ಮೈಸೂರು: ಸಮಯಕ್ಕೆ ಸರಿಯಾಗಿ ಊಟ-ತಿಂಡಿ ದೊರೆಯದೆ ಇರುವ ಜೊತೆಗೆ ಮೂಲ ಸೌಕರ್ಯಗಳ ಕೊರತೆ ಎದುರಿಸುತ್ತಿರುವ ವಿದ್ಯಾರ್ಥಿಗಳಿಗೆ ಉಣ ಬಿಡಿಸಿದ ಬೆಳಗಿನ ಉಪಹಾರದಲ್ಲಿ ಇಲಿ ಪ್ರೈ ಮಾಡಿ ಬಡಿಸಿದ್ದು, ಇದರಿಂದಾಗಿ ಕುಪಿತಗೊಂಡ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಮೈಸೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿನಿಲಯದ ಬ್ಲಾಕ್-೨ನಲ್ಲಿ ಬುಧವಾರ ಬೆಳಿಗ್ಗೆ ಎಂದಿನಂತೆ ಬಾತ್ನ್ನು ಸಿದ್ಧಪಡಿಸಿ ವಿದ್ಯಾರ್ಥಿಗಳಿಗೆ ಕೊಡಲಾಗಿದೆ. ಕೆಲವರು ಮಾಮೂಲಿಯಂತೆ ಸವಿದರೆ, ಹಲವರಿಗೆ ಇಲಿಯ ತುಂಡುಗಳು ಕಾಣಿಸಿಕೊಂಡಿದೆ. ಇದರಿಂದ ಗಾಬರಿಗೊಂಡ ವಿದ್ಯಾರ್ಥಿಗಳು ಹಾಸ್ಟೆಲ್ನ ಅಡುಗೆ ಸಿಬ್ಬಂದಿಗೆ ತೋರಿಸಿದ್ದಾರೆ. ನಂತರ ತಿಂಡಿ ಮಾಡಿದ್ದ ಪಾತ್ರೆಗಳನ್ನು ನೋಡಿದಾಗ ಇಲಿಯು ಬಿದ್ದಿರುವುದನ್ನು ಗಮನಿಸದೆ ಹೋಗಿದ್ದರಿಂದ ಸೌಟನ್ನು ಆಡಿಸಿದ್ದರಿಂದ ಈ ರೀತಿಯಾಗಿರಬಹುದೆಂದು ಹೇಳಿ ವಾಪಸ್ ತಿಂಡಿಯನ್ನು ಪಡೆದು ಬದಲಿ ವ್ಯವಸ್ಥೆ ಮಾಡಿಕೊಡುವ ಮಾತನ್ನು ಹೇಳಿದ್ದಾರೆ. ಆದರೆ, ಕ್ಯಾಂಟೀನ್ ನಡೆಸುವವರ ಹಾಗೂ ಹಾಸ್ಟೆಲ್ ನಿರ್ವಹಣೆ ಮಾಡುವವರ ವಿರುದ್ಧ ಆಕ್ರೋಶಗೊಂಡ ವಿದ್ಯಾರ್ಥಿಗಳು ಗಂಗೋತ್ರಿ ಕ್ಯಾಂಪಸ್ನ ಪ್ರವೇಶ ದ್ವಾರದ ಎದುರು ಜಮಾಯಿಸಿ ಪ್ರತಿಭಟನೆ ನಡೆಸಿದರು.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…