ಜಿಲ್ಲೆಗಳು

ಖ್ಯಾತ ಸಂಗೀತ ನಿರ್ದೇಶಕ ಶ್ರೀನಿವಾಸ ಭಟ್‌ ಇನ್ನಿಲ್ಲ

ಮೈಸೂರು : ಚೀನಿ ಎಂದೇ ನಾಡಿನಾದ್ಯಂತ ಹೆಸರುವಾಸಿಯಾಗಿದ್ದ ಪ್ರಖ್ಯಾತ ರಂಗ ಸಂಗೀತ ನಿರ್ದೇಶಕ ಶ್ರೀನಿವಾಸ ಭಟ್‌ (63) ಹೃದಯಾಘಾತದಿಂದ ಬುಧವಾರ ರಾತ್ರಿ ಮೈಸೂರಿನಲ್ಲಿ ನಿಧನರಾದರು.

ಉಡುಪಿ ಜಿಲ್ಲೆಯಲ್ಲಿ ಜನಿಸಿದ ಶ್ರೀನಿವಾಸ ಭಟ್‌ ಬಾಲ್ಯದಲ್ಲಿಯೇ ಸಂಗೀತದಲ್ಲಿ ಆಸಕ್ತಿ ಹೊಂದಿದ್ದರು. ಸುಮಾರು 30 ವರ್ಷಗಳ ಕಾಲ ರಂಗ ಸಂಗೀತದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಹಲವಾರು ತಂಡಗಳ ನಾಟಕಗಳಿಗೆ ಸಂಗೀತ ನಿರ್ದೇಶನ ನೀಡಿದ ಕೀರ್ತಿ ಇವರಿಗೆ ಸಲ್ಲುತ್ತದೆ. ರಂಗಾಯಣಕ್ಕೆ ಬರುವ ಮೊದಲು ಉಡುಪಿಯಲ್ಲಿ ರಥಬೀದಿ ಗೆಳೆಯರ ನಾಟಕಗಳಿಗೆ ರಂಗ ಸಂಗೀತ ನೀಡುತ್ತಿದ್ದರು.
ಬಿವಿ ಕಾರಂತರ ಮೆಚ್ಚಿನ ಶಿಷ್ಯರಾಗಿದ್ದ ಚೀನಿಯವರು ‘ಕಾರಂತ ಸಂಗೀತ’ ಮಾದರಿಯನ್ನು ರಂಗಭೂಮಿಯಲ್ಲಿ ಮುಂದುವರಿಸಿದ್ದರು. ನೀನಾಸಂನಲ್ಲಿಯೂ ತಮ್ಮನ್ನು ತೊಡಗಿಸಿಕೊಂಡಿದ್ದರು. ಗಿಟಾರ್, ಹಾರ್ಮೊನಿಯಂ ಹಾಗೂ ತಾಳವಾದ್ಯಗಳಲ್ಲಿ ಇವರನ್ನು ಮೀರಿಸುವವರು ಯಾರು ಇರಲಿಲ್ಲ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.

ತಮ್ಮ ಸಂಗೀತದ ಮೂಲಕ ರಂಗಭೂಮಿಗೆ ಕಳೆ ತುಂಬಿದ್ದ ಚೀನಿಯವರ ಅಗಲಿಕೆ ಅಪಾರ ರಂಗಭೂಮಿ ಕಲಾವಿದರಿಗೆ ನೋವುಂಟು ಮಾಡಿದೆ.

andolanait

Recent Posts

ಸಂಪ್‌ಗೆ ಬಿದ್ದು ಎರಡು ವರ್ಷದ ಮಗು ಸಾವು

ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್‌ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

10 hours ago

ಬಸ್-ಲಾರಿ ನಡುವೆ ಡಿಕ್ಕಿ; ಹಲವರಿಗೆ ಗಾಯ

ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್‌ಟಿಸಿ ಬಸ್…

10 hours ago

ಸಿಡಿಲು ಬಡಿದು ರೈತ ಸಾವು

ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಎಸ್.ಟಿ.ಆನಂದ್ (೬೦)…

11 hours ago

ಟಾಟಾ ಏಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ…

11 hours ago

ಒಂದು ವಾರ ವಿದೇಶಕ್ಕೆ ಹಾರಿದ ಪ್ರಧಾನಿ ಮೋದಿ: ಫ್ರಾನ್ಸ್, ಸ್ಲೋವಾಕಿಯಾ ಪ್ರವಾಸ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…

12 hours ago

ಉಡುಪಿ ಶ್ರೀಕೃಷ್ಣಮಠಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿ

ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…

13 hours ago