಸನ: ಎಟಿಎಂಗೆ ಹಣ ಹಾಕದೇ ವಂಚನೆ ಮಾಡಿದ್ದ ಸಿಎಂಎಸ್ ಕಂಪನಿಯ ಇಬ್ಬರು ಸಿಬ್ಬಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬಡಾವಣೆ ಪೊಲೀಸ್…
ಕಲಬುರ್ಗಿ: ಸಿಸಿಬಿಯಿಂದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಬಂಧನದ ಹಿಂದೆ ಸಿಎಂ ದೊಡ್ಡ ಕೈವಾಡವಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್…
ವಾಷಿಂಗ್ಟನ್: ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಲ್ಲಾ ದೇಶಗಳ ಆಮದುಗಳ ಮೇಲೆ ತಾತ್ಕಾಲಿಕವಾಗಿ 10% ಸುಂಕವನ್ನು ಘೋಷಿಸಿದ್ದಾರೆ. ಸುಪ್ರೀಂಕೋರ್ಟ್ ರದ್ದುಗೊಳಿಸಿದ…