ಮೈಸೂರು : ಚೀನಿ ಎಂದೇ ನಾಡಿನಾದ್ಯಂತ ಹೆಸರುವಾಸಿಯಾಗಿದ್ದ ಪ್ರಖ್ಯಾತ ರಂಗ ಸಂಗೀತ ನಿರ್ದೇಶಕ ಶ್ರೀನಿವಾಸ ಭಟ್ (63) ಹೃದಯಾಘಾತದಿಂದ ಬುಧವಾರ ರಾತ್ರಿ ಮೈಸೂರಿನಲ್ಲಿ ನಿಧನರಾದರು.
ಉಡುಪಿ ಜಿಲ್ಲೆಯಲ್ಲಿ ಜನಿಸಿದ ಶ್ರೀನಿವಾಸ ಭಟ್ ಬಾಲ್ಯದಲ್ಲಿಯೇ ಸಂಗೀತದಲ್ಲಿ ಆಸಕ್ತಿ ಹೊಂದಿದ್ದರು. ಸುಮಾರು 30 ವರ್ಷಗಳ ಕಾಲ ರಂಗ ಸಂಗೀತದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಹಲವಾರು ತಂಡಗಳ ನಾಟಕಗಳಿಗೆ ಸಂಗೀತ ನಿರ್ದೇಶನ ನೀಡಿದ ಕೀರ್ತಿ ಇವರಿಗೆ ಸಲ್ಲುತ್ತದೆ. ರಂಗಾಯಣಕ್ಕೆ ಬರುವ ಮೊದಲು ಉಡುಪಿಯಲ್ಲಿ ರಥಬೀದಿ ಗೆಳೆಯರ ನಾಟಕಗಳಿಗೆ ರಂಗ ಸಂಗೀತ ನೀಡುತ್ತಿದ್ದರು.
ಬಿವಿ ಕಾರಂತರ ಮೆಚ್ಚಿನ ಶಿಷ್ಯರಾಗಿದ್ದ ಚೀನಿಯವರು ‘ಕಾರಂತ ಸಂಗೀತ’ ಮಾದರಿಯನ್ನು ರಂಗಭೂಮಿಯಲ್ಲಿ ಮುಂದುವರಿಸಿದ್ದರು. ನೀನಾಸಂನಲ್ಲಿಯೂ ತಮ್ಮನ್ನು ತೊಡಗಿಸಿಕೊಂಡಿದ್ದರು. ಗಿಟಾರ್, ಹಾರ್ಮೊನಿಯಂ ಹಾಗೂ ತಾಳವಾದ್ಯಗಳಲ್ಲಿ ಇವರನ್ನು ಮೀರಿಸುವವರು ಯಾರು ಇರಲಿಲ್ಲ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.
ತಮ್ಮ ಸಂಗೀತದ ಮೂಲಕ ರಂಗಭೂಮಿಗೆ ಕಳೆ ತುಂಬಿದ್ದ ಚೀನಿಯವರ ಅಗಲಿಕೆ ಅಪಾರ ರಂಗಭೂಮಿ ಕಲಾವಿದರಿಗೆ ನೋವುಂಟು ಮಾಡಿದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…