ಜಿಲ್ಲೆಗಳು

ನನ್ನಿಂದ ರಿಯಲ್ ಎಸ್ಟೇಟ್ ಮಾಡುವವರಿಗೆ ಅನುಕೂಲವಾಗಿದೆ. ಆದರೆ, ನಾನು ರಿಯಲ್ ಎಸ್ಟೇಟ್ ಮಾಡಿಲ್ಲ : ಸಂಸದ ಪ್ರತಾಪ್ ಸಿಂಹ

ಮೈಸೂರು: ನನ್ನಿಂದ ರಿಯಲ್ ಎಸ್ಟೇಟ್ ಮಾಡುವವರಿಗೆ ಅನುಕೂಲವಾಗಿದೆ. ಆದರೆ, ನಾನು ರಿಯಲ್ ಎಸ್ಟೇಟ್ ಮಾಡಿಲ್ಲ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು.
ಎಜುಕೇರ್ ಐಟಿಇಎಸ್, ವುಮೆನ್ ಕ್ಯಾನ್ ಫೌಂಡೇಶನ್ ಮತ್ತು ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜು ಸಹಯೋಗದಲ್ಲಿ ಕಾಲೇಜಿನಲ್ಲಿ ಶುಕ್ರವಾರ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಮಹಿಳಾ ಉದ್ಯೋಗ ಮೇಳ ಮತ್ತು ಮಹಿಳೆಯರು ಉತ್ಪಾದಿಸಿದ ವಸ್ತುಗಳ ಪ್ರದರ್ಶನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಪ್ರತಿಭಾವಂತ, ವಿದ್ಯಾವಂತ ಯುವ ಸಮುದಾಯಕ್ಕೆ ಉದ್ಯೋಗ ಸಿಗಬೇಕು. ಇದಕ್ಕೆ ಪೂರಕವಾಗಿ ಮೈಸೂರಿಗೆ ಕಂಪನಿಗಳು, ಕೈಗಾರಿಕೆಗಳು ಬರಬೇಕು ಎಂಬ ಉದ್ದೇಶದಿಂದ ಮೈಸೂರಿನಲ್ಲಿ ಉದ್ಯಮ ಸ್ಥಾಪನೆ, ಬೆಳವಣಿಗೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇನೆ ಎಂದರು.
೨ನೇ ಕ್ಲಾಸ್, ೪ನೇ ಕ್ಲಾಸ್ ಓದಿರುವವರು ರಿಯಲ್ ಎಸ್ಟೇಟ್ ಮಾಡ್ತಿದ್ದಾರೆ. ನಾನು ಮಾಸ್ಟರ್ ಡಿಗ್ರಿ ಮಾಡಿ ಬಂದಿದ್ದೀನಿ. ನಾನು ಮಾಡಬಹುದಿತ್ತು. ಮೈಸೂರು ಜನ ನಾನು ಇಲ್ಲಿಗೆ ಬಂದಾಗ ಪ್ರೀತಿಯಿಂದ ನನ್ನನ್ನು ಗೆಲ್ಲಿಸಿ ಕಳುಹಿಸಿಕೊಟ್ಟಿದ್ದಾರೆ. ಅವರ ಸೇವೆಯನ್ನು ಮಾಡಬೇಕು ಅನ್ನುವ ಕಾರಣಕ್ಕೆ ನಾನು ಬೆಂಗಳೂರು ಮತ್ತು ಮೈಸೂರು ೧೦ ಲೈನ್ ಹೈವೆ ತಂದಿದ್ದೀನಿ. ಹೈವೆ ಬಂದ್ರೆ ಕೈಗಾರಿಕೆಗಳು, ಕಂಪನಿಗಳು ಬರುತ್ತವೆ. ಯುವ ಸಮುದಾಯಕ್ಕೆ ಕೆಲಸ ಸಿಗಲಿದೆ ಎಂಬುದು ನನ್ನ ಉದ್ದೇಶ. ನನ್ನಿಂದ ರಿಯಲ್ ಎಸ್ಟೇಟ್ ಅವರಿಗೆ ಅನುಕೂಲವಾಗಿದೆ. ಆದರೆ, ನಾನು ರಿಯಲ್ ಎಸ್ಟೇಟ್ ಮಾಡಿಲ್ಲ ಎಂದರು.

ಮೈಸೂರು ವಿವಿ ಕೆಟ್ಟು ಹೋಗಿದೆ : ಮೈಸೂರು ವಿವಿ ಎಷ್ಟು ಕೆಟ್ಟು ಹೋಗಿದೆ ಎಂದರೆ, ಇವತ್ತು ಮಾಸ್ಟರ್ ಡಿಗ್ರಿ ಮಾಡಿದ ೧೩೦೦ ಮಂದಿ ಮೈಸೂರು ವಿವಿಯಲ್ಲಿ ಡಿ ಗ್ರೂಪ್ ನೌಕರರಾಗಿ ಇದ್ದಾರೆ. ೧೨ ಸಾವಿರ ರೂ. ಸಂಬಳಕ್ಕೆ ಲಂಚ ಕೊಟ್ಟು ಒಳಗೆ ಸೇರಿಕೊಳ್ಳುತ್ತಾರೆ. ಪ್ರತಿಯೊಂದರಲ್ಲೂ ಭ್ರಷ್ಟಚಾರ ಇದೆ. ಕೆ-ಸೆಟ್ ಪರೀಕ್ಷೆ ಮಾಡ್ತಾರೆ, ೪ ರಿಂದ ೬ ಲಕ್ಷ ರೂ.ತೆಗೆದುಕೊಂಡು ಪಾಸ್ ಮಾಡಿಕೊಡ್ತಾರೆ. ಇದನ್ನು ಕೂಡ ಯುಜಿಸಿ ಜಗದೀಶ್ ಕುಮಾರ್ ಹತ್ತಿರ ಪ್ರಸ್ತಾಪಿಸಿ ಒಂದೂವರೆ ವರ್ಷದಿಂದ ಕೆ-ಸೆಟ್ ಪರೀಕ್ಷೆ ಆಗದಂತೆ ತಡೆದಿದ್ದೇನೆ. ನಿಜವಾದ ಪ್ರತಿಭಾವಂತ ಮಕ್ಕಳಿಗೆ ಮೋಸ ಆಗಬಾರದು, ಆದ್ಯತೆ ಸಿಗಬೇಕು ಎಂಬುದು ನನ್ನ ಉದ್ದೇಶ ಎಂದರು.

andolanait

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

11 hours ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

12 hours ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

13 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

14 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

14 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

21 hours ago