ಹನೂರು: ಕಳೆದ 2 ದಿನಗಳಿಂದ ಜಿಟಿಜಿಟಿ ಮಳೆ ಬೀಳುತ್ತಿರುವ ಹಿನ್ನೆಲೆ ಪಳನಿಮೇಡು ಶಾಲೆಯ ಮೇಲ್ಚಾವಣಿ ದುರಸ್ತಿ ಗೊಂಡಿರುವುದರಿಂದ ಮಳೆಯ ನೀರು ಶಾಲೆಯ ಒಳಗೆ ಬೀಳುತ್ತಿರುವುದರಿಂದ ವಿದ್ಯಾರ್ಥಿಗಳಿಗೆ ಪಾಠ ಪ್ರವಚನಕ್ಕೆ ತೀವ್ರ ತೊಂದರೆಯಾಗಿದೆ.
ತಾಲ್ಲೂಕಿನ ರಾಮಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಳನಿಮೇಡು ಗ್ರಾಮದಲ್ಲಿ ಒಂದನೇ ತರಗತಿಯಿಂದ ಏಳನೇ ತರಗತಿಯವರೆಗೆ 130 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. 130 ವಿದ್ಯಾರ್ಥಿಗಳಿಗೆ ಕೇವಲ 5 ಕೊಠಡಿ ಗಳಿದ್ದು ಇದರಲ್ಲಿ 2 ಮಂಗಳೂರು ಹಂಚಿನ ಕಟ್ಟಡಗಳು ತೀವ್ರ ದುರಸ್ತಿಗೊಂಡಿದೆ. ಇದಲ್ಲದೆ ಕೋತಿಗಳ ಹಾವಳಿ ಹೆಚ್ಚಿರುವುದರಿಂದ ಮೇಲ್ಚಾವಣಿ ದುರಸ್ತಿಗೊಂಡಿದೆ . ಇನ್ನೂ ಇರುವ 3 ಕೊಠಡಿಗಳು ಆರ್ ಸಿಸಿ ಕಟ್ಟಡ ಗಳಾಗಿದ್ದರೂ ಸಹ ಕಾಮಗಾರಿ ಅಪೂರ್ಣಗೊಂಡಿರುವುದರಿಂದ ಗೋಡೆಗಳು ಶಿಥಿಲ ಗೊಂಡಿದೆ.ಇದರಿಂದ ಮಳೆಗಾಲದಲ್ಲಿ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಲಿದೆ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರತಿಭಟನೆಯ ಎಚ್ಚರಿಕೆ : ಪಳನಿಮೇಡು ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೇಲ್ಚಾವಣಿ ದುರಸ್ತಿಗೊಂಡಿರುವ ಬಗ್ಗೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಹತ್ತಾರು ಬಾರಿ ಮನವಿ ಮಾಡಿದ್ದರು ಸಹ ದುರಸ್ತಿಗೆ ಕ್ರಮ ಕೈಗೊಂಡಿಲ್ಲ. ಇದರಿಂದ ನಮ್ಮ ವಿದ್ಯಾರ್ಥಿಗಳಿಗೆ ಯಾವುದಾದರು ಅವಘಡಗಳು ಸಂಭವಿಸಿದರೆ ಇದಕ್ಕೆ ಯಾರು ಹೊಣೆ? ಶೀಘ್ರವೇ ಸಂಬಂಧಪಟ್ಟ ಅಧಿಕಾರಿಗಳು ದುರಸ್ತಿಗೆ ಕ್ರಮ ಕೈಗೊಳ್ಳದಿದ್ದರೆ ನಮ್ಮ ವಿದ್ಯಾರ್ಥಿಗಳನ್ನು ಶಾಲೆಗೆ ಕಳುಹಿಸದೆ ರಸ್ತೆತಡೆ ನಡೆಸಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಪೋಷಕರು ಎಚ್ಚರಿಕೆ ನೀಡಿದ್ದಾರೆ.
ಶಾಲೆಯ ಮೇಲ್ಚಾವಣಿ ದುರಸ್ತಿಗೊಂಡಿರುವ ಬಗ್ಗೆ ಈಗಾಗಲೇ ಗಮನಕ್ಕೆ ಬಂದಿದ್ದು, ಮೇಲ್ಚಾವಣಿ ದುರಸ್ತಿಗೆ ಅನುದಾನ ನೀಡುವಂತೆ ಇಲಾಖೆಗೆ ಪತ್ರ ಬರೆಯಲಾಗಿದೆ.- ಶಿವರಾಜು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹನೂರು ಶೈಕ್ಷಣಿಕ ವಲಯ.
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…