ಭಾರತೀನಗರ: ಕರಪತ್ರ ಹಂಚಿಕೆ ಮಾಡುವ ಮೂಲಕ ಕ್ರೈಸ್ತ ಧರ್ಮಕ್ಕೆ ಮತಾಂತರಕ್ಕೆ ಪ್ರಯತ್ನಿಸುತ್ತಿದ್ದ ಐದು ಮಂದಿಯನ್ನು ಸಾರ್ವಜನಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಅಣ್ಣೂರು ಚರ್ಚ್ ಬಳಿ ನಡೆದಿದೆ.
ಗ್ರಾಮದ ಚರ್ಚ್ ಬಳಿ ಟಿ.ಎಸ್. ಕುಮಾರ್ ನಾಯಕ, ಎಸ್.ಸುಮಂತ್, ಈ.ಎನ್.
ವಿನಯ್ ಗೌಡ, ಎಸ್.ಸಂದೀಪ್, ಹೇಮಂತ್ ಕುಮಾರ್ ಎಂಬುವರು ಕ್ರೈಸ್ತರ ಪರವಾಗಿರುವ ಕರಪತ್ರಗಳನ್ನು ಸಾರ್ವಜನಿಕರಿಗೆ ನೀಡಿ ಮತಾಂತರ ಆಗುವಂತೆ ಒತ್ತಾಯಿಸುತ್ತಿದ್ದರು ಎಂದು ಸಾರ್ವಜನಿಕರು ದೂರಿದರು.
ಅಣ್ಣೂರು ರಸ್ತೆಯ ಚರ್ಚ್ ಮುಂಭಾಗದಲ್ಲಿ ಹೋಗುತ್ತಿದ್ದಾಗ ವಾಯ್ಸ್ ಆಫ್ ಜೀಸಸ್ ಪಬ್ಲಿಕೇಷನ್ ಹಾಗೂ ವಾಯ್ಸ್ ಆಫ್ ಜೀಸಸ್ ಮೀಡಿಯಾ ಹೆಸರಿನ ಕರಪತ್ರ ನೀಡಿದ್ದಾರೆ ಎಂದು ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ದೇವೇಗೌಡನದೊಡ್ಡಿ ಅಭಿ ತಿಳಿಸಿದ್ದಾರೆ.
ಕರಪತ್ರ ಹಂಚಿ ಮತಾಂತರಕ್ಕೆ ಯತ್ನಿಸುತ್ತಿದ್ದವರನ್ನು ಶಿವರಾಮ್, ರಂಜಿತ್, ನಂದೀಶ್, ಸತೋಷ್ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಸಂಬಂಧ ಕೆ.ಎಂ.ದೊಡ್ಡಿ ಠಾಣೆಯಲ್ಲಿ ದೂರು ದಾಖಲಾಗಿದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…