ಜಿಲ್ಲೆಗಳು

‘ಶೀಘ್ರದಲ್ಲೇ ಮಡಿಕೇರಿ ನಗರದ ಹದಗೆಟ್ಟ ರಸ್ತೆಗಳ ದುರಸ್ತಿ’

‘ಆಂದೋಲನ’ ಸಂದರ್ಶನದಲ್ಲಿ ಮಡಿಕೇರಿ ನಗರದ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಪೌರಾಯುಕ್ತ ವಿಜಯ ಮಾಹಿತಿ

ವರದಿ: ನವೀನ್ ಡಿಸೋಜ

ಮಡಿಕೇರಿ: ನಗರದ ರಸ್ತೆ ಹಾಗೂ ಚರಂಡಿ ದುರಸ್ತಿಗೆ ನಗತೋತ್ಥಾನ ೪ನೇ ಹಂತದ ೧೩.೫ ಕೋಟಿ ರೂ. ಅನುದಾನವಿದ್ದು, ಶೀಘ್ರದಲ್ಲೆ ಅಭಿವೃದ್ಧಿ ಕಾರ್ಯ ನಡೆಸಲಾಗುತ್ತದೆ ಎಂದು ಪೌರಾಯುಕ್ತ ವಿಜಯ ಮಾಹಿತಿ ನೀಡಿದ್ದಾರೆ.

ಕೊಡಗಿನ ಜಿಲ್ಲಾ ಕೇಂದ್ರ ಮಡಿಕೇರಿ ನಗರದ ಬಹುತೇಕ ರಸ್ತೆಗಳು ಹದಗೆಟ್ಟಿವೆ. ಆಟೋ ಚಾಲಕರ ಸಂಘ ಸೇರಿದಂತೆ ಹಲವು ಸಂಘ ಸಂಸ್ಥೆಗಳು ರಸ್ತೆ ದುರಸ್ತಿಗೆ ಆಗ್ರಹಿಸಿವೆ. ಈ ಬಗ್ಗೆ ‘ಆಂದೋಲನ’ ಸಂದರ್ಶನದಲ್ಲಿ ಮಡಿಕೇರಿ ನಗರದಲ್ಲಿ ಕೈಗೊಳ್ಳಲಾಗಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಪೌರಾಯುಕ್ತ ವಿಜಯ ಸಮಗ್ರ ಮಾಹಿತಿ ನೀಡಿದ್ದಾರೆ.

ಪ್ರಶ್ನೆ: ಮಡಿಕೇರಿ ನಗರದ ಹದಗೆಟ್ಟ ರಸ್ತೆಗಳ ದುರಸ್ತಿ ಕಾರ್ಯ ನಡೆಸುವುದು ಯಾವಾಗ?

 ನಗರೋತ್ಥಾನ ೪ನೇ ಹಂತದಲ್ಲಿ ೪೦ ಕೋಟಿ ರೂ. ಮಂಜೂರಾಗಿ ಸರ್ಕಾರದಿಂದ ಕ್ರಿಯಾಯೋಜನೆ ಅನುಮೋದನೆಗೊಂಡಿದೆ. ಅದರಲ್ಲಿ ೧೩.೫ ಕೋಟಿ ರೂ. ರಸ್ತೆ ಹಾಗೂ ಚರಂಡಿ ಕಾಮಗಾರಿಗಳಿಗಿವೆ. ಈಗಾಗಲೇ ಟೆಂಡರ್ ಆಗಿದ್ದು, ಜಿಲ್ಲಾಧಿಕಾರಿಗಳಿಂದ ಡಿಎಂಎಗೆ ಹೋಗಿದೆ. ಅನುಮೋದನೆ ದೊರೆತ ಬಳಿಕ ಕೆಲಸಗಳಿಗೆ ಚಾಲನೆ ನೀಡುತ್ತೇವೆ. ಜೊತೆಗೆ ೧೪ನೇ ಹಣಕಾಸಿನ ೧.೧೫ ಕೋಟಿ ರೂ. ಕ್ರಿಯಾಯೋಜನೆ ಆಗಿದೆ. ಇದರಲ್ಲಿ ಶೌಚಾಲಯ, ರಸ್ತೆ, ತಡೆಗೋಡೆ, ಸ್ಮಶಾನ ಅಭಿವೃದ್ಧಿ ಸೇರಿದಂತೆ ಮತ್ತಿತರ ಕಾಮಗಾರಿಗಳಿದ್ದು, ಶೀಘ್ರದಲ್ಲಿ ಟೆಂಡರ್ ಕರೆದು ಕಾಮಗಾರಿ ಆರಂಭಿಸಲಾಗುತ್ತದೆ.

ಪ್ರಶ್ನೆ: ಮಡಿಕೇರಿ ನಗರದ ಪಾರ್ಕ್‌ಗಳ ಅಭಿವೃದ್ಧಿ ಎಲ್ಲೆಲ್ಲಿ ಆಗಿವೆ?

ಅಮೃತ ನಿರ್ಮಲ ನಗರ ಯೋಜನೆಯಡಿ ಕನ್ನಿಕಾ ಬಡಾವಣೆ, ಕಾವೇರಿ ಬಡಾವಣೆ, ರಾಣಿಪೇಟೆಗಳಲ್ಲಿ ೨೦ ಲಕ್ಷ ರೂ. ವೆಚ್ಚದಲ್ಲಿ ಉದ್ಯಾನವನಗಳನ್ನು ನಿರ್ಮಿಸಲಾಗಿದೆ. ದಾಸವಾಳ ರಸ್ತೆಯಲ್ಲಿ ಉದ್ಯಾನವನ ನಿರ್ಮಾ ಣ ಕಾರ್ಯ ಪ್ರಗತಿಯಲ್ಲಿದೆ. ಫೆನ್ಸಿಂಗ್, ಜಿಲ್ ಎಕ್ಯೂಪ್‌ಮೆಂಟ್ಸ್, ಚಿಲ್ಡ್ರನ್ ಪ್ಲೇ, ವಾಕ್‌ಪಾತ್‌ಗಳನ್ನು ಒಳಗೊಂಡಿದೆ. ಇದುವರೆಗೆ ಮಡಿಕೇರಿ ನಗರದಲ್ಲಿ ಮಾಡಿರದಂತಹ ಮಾದರಿ ಉದ್ಯಾನವನ ನಿರ್ಮಿಸಲಾಗಿದೆ.

ಪ್ರಶ್ನೆ: ನಗರಸಭೆ ವತಿಯಿಂದ ಪುನರ್ವಸತಿ ಕಲ್ಪಿಸಲು ಕೈಗೊಂಡಿರುವ ಕ್ರಮಗಳೇನು?

೧೦೦ ಮನೆಗಳ ನಿರ್ಮಾಣ ಗುರಿ ಹೊಂದಿದ್ದು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ೨೬, ಹಿಂದುಳಿದ ವರ್ಗಕ್ಕೆ ೭೪ ಮನೆಗಳ ನಿರ್ಮಾಣಕ್ಕೆ ಅರ್ಜಿ ಅಹ್ವಾನಿಸಲಾಗಿದೆ. ೧೦೦ಕ್ಕಿಂತ ಹೆಚ್ಚು ಅರ್ಜಿಗಳು ಬಂದಿದ್ದು, ಇದರಲ್ಲಿ ೩೬ ಅರ್ಜಿಗೆ ಅನುಮೋದನೆ ದೊರೆತಿದೆ. ಉಳಿದ ಅರ್ಜಿಗಳನ್ನು ಶೀಘ್ರದಲ್ಲೇ ಪರಿಶೀಲಿಸಿ ಅನುಮೋದನೆ ನೀಡಲಾಗುತ್ತದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ರಾಜ್ಯ ಸರ್ಕಾರದಿಂದ ೨ ಲಕ್ಷ ರೂ. ಸಹಾಯಧನ, ಕೇಂದ್ರ ಸರ್ಕಾರದಿಂದ ೧.೫೦ ಲಕ್ಷ ರೂ. ಸಹಾಯಧನ ದೊರೆಯಲಿದೆ. ಇತರರಿಗೆ ರಾಜ್ಯ ಸರ್ಕಾರದಿಂದ ೧.೮೦ ಲಕ್ಷ ರೂ. ಹಾಗೂ ಕೇಂದ್ರ ಸರ್ಕಾರದಿಂದ ೧.೫೦ ಲಕ್ಷ ರೂ. ಸಹಾಯಧನ ದೊರೆಯಲಿದೆ.

ಪ್ರಶ್ನೆ: ಮಳೆ ಹಾನಿಗೆ ಸಂಬಂಧಿಸಿದಂತೆ ನಗರಸಭೆ ವತಿಯಿಂದ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳೇನು?
೨೦೨೧-೨೨ನೇ ಸಾಲಿನ ಮಳೆ ಹಾನಿಗೆ ಸಂಬಂಧಿಸಿದಂತೆ ೩೫ ಲಕ್ಷ ರೂ. ವೆಚ್ಚದ ಕ್ರಿಯಾಯೋಜನೆ ಅನುಮೋದನೆಗೆ ಹೋಗಿದೆ. ಶೀಘ್ರದಲ್ಲಿ ಜಿಲ್ಲಾಧಿಕಾರಿಗಳು ಅನುಮೋದನೆ ನೀಡಲಿದ್ದಾರೆ. ಜೊತೆಗೆ ಈ ವರ್ಷ ೬೫ ಲಕ್ಷದ ಎಸ್ಟಿಮೇಟ್ ವಾಡಿ ಗ್ರ್ತ್ಯಾಂಟ್ ರಿಲೀಸ್‌ಗೆ ಜಿಲ್ಲಾಧಿಕಾರಿಗೆ ನೀಡಲಾಗಿದೆ.

 ಪ್ರಶ್ನೆ: ಸಿಬ್ಬಂದಿಗಳ ಕೊರತೆ ಎಷ್ಟಿದೆ?
ಮಡಿಕೇರಿ ನಗರಸಭೆಯಲ್ಲಿ ಸಿಬ್ಬಂದಿಗಳ ಕೊರತೆ ಸಾಕಷ್ಟಿದ್ದು, ಒತ್ತಡಗಳ ನಡುವೆ ಕೆಲಸ ಮಾಡಬೇಕಾದ ಅನಿವಾರ್ಯತೆ ಇದೆ. ೫ ಮಂದಿ ಇಂಜಿನಿುಂರ್ ಇರಬೇಕಾದ ನಗರಸಭೆಯಲ್ಲಿ ಒಬ್ಬರೇ ಇಂಜಿನಿಯರ್ ಇದ್ದಾರೆ. ರೆವಿನ್ಯೂ ಇನ್‌ಸ್ಪೆಕ್ಟರ್ ೨ ಹುದ್ದೆ ಕೂಡ ಖಾಲಿ ಇವೆ. ಬಡತನ ನಿರ್ಮೂಲನಾ ಕೆಲಸಕ್ಕೆ ಇಬ್ಬರು ಸಿಬ್ಬಂದಿಗಳ ಕೊರತೆ ಇದೆ. ಪ್ರಮುಖವಾಗಿ ಹೆಲ್ತ್ ಇನ್‌ಸ್ಪೆಕ್ಟರ್ ಕೊರತೆ ಇದೆ. ಎಫ್‌ಡಿಸಿ ೪ರಲ್ಲಿ ೧ ಮತ್ತು ಎಸ್‌ಡಿಸಿ ೭ರಲ್ಲಿ ೩ ಮಂದಿ ವಾತ್ರ ಇದ್ದಾರೆ. ೧೦೦ ಮಂದಿ ಪೌರ ಕಾರ್ಮಿಕರು ಇರಬೇಕಾದ ನಗರಸಭೆಯಲ್ಲಿ ೧೮ ಮಂದಿ ಮಾತ್ರ ಇದ್ದಾರೆ. ಹೊರಗುತ್ತಿಗೆ ಆಧಾರದಲ್ಲಿ ೨೦ ಮಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಒಟ್ಟು ೨೩೬ರಲ್ಲಿ ೮೪ ಹುದ್ದೆಗಳು ವಾತ್ರ ಭರ್ತಿಯಾಗಿವೆ.

andolana

Recent Posts

‘ಕೊಲೆ ಬಗ್ಗೆ ನಮಗೆ ಗೊತ್ತೇ ಇರಲಿಲ್ಲ’

ಎಚ್.ಎಸ್.ದಿನೇಶ್ ಕುಮಾರ್ ನಿತ್ಯಾನಂದ ಕೊಲೆ ಪ್ರಕರಣದ ನಾಲ್ವರು ಆರೋಪಿಗಳ ಪಶ್ಚಾತ್ತಾಪದ ಕಣ್ಣೀರು ಮೈಸೂರು: ನಗರದ ಕುವೆಂಪುನಗರದಲ್ಲಿ ಪತ್ನಿಯಿಂದಲೇ ಹತ್ಯೆಯಾದ ನಿತ್ಯಾನಂದ…

2 hours ago

ಕೊಡಗು ಜಿಲ್ಲೆಯಾದ್ಯಂತ ಚುರುಕುಗೊಂಡ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು ಏರಿಕೆ ಕಂಡುಬಂದಿದೆ. ಹಾರಂಗಿ ಜಲಾಶಯಕ್ಕೆ…

4 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಮಹಾತ್ಮನ ಚಿಂತನೆಯ ಹಾದಿಯಲ್ಲಿ ನಡೆಯಬೇಕಿದೆ ನಾನು ಕಂಡ ಗಾಂಧಿಜಿಯವರಲ್ಲಿ, ಅವರ ಜೀವನದಲ್ಲಿ ನನ್ನನ್ನು ಅತ್ಯಂತ ಹೆಚ್ಚಾಗಿ ಆಕರ್ಷಿಸಿದ ವಿಷಯ ಎಂದರೆ…

6 hours ago

ಮನುಷ್ಯ ಕುಲದ ಪ್ರಜ್ಞಾವಂತಿಕೆ ವಿಕಾಸಕ್ಕೆ ಗಾಂಧೀಜಿ ಕೈಮರ

ಗಾಂಧಿಜಿಯವರ ಜೀವನ ಚರಿತ್ರೆ ದೇಶ, ಖಂಡಗಳ ಗಡಿ ದಾಟಿ ಮನುಷ್ಯರೆಲ್ಲರ ಒಳಿತನ್ನು ಬಯಸುವ ಬಯಕೆಯನ್ನು ಭಾವಿಸಿ, ಜೀವಿಸಿ ತೋರಿಸಿದವರ ಪುಣ್ಯ…

6 hours ago

ಗಾಂಧಿ ಮೈಮೇಲೆ ಬಂದಂತೆ ಬದುಕಿದ್ದ ಹುಚ್ಚೇಗೌಡರು

ಸ್ವಾಮಿ ಪೊನ್ನಾಚ್ಚಿ ನಾನು ಹುಚ್ಚೇಗೌಡರನ್ನು ನೋಡಿದ್ದು ಇತ್ತೀಚೆಗೆ. ಅದೂ ಅತ್ತಿಖಾನೆ ಎಸ್ಟೇಟ್ ಸ್ಥಾಪಕ ಮಾರಿಸ್ ಬಗ್ಗೆ ತಿಳಿಯಲು ಹೋದಾಗ. ಸಿಕ್ಕ…

6 hours ago

ವಿಲಾಯತಿಗೆ ಹೊರಟವನು ಜಾತಿ ಬಾಹಿರನಾದೆ

ನಮ್ಮ ಜಾತಿಯ ಜನರು ನನ್ನ ವಿದೇಶ ಪ್ರಯಾಣವನ್ನು ಕುರಿತು ಗೊಂದಲವನ್ನು ಎಬ್ಬಿಸಿದರು. ಅಲ್ಲಿಯವರೆಗೆ ಮೋಧ್ ಬನಿಯರ ಪೈಕಿ ಯಾರೂ ವಿಲಾಯತಿಗೆ…

6 hours ago