ಶ್ರೀರಂಗಪಟ್ಟಣ: ಪಟ್ಟಣದಲ್ಲಿ ಸ್ವಾತಂತ್ರ್ಯ ಹೋರಾಟಗಾರ್ತಿ ಕುಯಿಲಿ ಅವರ ಸಂಸ್ಮರಣೆ ಕಾರ್ಯಕ್ರಮ ನಡೆಯಿತು.
ಪಟ್ಟಣದ ಪುರಸಭೆ ವೃತ್ತದಲ್ಲಿ ಅರುಂಧತಿಯ ಮಹಾಸಭಾ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಕುಯಿಲಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ಕುಯಿಲಿ ಪರ ಘೋಷಣೆಗಳು ಮೊಳಗಿದವು. ಇದಕ್ಕೂ ಮುನ್ನ ಗಾಂಧಿನಗರದಿಂದ ಪುರಸಭೆ ವೃತ್ತದವರೆಗೆ ಕುಯಿಲಿ ಅವರ ಭಾವಚಿತ್ರದ ಮೆರವಣಿಗೆ ನಡೆಯಿತು.
ಅರುಂಧತಿ ಮಹಾಸಭಾ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಪುರಸಭೆ ವಾಜಿ ಅಧ್ಯಕ್ಷ ಆರ್.ಕೃಷ್ಣ ಮಾತನಾಡಿ, ಕುಯಿಲಿ ಅವರು ೧೬ನೇ ಶತಮಾನದಲ್ಲಿ ಬ್ರಿಟಿಷರ ವಿರುದ್ಧ ಹೋರಾಡಿದ ದಿಟ್ಟ ಮಹಿಳೆ. ಆರ್ಕಾಟ ನವಾಬನ ಜತೆ ಸೇರಿ ಬ್ರಿಟಿಷರು ನೀಡುತ್ತಿದ್ದ ಉಪಟಳವನ್ನು ತಪ್ಪಿಸಲು ಅರುಂಧತಿಯ ಸಮಾಜದ ಕುಯಿಲಿ ಯುದ್ಧ ಸಾಮಗ್ರಿಗಳನ್ನು ನಾಶ ಮಾಡಿ ಪ್ರಾಣಾರ್ಪಣೆ ಮಾಡಿದ್ದಾರೆ. ವಿಜಯದಶಮಿ ದಿನ ಅವರ ಬಲಿದಾನವಾಗಿದ್ದು, ಅವರ ನೆನಪಿಗಾಗಿ ಸರ್ಕಾರ ಇನ್ನು ಮುಂದೆ ವಿಜುಂದಶಮಿ ದಿನ ಕಾರ್ಯಕ್ರಮ ರೂಪಿಸಬೇಕು ಎಂದು ಒತ್ತಾಯಿಸಿದರು.
ಅರುಂಧತಿ ಮಹಾಸಭಾದ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ರಂಗಸ್ವಾಮಿ, ಹಾಸನ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀನಿವಾಸ್, ಅರಕಲಗೂಡು ತಾಲ್ಲೂಕು ಘಟಕದ ಅಧ್ಯಕ್ಷ ನಾಗರಾಜು, ಕೆ.ಆರ್.ಪೇಟೆ ತಾಲ್ಲೂಕು ಘಟಕದ ಅಧ್ಯಕ್ಷ ನಾಗರಾಜು, ಕೊಡ್ಲಿಪೇಟೆ ರಂಗಸ್ವಾಮಿ, ಮಳವಳ್ಳಿ ನಾಗರಾಜು, ಮಹಿಳಾ ಘಟಕದ ಅಧ್ಯಕ್ಷರಾದ ಕೆ.ರೇಖಾ, ಮುಖಂಡರಾದ ಆರ್.ವಾದೇಶ್ವರ, ಸತೀಶ್, ಮಹೇಶ್, ವಿಜ್ಂ, ನವೀನ್, ರಾಜೇಶ್ವರಿ, ಚೆಲುವಮ್ಮ ಹಾಗೂ ಮಾದಮ್ಮ ಮತ್ತಿತರರು ಭಾಗವಹಿಸಿದ್ದರು.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…