ಭಾರತೀನಗರ: ಕರಪತ್ರ ಹಂಚಿಕೆ ಮಾಡುವ ಮೂಲಕ ಕ್ರೈಸ್ತ ಧರ್ಮಕ್ಕೆ ಮತಾಂತರಕ್ಕೆ ಪ್ರಯತ್ನಿಸುತ್ತಿದ್ದ ಐದು ಮಂದಿಯನ್ನು ಸಾರ್ವಜನಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಅಣ್ಣೂರು ಚರ್ಚ್ ಬಳಿ ನಡೆದಿದೆ.
ಗ್ರಾಮದ ಚರ್ಚ್ ಬಳಿ ಟಿ.ಎಸ್. ಕುಮಾರ್ ನಾಯಕ, ಎಸ್.ಸುಮಂತ್, ಈ.ಎನ್.
ವಿನಯ್ ಗೌಡ, ಎಸ್.ಸಂದೀಪ್, ಹೇಮಂತ್ ಕುಮಾರ್ ಎಂಬುವರು ಕ್ರೈಸ್ತರ ಪರವಾಗಿರುವ ಕರಪತ್ರಗಳನ್ನು ಸಾರ್ವಜನಿಕರಿಗೆ ನೀಡಿ ಮತಾಂತರ ಆಗುವಂತೆ ಒತ್ತಾಯಿಸುತ್ತಿದ್ದರು ಎಂದು ಸಾರ್ವಜನಿಕರು ದೂರಿದರು.
ಅಣ್ಣೂರು ರಸ್ತೆಯ ಚರ್ಚ್ ಮುಂಭಾಗದಲ್ಲಿ ಹೋಗುತ್ತಿದ್ದಾಗ ವಾಯ್ಸ್ ಆಫ್ ಜೀಸಸ್ ಪಬ್ಲಿಕೇಷನ್ ಹಾಗೂ ವಾಯ್ಸ್ ಆಫ್ ಜೀಸಸ್ ಮೀಡಿಯಾ ಹೆಸರಿನ ಕರಪತ್ರ ನೀಡಿದ್ದಾರೆ ಎಂದು ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ದೇವೇಗೌಡನದೊಡ್ಡಿ ಅಭಿ ತಿಳಿಸಿದ್ದಾರೆ.
ಕರಪತ್ರ ಹಂಚಿ ಮತಾಂತರಕ್ಕೆ ಯತ್ನಿಸುತ್ತಿದ್ದವರನ್ನು ಶಿವರಾಮ್, ರಂಜಿತ್, ನಂದೀಶ್, ಸತೋಷ್ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಸಂಬಂಧ ಕೆ.ಎಂ.ದೊಡ್ಡಿ ಠಾಣೆಯಲ್ಲಿ ದೂರು ದಾಖಲಾಗಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…