ಜಿಲ್ಲೆಗಳು

ನನ್ನಿಂದ ರಿಯಲ್ ಎಸ್ಟೇಟ್ ಮಾಡುವವರಿಗೆ ಅನುಕೂಲವಾಗಿದೆ. ಆದರೆ, ನಾನು ರಿಯಲ್ ಎಸ್ಟೇಟ್ ಮಾಡಿಲ್ಲ : ಸಂಸದ ಪ್ರತಾಪ್ ಸಿಂಹ

ಮೈಸೂರು: ನನ್ನಿಂದ ರಿಯಲ್ ಎಸ್ಟೇಟ್ ಮಾಡುವವರಿಗೆ ಅನುಕೂಲವಾಗಿದೆ. ಆದರೆ, ನಾನು ರಿಯಲ್ ಎಸ್ಟೇಟ್ ಮಾಡಿಲ್ಲ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು.
ಎಜುಕೇರ್ ಐಟಿಇಎಸ್, ವುಮೆನ್ ಕ್ಯಾನ್ ಫೌಂಡೇಶನ್ ಮತ್ತು ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜು ಸಹಯೋಗದಲ್ಲಿ ಕಾಲೇಜಿನಲ್ಲಿ ಶುಕ್ರವಾರ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಮಹಿಳಾ ಉದ್ಯೋಗ ಮೇಳ ಮತ್ತು ಮಹಿಳೆಯರು ಉತ್ಪಾದಿಸಿದ ವಸ್ತುಗಳ ಪ್ರದರ್ಶನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಪ್ರತಿಭಾವಂತ, ವಿದ್ಯಾವಂತ ಯುವ ಸಮುದಾಯಕ್ಕೆ ಉದ್ಯೋಗ ಸಿಗಬೇಕು. ಇದಕ್ಕೆ ಪೂರಕವಾಗಿ ಮೈಸೂರಿಗೆ ಕಂಪನಿಗಳು, ಕೈಗಾರಿಕೆಗಳು ಬರಬೇಕು ಎಂಬ ಉದ್ದೇಶದಿಂದ ಮೈಸೂರಿನಲ್ಲಿ ಉದ್ಯಮ ಸ್ಥಾಪನೆ, ಬೆಳವಣಿಗೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇನೆ ಎಂದರು.
೨ನೇ ಕ್ಲಾಸ್, ೪ನೇ ಕ್ಲಾಸ್ ಓದಿರುವವರು ರಿಯಲ್ ಎಸ್ಟೇಟ್ ಮಾಡ್ತಿದ್ದಾರೆ. ನಾನು ಮಾಸ್ಟರ್ ಡಿಗ್ರಿ ಮಾಡಿ ಬಂದಿದ್ದೀನಿ. ನಾನು ಮಾಡಬಹುದಿತ್ತು. ಮೈಸೂರು ಜನ ನಾನು ಇಲ್ಲಿಗೆ ಬಂದಾಗ ಪ್ರೀತಿಯಿಂದ ನನ್ನನ್ನು ಗೆಲ್ಲಿಸಿ ಕಳುಹಿಸಿಕೊಟ್ಟಿದ್ದಾರೆ. ಅವರ ಸೇವೆಯನ್ನು ಮಾಡಬೇಕು ಅನ್ನುವ ಕಾರಣಕ್ಕೆ ನಾನು ಬೆಂಗಳೂರು ಮತ್ತು ಮೈಸೂರು ೧೦ ಲೈನ್ ಹೈವೆ ತಂದಿದ್ದೀನಿ. ಹೈವೆ ಬಂದ್ರೆ ಕೈಗಾರಿಕೆಗಳು, ಕಂಪನಿಗಳು ಬರುತ್ತವೆ. ಯುವ ಸಮುದಾಯಕ್ಕೆ ಕೆಲಸ ಸಿಗಲಿದೆ ಎಂಬುದು ನನ್ನ ಉದ್ದೇಶ. ನನ್ನಿಂದ ರಿಯಲ್ ಎಸ್ಟೇಟ್ ಅವರಿಗೆ ಅನುಕೂಲವಾಗಿದೆ. ಆದರೆ, ನಾನು ರಿಯಲ್ ಎಸ್ಟೇಟ್ ಮಾಡಿಲ್ಲ ಎಂದರು.

ಮೈಸೂರು ವಿವಿ ಕೆಟ್ಟು ಹೋಗಿದೆ : ಮೈಸೂರು ವಿವಿ ಎಷ್ಟು ಕೆಟ್ಟು ಹೋಗಿದೆ ಎಂದರೆ, ಇವತ್ತು ಮಾಸ್ಟರ್ ಡಿಗ್ರಿ ಮಾಡಿದ ೧೩೦೦ ಮಂದಿ ಮೈಸೂರು ವಿವಿಯಲ್ಲಿ ಡಿ ಗ್ರೂಪ್ ನೌಕರರಾಗಿ ಇದ್ದಾರೆ. ೧೨ ಸಾವಿರ ರೂ. ಸಂಬಳಕ್ಕೆ ಲಂಚ ಕೊಟ್ಟು ಒಳಗೆ ಸೇರಿಕೊಳ್ಳುತ್ತಾರೆ. ಪ್ರತಿಯೊಂದರಲ್ಲೂ ಭ್ರಷ್ಟಚಾರ ಇದೆ. ಕೆ-ಸೆಟ್ ಪರೀಕ್ಷೆ ಮಾಡ್ತಾರೆ, ೪ ರಿಂದ ೬ ಲಕ್ಷ ರೂ.ತೆಗೆದುಕೊಂಡು ಪಾಸ್ ಮಾಡಿಕೊಡ್ತಾರೆ. ಇದನ್ನು ಕೂಡ ಯುಜಿಸಿ ಜಗದೀಶ್ ಕುಮಾರ್ ಹತ್ತಿರ ಪ್ರಸ್ತಾಪಿಸಿ ಒಂದೂವರೆ ವರ್ಷದಿಂದ ಕೆ-ಸೆಟ್ ಪರೀಕ್ಷೆ ಆಗದಂತೆ ತಡೆದಿದ್ದೇನೆ. ನಿಜವಾದ ಪ್ರತಿಭಾವಂತ ಮಕ್ಕಳಿಗೆ ಮೋಸ ಆಗಬಾರದು, ಆದ್ಯತೆ ಸಿಗಬೇಕು ಎಂಬುದು ನನ್ನ ಉದ್ದೇಶ ಎಂದರು.

andolanait

Recent Posts

ಕಳಪೆ ಪ್ರಗತಿ ಸಾಧಿಸಿದ 5 ಪಿಡಿಒಗಳಿಗೆ ಕಾರಣ ಕೇಳಿ ನೋಟಿಸ್ ನೀಡಿದ ಸಿಇಒ ನಂದಿನಿ

ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…

5 hours ago

ಅಕ್ರಮ ನಾಟ ಸಾಗಾಟ : ಲಾರಿ ಸಮೇತ ಮೂವರ ಬಂಧನ

ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…

5 hours ago

ಡೆವಿಲ್‌ ಅಬ್ಬರ | ಮೊದಲ ದಿನದ ಗಳಿಗೆ ಎಷ್ಟು?

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…

6 hours ago

ಮಳವಳ್ಳಿ | ವಿದ್ಯುತ್‌ ಸ್ಪರ್ಶ ; ಕಾರ್ಮಿಕ ಸಾವು

ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…

6 hours ago

2027ರ ಜನಗಣತಿ | 11,718 ಕೋಟಿ ನೀಡಲು ಕೇಂದ್ರ ಸಂಪುಟ ಅನುಮೋದನೆ

ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…

6 hours ago

ಇಂಡಿಗೋ ಬಿಕ್ಕಟ್ಟು | ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳ ಅಮಾನತ್ತು

ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…

6 hours ago