ಭಾರತೀನಗರ: ಕರಪತ್ರ ಹಂಚಿಕೆ ಮಾಡುವ ಮೂಲಕ ಕ್ರೈಸ್ತ ಧರ್ಮಕ್ಕೆ ಮತಾಂತರಕ್ಕೆ ಪ್ರಯತ್ನಿಸುತ್ತಿದ್ದ ಐದು ಮಂದಿಯನ್ನು ಸಾರ್ವಜನಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಅಣ್ಣೂರು ಚರ್ಚ್ ಬಳಿ ನಡೆದಿದೆ.
ಗ್ರಾಮದ ಚರ್ಚ್ ಬಳಿ ಟಿ.ಎಸ್. ಕುಮಾರ್ ನಾಯಕ, ಎಸ್.ಸುಮಂತ್, ಈ.ಎನ್.
ವಿನಯ್ ಗೌಡ, ಎಸ್.ಸಂದೀಪ್, ಹೇಮಂತ್ ಕುಮಾರ್ ಎಂಬುವರು ಕ್ರೈಸ್ತರ ಪರವಾಗಿರುವ ಕರಪತ್ರಗಳನ್ನು ಸಾರ್ವಜನಿಕರಿಗೆ ನೀಡಿ ಮತಾಂತರ ಆಗುವಂತೆ ಒತ್ತಾಯಿಸುತ್ತಿದ್ದರು ಎಂದು ಸಾರ್ವಜನಿಕರು ದೂರಿದರು.
ಅಣ್ಣೂರು ರಸ್ತೆಯ ಚರ್ಚ್ ಮುಂಭಾಗದಲ್ಲಿ ಹೋಗುತ್ತಿದ್ದಾಗ ವಾಯ್ಸ್ ಆಫ್ ಜೀಸಸ್ ಪಬ್ಲಿಕೇಷನ್ ಹಾಗೂ ವಾಯ್ಸ್ ಆಫ್ ಜೀಸಸ್ ಮೀಡಿಯಾ ಹೆಸರಿನ ಕರಪತ್ರ ನೀಡಿದ್ದಾರೆ ಎಂದು ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ದೇವೇಗೌಡನದೊಡ್ಡಿ ಅಭಿ ತಿಳಿಸಿದ್ದಾರೆ.
ಕರಪತ್ರ ಹಂಚಿ ಮತಾಂತರಕ್ಕೆ ಯತ್ನಿಸುತ್ತಿದ್ದವರನ್ನು ಶಿವರಾಮ್, ರಂಜಿತ್, ನಂದೀಶ್, ಸತೋಷ್ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಸಂಬಂಧ ಕೆ.ಎಂ.ದೊಡ್ಡಿ ಠಾಣೆಯಲ್ಲಿ ದೂರು ದಾಖಲಾಗಿದೆ.
ಹಾಸನ: ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಆಲೂರು ತಾಲ್ಲೂಕಿನಲ್ಲಿ ನಡೆದಿದೆ. ನೀಲಮ್ಮ ಎಂಬುವವರೇ ಸಿಡಿಲು ಬಡಿದು ಸಾವನ್ನಪ್ಪಿರುವ…
ನವದೆಹಲಿ: ಬೈಸರನ್ ವ್ಯಾಲಿಗೆ ಪ್ರವಾಸಕ್ಕೆಂದು ಹೋಗಿದ್ದಾಗ 26 ಜನರು ಸಾವನ್ನಪ್ಪಿದ್ದ ಭಯೋತ್ಪಾದಕ ದಾಳಿಗೆ ನಾಳೆ ಒಂದು ವರ್ಷ. ಭಾರತೀಯ ಸೇನೆ…
ಪಿರಿಯಾಪಟ್ಟಣ: ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ ನೀಡುತ್ತಿದ್ದೇವೆ. ನಮ್ಮ ಅಭಿವೃದ್ಧಿ ಕಾರ್ಯಗಳು ಜನರಿಗೆ ಮುಟ್ಟಿವೆ. ಜನ ನಮ್ಮ…
ಶ್ರೀರಂಗಪಟ್ಟಣ: ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರಲು ಬೇಸಿಗೆ ಶಿಬಿರಗಳು ಅತ್ಯುತ್ತಮ ವೇದಿಕೆಯಾಗಿದ್ದು, ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಮಕ್ಕಳ ವ್ಯಕ್ತಿತ್ವ…
ತಿರುವನಂತಪುರಂ: ಕೇರಳದ ತ್ರಿಶೂರ್ ಪುರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಶ್ರೀ ಆದಿಶಕ್ತಿ ಮಾರಮ್ಮ ಜಾತ್ರಾ…