ಭಾರತೀನಗರ: ಕರಪತ್ರ ಹಂಚಿಕೆ ಮಾಡುವ ಮೂಲಕ ಕ್ರೈಸ್ತ ಧರ್ಮಕ್ಕೆ ಮತಾಂತರಕ್ಕೆ ಪ್ರಯತ್ನಿಸುತ್ತಿದ್ದ ಐದು ಮಂದಿಯನ್ನು ಸಾರ್ವಜನಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಅಣ್ಣೂರು ಚರ್ಚ್ ಬಳಿ ನಡೆದಿದೆ.
ಗ್ರಾಮದ ಚರ್ಚ್ ಬಳಿ ಟಿ.ಎಸ್. ಕುಮಾರ್ ನಾಯಕ, ಎಸ್.ಸುಮಂತ್, ಈ.ಎನ್.
ವಿನಯ್ ಗೌಡ, ಎಸ್.ಸಂದೀಪ್, ಹೇಮಂತ್ ಕುಮಾರ್ ಎಂಬುವರು ಕ್ರೈಸ್ತರ ಪರವಾಗಿರುವ ಕರಪತ್ರಗಳನ್ನು ಸಾರ್ವಜನಿಕರಿಗೆ ನೀಡಿ ಮತಾಂತರ ಆಗುವಂತೆ ಒತ್ತಾಯಿಸುತ್ತಿದ್ದರು ಎಂದು ಸಾರ್ವಜನಿಕರು ದೂರಿದರು.
ಅಣ್ಣೂರು ರಸ್ತೆಯ ಚರ್ಚ್ ಮುಂಭಾಗದಲ್ಲಿ ಹೋಗುತ್ತಿದ್ದಾಗ ವಾಯ್ಸ್ ಆಫ್ ಜೀಸಸ್ ಪಬ್ಲಿಕೇಷನ್ ಹಾಗೂ ವಾಯ್ಸ್ ಆಫ್ ಜೀಸಸ್ ಮೀಡಿಯಾ ಹೆಸರಿನ ಕರಪತ್ರ ನೀಡಿದ್ದಾರೆ ಎಂದು ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ದೇವೇಗೌಡನದೊಡ್ಡಿ ಅಭಿ ತಿಳಿಸಿದ್ದಾರೆ.
ಕರಪತ್ರ ಹಂಚಿ ಮತಾಂತರಕ್ಕೆ ಯತ್ನಿಸುತ್ತಿದ್ದವರನ್ನು ಶಿವರಾಮ್, ರಂಜಿತ್, ನಂದೀಶ್, ಸತೋಷ್ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಸಂಬಂಧ ಕೆ.ಎಂ.ದೊಡ್ಡಿ ಠಾಣೆಯಲ್ಲಿ ದೂರು ದಾಖಲಾಗಿದೆ.
ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು…
ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಎ.ಸಿ.ಆದೇಶ…
ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ…
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಸದಸ್ಯರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಈಗ ಎಂಡಿಎ)ದಿಂದ ಕಾನೂನು ಬಾಹಿರವಾಗಿ…
ಒಮಾನ್ : ಭಾರತ ಮತ್ತು ಒಮಾನ್ ನಡುವಿನ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ (ಸಿಇಪಿಎ) ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ವಿಶ್ವಾಸ…
ಬೆಳಗಾವಿ : ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿ ವಿಳಂಬ ಮತ್ತು ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗಳು ವಿಧಾನಸಭೆಯಲ್ಲಿ ಪ್ರತಿಧ್ವನಿಸಿದವು. ಪ್ರತಿಪಕ್ಷದ ನಾಯಕ ಆರ್.ಅಶೋಕ್…