ಜಿಲ್ಲೆಗಳು

ಖ್ಯಾತ ಸಂಗೀತ ನಿರ್ದೇಶಕ ಶ್ರೀನಿವಾಸ ಭಟ್‌ ಇನ್ನಿಲ್ಲ

ಮೈಸೂರು : ಚೀನಿ ಎಂದೇ ನಾಡಿನಾದ್ಯಂತ ಹೆಸರುವಾಸಿಯಾಗಿದ್ದ ಪ್ರಖ್ಯಾತ ರಂಗ ಸಂಗೀತ ನಿರ್ದೇಶಕ ಶ್ರೀನಿವಾಸ ಭಟ್‌ (63) ಹೃದಯಾಘಾತದಿಂದ ಬುಧವಾರ ರಾತ್ರಿ ಮೈಸೂರಿನಲ್ಲಿ ನಿಧನರಾದರು.

ಉಡುಪಿ ಜಿಲ್ಲೆಯಲ್ಲಿ ಜನಿಸಿದ ಶ್ರೀನಿವಾಸ ಭಟ್‌ ಬಾಲ್ಯದಲ್ಲಿಯೇ ಸಂಗೀತದಲ್ಲಿ ಆಸಕ್ತಿ ಹೊಂದಿದ್ದರು. ಸುಮಾರು 30 ವರ್ಷಗಳ ಕಾಲ ರಂಗ ಸಂಗೀತದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಹಲವಾರು ತಂಡಗಳ ನಾಟಕಗಳಿಗೆ ಸಂಗೀತ ನಿರ್ದೇಶನ ನೀಡಿದ ಕೀರ್ತಿ ಇವರಿಗೆ ಸಲ್ಲುತ್ತದೆ. ರಂಗಾಯಣಕ್ಕೆ ಬರುವ ಮೊದಲು ಉಡುಪಿಯಲ್ಲಿ ರಥಬೀದಿ ಗೆಳೆಯರ ನಾಟಕಗಳಿಗೆ ರಂಗ ಸಂಗೀತ ನೀಡುತ್ತಿದ್ದರು.
ಬಿವಿ ಕಾರಂತರ ಮೆಚ್ಚಿನ ಶಿಷ್ಯರಾಗಿದ್ದ ಚೀನಿಯವರು ‘ಕಾರಂತ ಸಂಗೀತ’ ಮಾದರಿಯನ್ನು ರಂಗಭೂಮಿಯಲ್ಲಿ ಮುಂದುವರಿಸಿದ್ದರು. ನೀನಾಸಂನಲ್ಲಿಯೂ ತಮ್ಮನ್ನು ತೊಡಗಿಸಿಕೊಂಡಿದ್ದರು. ಗಿಟಾರ್, ಹಾರ್ಮೊನಿಯಂ ಹಾಗೂ ತಾಳವಾದ್ಯಗಳಲ್ಲಿ ಇವರನ್ನು ಮೀರಿಸುವವರು ಯಾರು ಇರಲಿಲ್ಲ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.

ತಮ್ಮ ಸಂಗೀತದ ಮೂಲಕ ರಂಗಭೂಮಿಗೆ ಕಳೆ ತುಂಬಿದ್ದ ಚೀನಿಯವರ ಅಗಲಿಕೆ ಅಪಾರ ರಂಗಭೂಮಿ ಕಲಾವಿದರಿಗೆ ನೋವುಂಟು ಮಾಡಿದೆ.

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

5 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

5 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

5 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

5 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

5 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

5 hours ago