ಮೈಸೂರು: ಸಮಯಕ್ಕೆ ಸರಿಯಾಗಿ ಊಟ-ತಿಂಡಿ ದೊರೆಯದೆ ಇರುವ ಜೊತೆಗೆ ಮೂಲ ಸೌಕರ್ಯಗಳ ಕೊರತೆ ಎದುರಿಸುತ್ತಿರುವ ವಿದ್ಯಾರ್ಥಿಗಳಿಗೆ ಉಣ ಬಿಡಿಸಿದ ಬೆಳಗಿನ ಉಪಹಾರದಲ್ಲಿ ಇಲಿ ಪ್ರೈ ಮಾಡಿ ಬಡಿಸಿದ್ದು, ಇದರಿಂದಾಗಿ ಕುಪಿತಗೊಂಡ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಮೈಸೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿನಿಲಯದ ಬ್ಲಾಕ್-೨ನಲ್ಲಿ ಬುಧವಾರ ಬೆಳಿಗ್ಗೆ ಎಂದಿನಂತೆ ಬಾತ್ನ್ನು ಸಿದ್ಧಪಡಿಸಿ ವಿದ್ಯಾರ್ಥಿಗಳಿಗೆ ಕೊಡಲಾಗಿದೆ. ಕೆಲವರು ಮಾಮೂಲಿಯಂತೆ ಸವಿದರೆ, ಹಲವರಿಗೆ ಇಲಿಯ ತುಂಡುಗಳು ಕಾಣಿಸಿಕೊಂಡಿದೆ. ಇದರಿಂದ ಗಾಬರಿಗೊಂಡ ವಿದ್ಯಾರ್ಥಿಗಳು ಹಾಸ್ಟೆಲ್ನ ಅಡುಗೆ ಸಿಬ್ಬಂದಿಗೆ ತೋರಿಸಿದ್ದಾರೆ. ನಂತರ ತಿಂಡಿ ಮಾಡಿದ್ದ ಪಾತ್ರೆಗಳನ್ನು ನೋಡಿದಾಗ ಇಲಿಯು ಬಿದ್ದಿರುವುದನ್ನು ಗಮನಿಸದೆ ಹೋಗಿದ್ದರಿಂದ ಸೌಟನ್ನು ಆಡಿಸಿದ್ದರಿಂದ ಈ ರೀತಿಯಾಗಿರಬಹುದೆಂದು ಹೇಳಿ ವಾಪಸ್ ತಿಂಡಿಯನ್ನು ಪಡೆದು ಬದಲಿ ವ್ಯವಸ್ಥೆ ಮಾಡಿಕೊಡುವ ಮಾತನ್ನು ಹೇಳಿದ್ದಾರೆ. ಆದರೆ, ಕ್ಯಾಂಟೀನ್ ನಡೆಸುವವರ ಹಾಗೂ ಹಾಸ್ಟೆಲ್ ನಿರ್ವಹಣೆ ಮಾಡುವವರ ವಿರುದ್ಧ ಆಕ್ರೋಶಗೊಂಡ ವಿದ್ಯಾರ್ಥಿಗಳು ಗಂಗೋತ್ರಿ ಕ್ಯಾಂಪಸ್ನ ಪ್ರವೇಶ ದ್ವಾರದ ಎದುರು ಜಮಾಯಿಸಿ ಪ್ರತಿಭಟನೆ ನಡೆಸಿದರು.
ಕ್ಯಾರಕಾಸ್ : ವೆನೆಜುವೆಲಾ ಕರಾವಳಿಯ ಸಮೀಪ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳು ದೇಶವನ್ನು ಬೆಚ್ಚಿಬೀಳಿಸಿವೆ. ರಿಕ್ಟರ್ ಮಾಪಕದಲ್ಲಿ…
ಪ್ರೊ.ಬಿ.ಜಯಪ್ರಕಾಶ್ಗೌಡ ಬದುಕಿದ್ದರೆ ೧೦೯ ವರ್ಷಗಳನ್ನು ಪೂರೈಸುತ್ತಿದ್ದ ಸ್ವಾತಂತ್ರ್ಯ ಹೋರಾಟಗಾರ ಪಿ. ಎನ್. ಜವರಪ್ಪಗೌಡರು ನಮಗೆಲ್ಲರಿಗೂ ಮಾರ್ಗದರ್ಶಕರಾಗಿದ್ದವರು. ಜವರಪ್ಪಗೌಡರು ಗಾಂಧೀಜಿಯಿಂದ ಪ್ರಭಾವಿತರಾಗಿದ್ದರು.…
ಹಲಗೂರು: ಸಮೀಪದ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನೀರಿನ ಪ್ರಬಲ ಸೆಳೆತಕ್ಕೆ…
ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…
ಚಾಮರಾಜನಗರ: ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…