ಜಿಲ್ಲೆಗಳು

ಸ್ವಾತಂತ್ರ್ಯ ಹೋರಾಟಗಾರ್ತಿ ಕುಯಿಲಿ ಸಂಸ್ಮರಣೆ

ಶ್ರೀರಂಗಪಟ್ಟಣ: ಪಟ್ಟಣದಲ್ಲಿ ಸ್ವಾತಂತ್ರ್ಯ ಹೋರಾಟಗಾರ್ತಿ ಕುಯಿಲಿ ಅವರ ಸಂಸ್ಮರಣೆ ಕಾರ್ಯಕ್ರಮ ನಡೆಯಿತು.

ಪಟ್ಟಣದ ಪುರಸಭೆ ವೃತ್ತದಲ್ಲಿ ಅರುಂಧತಿಯ ಮಹಾಸಭಾ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಕುಯಿಲಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ಕುಯಿಲಿ ಪರ ಘೋಷಣೆಗಳು ಮೊಳಗಿದವು. ಇದಕ್ಕೂ ಮುನ್ನ ಗಾಂಧಿನಗರದಿಂದ ಪುರಸಭೆ ವೃತ್ತದವರೆಗೆ ಕುಯಿಲಿ ಅವರ ಭಾವಚಿತ್ರದ ಮೆರವಣಿಗೆ ನಡೆಯಿತು.

ಅರುಂಧತಿ ಮಹಾಸಭಾ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಪುರಸಭೆ ವಾಜಿ ಅಧ್ಯಕ್ಷ ಆರ್.ಕೃಷ್ಣ ಮಾತನಾಡಿ, ಕುಯಿಲಿ ಅವರು ೧೬ನೇ ಶತಮಾನದಲ್ಲಿ ಬ್ರಿಟಿಷರ ವಿರುದ್ಧ ಹೋರಾಡಿದ ದಿಟ್ಟ ಮಹಿಳೆ. ಆರ್ಕಾಟ ನವಾಬನ ಜತೆ ಸೇರಿ ಬ್ರಿಟಿಷರು ನೀಡುತ್ತಿದ್ದ ಉಪಟಳವನ್ನು ತಪ್ಪಿಸಲು ಅರುಂಧತಿಯ ಸಮಾಜದ ಕುಯಿಲಿ ಯುದ್ಧ ಸಾಮಗ್ರಿಗಳನ್ನು ನಾಶ ಮಾಡಿ ಪ್ರಾಣಾರ್ಪಣೆ ಮಾಡಿದ್ದಾರೆ. ವಿಜಯದಶಮಿ ದಿನ ಅವರ ಬಲಿದಾನವಾಗಿದ್ದು, ಅವರ ನೆನಪಿಗಾಗಿ ಸರ್ಕಾರ ಇನ್ನು ಮುಂದೆ ವಿಜುಂದಶಮಿ ದಿನ ಕಾರ್ಯಕ್ರಮ ರೂಪಿಸಬೇಕು ಎಂದು ಒತ್ತಾಯಿಸಿದರು.

ಅರುಂಧತಿ ಮಹಾಸಭಾದ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ರಂಗಸ್ವಾಮಿ, ಹಾಸನ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀನಿವಾಸ್, ಅರಕಲಗೂಡು ತಾಲ್ಲೂಕು ಘಟಕದ ಅಧ್ಯಕ್ಷ ನಾಗರಾಜು, ಕೆ.ಆರ್.ಪೇಟೆ ತಾಲ್ಲೂಕು ಘಟಕದ ಅಧ್ಯಕ್ಷ ನಾಗರಾಜು, ಕೊಡ್ಲಿಪೇಟೆ ರಂಗಸ್ವಾಮಿ, ಮಳವಳ್ಳಿ ನಾಗರಾಜು, ಮಹಿಳಾ ಘಟಕದ ಅಧ್ಯಕ್ಷರಾದ ಕೆ.ರೇಖಾ, ಮುಖಂಡರಾದ ಆರ್.ವಾದೇಶ್ವರ, ಸತೀಶ್, ಮಹೇಶ್, ವಿಜ್‌ಂ, ನವೀನ್, ರಾಜೇಶ್ವರಿ, ಚೆಲುವಮ್ಮ ಹಾಗೂ ಮಾದಮ್ಮ ಮತ್ತಿತರರು ಭಾಗವಹಿಸಿದ್ದರು.

andolana

Recent Posts

ಯಾಲಕ್ಕೂರು, ಸುತ್ತಲಿನ ಗ್ರಾಮಗಳಿಗೆ ಬಂತು ಸಾರಿಗೆ ಬಸ್ಸು!

ಚಾಮರಾಜನಗರ: ತಾಲ್ಲೂಕಿನ ಯಾಲಕ್ಕೂರು ಹಾಗೂ ಸುತ್ತಮುತ್ತಲಿನ ಆರು ಗ್ರಾಮಗಳಿಗೆ ಸಾರಿಗೆ ಬಸ್ಸೇ ಇಲ್ಲ ಎಂದು ‘ಆಂದೋಲನ ಪತ್ರಿಕೆ’ಯಲ್ಲಿ ಈಚೆಗೆ ಪ್ರಕಟವಾಗಿದ್ದ…

3 hours ago

ಓದುಗರ ಪತ್ರ: ಬಿಸಿಲಲ್ಲೋ ಅಣ್ಣಾ..!

ಬಿಸಿಲಲ್ಲೋ ಅಣ್ಣ ಇದು ಬರಿ ಬಿಸಿಲಲ್ಲೋ ! ಯಾರು ಹೆಸರಿಟ್ಟರೋ? ಇದಕ್ಕೆ ‘ನಿಲ್ಲೋ ಎಲ್ಲೋ’ ನಿಂತಲ್ಲಿ ನಿಲ್ಲಲು, ಕುಂತಲ್ಲಿ ಕೂರಲು…

3 hours ago

ಓದುಗರ ಪತ್ರ: ಸರ್ಕಾರಿ ಶಾಲೆಗಳ ಅಭಿವೃದ್ಧಿ ಸ್ವಾಗತಾರ್ಹ

ರಾಜ್ಯದ ಸರ್ಕಾರಿ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳ ಬಲವರ್ಧನೆಗೆ ಸರ್ಕಾರ ಮುಂದಾಗಿರುವುದು ಅತ್ಯಂತ ಸಂತೋಷ ಮತ್ತು ಹೆಮ್ಮೆಯ ಸಂಗತಿ. ಮೂಲಸೌಕರ್ಯದ…

3 hours ago

ಓದುಗರ ಪತ್ರ: ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕವಾಗುವ ಇಂಟರ್ನಲ್ಸ್ ಅಂಕಗಳು

ಮಕ್ಕಳು ಬೋರ್ಡ್ ಪರೀಕ್ಷೆಗಳಲ್ಲಿ ಅಂಕಗಳನ್ನು ತೆಗೆಯುವ ಅರ್ಹತೆ ಇದ್ದರೂ, ಇಂಟರ್ನಲ್ಸ್ ಮಾರ್ಕ್ಸ್(ಆಂತರಿಕ ಅಂಕ) ಎಂಬ ಭೂತದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇತ್ತೀಚೆಗೆ…

3 hours ago

ನಾವಿಕನೇ ಇಲ್ಲದ ಕೊಡಗು ಪ್ರವಾಸೋದ್ಯಮ ಇಲಾಖೆ..!

ಪುನೀತ್ ಮಡಿಕೇರಿ ಇಲಾಖೆಯಲ್ಲಿ ಸಿಬ್ಬಂದಿ ನೇಮಕಕ್ಕೆ ಪ್ರವಾಸೋದ್ಯಮಿಗಳ ಆಗ್ರಹ  ಮಡಿಕೇರಿ: ಕೊಡಗಿನಲ್ಲಿ ಪ್ರವಾಸೋದ್ಯಮ ಇಲಾಖೆಯನ್ನು ಮುನ್ನಡೆಸಲು ನಾವಿಕನೇ ಇಲ್ಲದಾಗಿದ್ದು, ಕಳೆದ ಒಂದು ವರ್ಷದಿಂದ…

3 hours ago