ಜಿಲ್ಲೆಗಳು

ಸ್ವಾತಂತ್ರ್ಯ ಹೋರಾಟಗಾರ್ತಿ ಕುಯಿಲಿ ಸಂಸ್ಮರಣೆ

ಶ್ರೀರಂಗಪಟ್ಟಣ: ಪಟ್ಟಣದಲ್ಲಿ ಸ್ವಾತಂತ್ರ್ಯ ಹೋರಾಟಗಾರ್ತಿ ಕುಯಿಲಿ ಅವರ ಸಂಸ್ಮರಣೆ ಕಾರ್ಯಕ್ರಮ ನಡೆಯಿತು.

ಪಟ್ಟಣದ ಪುರಸಭೆ ವೃತ್ತದಲ್ಲಿ ಅರುಂಧತಿಯ ಮಹಾಸಭಾ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಕುಯಿಲಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ಕುಯಿಲಿ ಪರ ಘೋಷಣೆಗಳು ಮೊಳಗಿದವು. ಇದಕ್ಕೂ ಮುನ್ನ ಗಾಂಧಿನಗರದಿಂದ ಪುರಸಭೆ ವೃತ್ತದವರೆಗೆ ಕುಯಿಲಿ ಅವರ ಭಾವಚಿತ್ರದ ಮೆರವಣಿಗೆ ನಡೆಯಿತು.

ಅರುಂಧತಿ ಮಹಾಸಭಾ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಪುರಸಭೆ ವಾಜಿ ಅಧ್ಯಕ್ಷ ಆರ್.ಕೃಷ್ಣ ಮಾತನಾಡಿ, ಕುಯಿಲಿ ಅವರು ೧೬ನೇ ಶತಮಾನದಲ್ಲಿ ಬ್ರಿಟಿಷರ ವಿರುದ್ಧ ಹೋರಾಡಿದ ದಿಟ್ಟ ಮಹಿಳೆ. ಆರ್ಕಾಟ ನವಾಬನ ಜತೆ ಸೇರಿ ಬ್ರಿಟಿಷರು ನೀಡುತ್ತಿದ್ದ ಉಪಟಳವನ್ನು ತಪ್ಪಿಸಲು ಅರುಂಧತಿಯ ಸಮಾಜದ ಕುಯಿಲಿ ಯುದ್ಧ ಸಾಮಗ್ರಿಗಳನ್ನು ನಾಶ ಮಾಡಿ ಪ್ರಾಣಾರ್ಪಣೆ ಮಾಡಿದ್ದಾರೆ. ವಿಜಯದಶಮಿ ದಿನ ಅವರ ಬಲಿದಾನವಾಗಿದ್ದು, ಅವರ ನೆನಪಿಗಾಗಿ ಸರ್ಕಾರ ಇನ್ನು ಮುಂದೆ ವಿಜುಂದಶಮಿ ದಿನ ಕಾರ್ಯಕ್ರಮ ರೂಪಿಸಬೇಕು ಎಂದು ಒತ್ತಾಯಿಸಿದರು.

ಅರುಂಧತಿ ಮಹಾಸಭಾದ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ರಂಗಸ್ವಾಮಿ, ಹಾಸನ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀನಿವಾಸ್, ಅರಕಲಗೂಡು ತಾಲ್ಲೂಕು ಘಟಕದ ಅಧ್ಯಕ್ಷ ನಾಗರಾಜು, ಕೆ.ಆರ್.ಪೇಟೆ ತಾಲ್ಲೂಕು ಘಟಕದ ಅಧ್ಯಕ್ಷ ನಾಗರಾಜು, ಕೊಡ್ಲಿಪೇಟೆ ರಂಗಸ್ವಾಮಿ, ಮಳವಳ್ಳಿ ನಾಗರಾಜು, ಮಹಿಳಾ ಘಟಕದ ಅಧ್ಯಕ್ಷರಾದ ಕೆ.ರೇಖಾ, ಮುಖಂಡರಾದ ಆರ್.ವಾದೇಶ್ವರ, ಸತೀಶ್, ಮಹೇಶ್, ವಿಜ್‌ಂ, ನವೀನ್, ರಾಜೇಶ್ವರಿ, ಚೆಲುವಮ್ಮ ಹಾಗೂ ಮಾದಮ್ಮ ಮತ್ತಿತರರು ಭಾಗವಹಿಸಿದ್ದರು.

andolana

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

23 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

23 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

23 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

24 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

24 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

24 hours ago