ಜಿಲ್ಲೆಗಳು

ಶಾಲೆಯ ಮೇಲ್ಚಾವಣಿ ದುರಸ್ತಿ : ಶಾಲೆಯ ಒಳಗೆ ಬೀಳುತ್ತಿರುವ ಮಳೆಯ ನೀರು

ಹನೂರು: ಕಳೆದ 2 ದಿನಗಳಿಂದ ಜಿಟಿಜಿಟಿ ಮಳೆ ಬೀಳುತ್ತಿರುವ ಹಿನ್ನೆಲೆ ಪಳನಿಮೇಡು ಶಾಲೆಯ ಮೇಲ್ಚಾವಣಿ ದುರಸ್ತಿ ಗೊಂಡಿರುವುದರಿಂದ ಮಳೆಯ ನೀರು ಶಾಲೆಯ ಒಳಗೆ ಬೀಳುತ್ತಿರುವುದರಿಂದ ವಿದ್ಯಾರ್ಥಿಗಳಿಗೆ ಪಾಠ ಪ್ರವಚನಕ್ಕೆ ತೀವ್ರ ತೊಂದರೆಯಾಗಿದೆ.

ತಾಲ್ಲೂಕಿನ ರಾಮಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಳನಿಮೇಡು ಗ್ರಾಮದಲ್ಲಿ ಒಂದನೇ ತರಗತಿಯಿಂದ ಏಳನೇ ತರಗತಿಯವರೆಗೆ 130 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. 130 ವಿದ್ಯಾರ್ಥಿಗಳಿಗೆ ಕೇವಲ 5 ಕೊಠಡಿ ಗಳಿದ್ದು ಇದರಲ್ಲಿ 2 ಮಂಗಳೂರು ಹಂಚಿನ ಕಟ್ಟಡಗಳು ತೀವ್ರ ದುರಸ್ತಿಗೊಂಡಿದೆ. ಇದಲ್ಲದೆ ಕೋತಿಗಳ ಹಾವಳಿ ಹೆಚ್ಚಿರುವುದರಿಂದ ಮೇಲ್ಚಾವಣಿ ದುರಸ್ತಿಗೊಂಡಿದೆ . ಇನ್ನೂ ಇರುವ 3 ಕೊಠಡಿಗಳು ಆರ್ ಸಿಸಿ ಕಟ್ಟಡ ಗಳಾಗಿದ್ದರೂ ಸಹ ಕಾಮಗಾರಿ ಅಪೂರ್ಣಗೊಂಡಿರುವುದರಿಂದ ಗೋಡೆಗಳು ಶಿಥಿಲ ಗೊಂಡಿದೆ.ಇದರಿಂದ ಮಳೆಗಾಲದಲ್ಲಿ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಲಿದೆ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನೆಯ ಎಚ್ಚರಿಕೆ : ಪಳನಿಮೇಡು ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೇಲ್ಚಾವಣಿ ದುರಸ್ತಿಗೊಂಡಿರುವ ಬಗ್ಗೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಹತ್ತಾರು ಬಾರಿ ಮನವಿ ಮಾಡಿದ್ದರು ಸಹ ದುರಸ್ತಿಗೆ ಕ್ರಮ ಕೈಗೊಂಡಿಲ್ಲ. ಇದರಿಂದ ನಮ್ಮ ವಿದ್ಯಾರ್ಥಿಗಳಿಗೆ ಯಾವುದಾದರು ಅವಘಡಗಳು ಸಂಭವಿಸಿದರೆ ಇದಕ್ಕೆ ಯಾರು ಹೊಣೆ? ಶೀಘ್ರವೇ ಸಂಬಂಧಪಟ್ಟ ಅಧಿಕಾರಿಗಳು ದುರಸ್ತಿಗೆ ಕ್ರಮ ಕೈಗೊಳ್ಳದಿದ್ದರೆ ನಮ್ಮ ವಿದ್ಯಾರ್ಥಿಗಳನ್ನು ಶಾಲೆಗೆ ಕಳುಹಿಸದೆ ರಸ್ತೆತಡೆ ನಡೆಸಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಪೋಷಕರು ಎಚ್ಚರಿಕೆ ನೀಡಿದ್ದಾರೆ.

ಶಾಲೆಯ ಮೇಲ್ಚಾವಣಿ ದುರಸ್ತಿಗೊಂಡಿರುವ ಬಗ್ಗೆ ಈಗಾಗಲೇ ಗಮನಕ್ಕೆ ಬಂದಿದ್ದು, ಮೇಲ್ಚಾವಣಿ ದುರಸ್ತಿಗೆ ಅನುದಾನ ನೀಡುವಂತೆ ಇಲಾಖೆಗೆ ಪತ್ರ ಬರೆಯಲಾಗಿದೆ.- ಶಿವರಾಜು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹನೂರು ಶೈಕ್ಷಣಿಕ ವಲಯ.

andolana

Recent Posts

ಓದುಗರ ಪತ್ರ: ಅನುಮಾನ ಬಗೆಹರಿಸಿ

ರಾಜ್ಯದ ಬಹಳಷ್ಟು ಜನರು ಆನ್‌ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…

26 mins ago

ಓದುಗರ ಪತ್ರ: ಕನ್ನಡ ಒಗ್ಗಟ್ಟು

ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…

27 mins ago

ಓದುಗರ ಪತ್ರ: ರಾಜಕಾರಣದ ಸರಕು!

ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…

29 mins ago

ಓದುಗರ ಪತ್ರ: ಅಕ್ಕಿ ದರ ಏರಿಕೆಗೆ ಕಡಿವಾಣ ಅಗತ್ಯ

ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…

30 mins ago

ಸತ್ಯದ ಪ್ರತಿಪಾದಕರು ಮಾತ್ರ ಆದರ್ಶ ಆಗಬಲ್ಲರು

ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…

32 mins ago

300 ಮಕ್ಕಳ ಶಿಕ್ಷಣಕ್ಕೆ ಶೇ.96ರಷ್ಟು ಸಂಪತ್ತನ್ನು ದಾನ ಮಾಡಿದ ಟೆಕ್ಕಿ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ  ಛತ್ತೀಸ್‌ಘಡದ ಭಿಲಾಯ್‌ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…

37 mins ago