ಮೈಸೂರು : ಚೀನಿ ಎಂದೇ ನಾಡಿನಾದ್ಯಂತ ಹೆಸರುವಾಸಿಯಾಗಿದ್ದ ಪ್ರಖ್ಯಾತ ರಂಗ ಸಂಗೀತ ನಿರ್ದೇಶಕ ಶ್ರೀನಿವಾಸ ಭಟ್ (63) ಹೃದಯಾಘಾತದಿಂದ ಬುಧವಾರ ರಾತ್ರಿ ಮೈಸೂರಿನಲ್ಲಿ ನಿಧನರಾದರು.
ಉಡುಪಿ ಜಿಲ್ಲೆಯಲ್ಲಿ ಜನಿಸಿದ ಶ್ರೀನಿವಾಸ ಭಟ್ ಬಾಲ್ಯದಲ್ಲಿಯೇ ಸಂಗೀತದಲ್ಲಿ ಆಸಕ್ತಿ ಹೊಂದಿದ್ದರು. ಸುಮಾರು 30 ವರ್ಷಗಳ ಕಾಲ ರಂಗ ಸಂಗೀತದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಹಲವಾರು ತಂಡಗಳ ನಾಟಕಗಳಿಗೆ ಸಂಗೀತ ನಿರ್ದೇಶನ ನೀಡಿದ ಕೀರ್ತಿ ಇವರಿಗೆ ಸಲ್ಲುತ್ತದೆ. ರಂಗಾಯಣಕ್ಕೆ ಬರುವ ಮೊದಲು ಉಡುಪಿಯಲ್ಲಿ ರಥಬೀದಿ ಗೆಳೆಯರ ನಾಟಕಗಳಿಗೆ ರಂಗ ಸಂಗೀತ ನೀಡುತ್ತಿದ್ದರು.
ಬಿವಿ ಕಾರಂತರ ಮೆಚ್ಚಿನ ಶಿಷ್ಯರಾಗಿದ್ದ ಚೀನಿಯವರು ‘ಕಾರಂತ ಸಂಗೀತ’ ಮಾದರಿಯನ್ನು ರಂಗಭೂಮಿಯಲ್ಲಿ ಮುಂದುವರಿಸಿದ್ದರು. ನೀನಾಸಂನಲ್ಲಿಯೂ ತಮ್ಮನ್ನು ತೊಡಗಿಸಿಕೊಂಡಿದ್ದರು. ಗಿಟಾರ್, ಹಾರ್ಮೊನಿಯಂ ಹಾಗೂ ತಾಳವಾದ್ಯಗಳಲ್ಲಿ ಇವರನ್ನು ಮೀರಿಸುವವರು ಯಾರು ಇರಲಿಲ್ಲ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.
ತಮ್ಮ ಸಂಗೀತದ ಮೂಲಕ ರಂಗಭೂಮಿಗೆ ಕಳೆ ತುಂಬಿದ್ದ ಚೀನಿಯವರ ಅಗಲಿಕೆ ಅಪಾರ ರಂಗಭೂಮಿ ಕಲಾವಿದರಿಗೆ ನೋವುಂಟು ಮಾಡಿದೆ.
ಕೃಷಿ ಚಳವಳಿಯ ಪ್ರಮುಖ ನಾಯಕರಾದ ರಾಕೇಶ್ ಟಿಕಾಯತ್ ಹಾಗೂ ಸಂಯುಕ್ತ ಕಿಸಾನ್ ಮೋರ್ಚಾದ ಪ್ರಮುಖ ಮುಖಂಡರಾದ ಯುದ್ಧವೀರ್ ಸಿಂಗ್…
ಹತ್ತಿ ಬೆಳೆಗಾರರು ರಾಜ್ಯದಲ್ಲಿ ವಾರ್ಷಿಕ ಸುಮಾರು 200 ಕೋಟಿ ರೂ.ಗೂ ಅಧಿಕ ನಷ್ಟ ಅನುಭವಿಸುತ್ತಿದ್ದಾರೆ. ಬಿತ್ತನೆ ಬೀಜ ಮಾರಾಟ ಮಾಡುವ…
ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…
ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…
ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…