ಜಿಲ್ಲೆಗಳು

ನಜರ್‌ಬಾದ್ ಪೊಲೀಸ್ ಠಾಣೆಯಿಂದ ಹಾಲಿನ ಡೈರಿ ತನಕ ದುರಸ್ತಿ : 1.50 ಕೋಟಿ ರೂ.ವೆಚ್ಚದಲ್ಲಿ ಕಾಮಗಾರಿ

ಮೈಸೂರು: ಹಲವು ತಿಂಗಳಿಂದ ಸವಾರರು,ವಾಹನಗಳಿಗೆ ತ್ರಾಸದಾಯಕವಾಗಿದ್ದ ಮಹದೇಶ್ವರ ರಸ್ತೆ ಡಾಂಬರೀಕರಣಕ್ಕೆ ಮಹಾಪೌರ ಶಿವಕುಮಾರ್ ಗುರುವಾರ ಚಾಲನೆ ನೀಡಿದರು. ಬಸವೇಶ್ವರ ಹಾಗೂ ಮಹದೇಶ್ವರ ದೇವಸ್ಥಾನದ ಮುಂಭಾಗ ಶನಿವಾರ ನಡೆದ ಸರಳ ಕಾರ್ಯಕ್ರಮದಲ್ಲಿ ನಗರಪಾಲಿಕೆ ಸದಸ್ಯರಾದ ಸತ್ಯರಾಜ್, ಛಾಯಾದೇವಿ ಅವರೊಂದಿಗೆ ಗುದ್ದಲಿಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ಕೊಟ್ಟರು. ಬಳಿಕ ಮಾತನಾಡಿದ ಮಹಾಪೌರ ಶಿವಕುಮಾರ್, ಒಂದು ವರ್ಷದಿಂದ ಈ ಮಾರ್ಗದ ರಸ್ತೆಯನ್ನು ಡಾಂಬರೀಕರಣ ಮಾಡುವಂತೆ ಸ್ಥಳೀಯ ನಗರಪಾಲಿಕೆ ಸದಸ್ಯರು ಒತ್ತಡ ಹೇರಿದ್ದರು.ಸಾರ್ವಜನಿಕರಿಂದಲೂ ದೂರುಗಳು ಬಂದಿದ್ದವು. ಕಳೆದ ಮೂರು ತಿಂಗಳಹಿಂದೆಯೇ ಕಾಮಗಾರಿ ಆರಂಭಿಸಲು ಕರೆದಿದ್ದ ಟೆಂಡರ್‌ಗೆ ಸಿಂಗಲ್ ವ್ಯಕ್ತಿ ಬಂದಿದ್ದರಿಂದ ಮರು ಟೆಂಡರ್ ಕರೆದಿದ್ದರಿಂದ ವಿಳಂಬವಾಗಿತ್ತು. ಇದೀಗ ೧.೫೦ ಕೋಟಿ ರೂ.ವೆಚ್ಚದಲ್ಲಿ ನಜರ್‌ಬಾದ್ ಪೊಲೀಸ್ ಠಾಣೆಯಿಂದ ಹಳೆಯ ಹಾಲಿನ ಡೈರಿ ತನಕ ರಸ್ತೆಗಳಲ್ಲಿ ಬಿದ್ದಿರುವ ಹಳ್ಳ,ಗುಂಡಿಗಳನ್ನು ಮುಚ್ಚಿ ಡಾಂಬರೀಕರಣ ಮಾಡಲಾಗುತ್ತದೆ ಎಂದರು. ಮೈಸೂರಿನ ಪ್ರಮುಖ ರಸ್ತೆಗಳಲ್ಲಿ ಮಹದೇಶ್ವರ ರಸ್ತೆಯು ಒಂದಾಗಿರುವ ಕಾರಣ ಎರಡು-ಮೂರು ವರ್ಷಗಳ ಬಾಳಿಕೆ ಬರುವಂತೆ ಕಾಮಗಾರಿ ಮಾಡಲಾಗುತ್ತದೆ. ಎರಡು ಬದಿಯಲ್ಲಿ ನೀರು ನಿಲ್ಲದಂತೆ ನೋಡಿಕೊಂಡು ಡಾಂಬರೀಕರಣ ಮಾಡುತ್ತೇವೆ ಎಂದು ಹೇಳಿದರು.

ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ: ನಗರದ ಸಿದ್ದಾರ್ಥನಗರ, ಡಾ.ರಾಜ್‌ಕುಮಾರ್ ರಸ್ತೆ ಮೊದಲಾದ ಕಡೆಗಳಲ್ಲಿ ನಡೆಯುತ್ತಿರುವ ಟ್ಯಾಂಕ್, ರಸ್ತೆ ಕಾಮಗಾರಿ, ಡ್ರೈನೇಜ್ ಕಾಮಗಾರಿ,ಯುಜಿಡಿ ಪೈಪ್‌ಲೈನ್ ಅಳವಡಿಕೆ ಕಾಮಗಾರಿಗಳನ್ನು ಮಹಾಪೌರರು ಪರಿಶೀಲಿಸಿದರು.ಸದಸ್ಯರು,ಅಧಿಕಾರಿಗಳ ತಂಡದೊಂದಿಗೆ ವಿವಿಧ ಕಡೆಗಳಲ್ಲಿ ಪ್ರಗತಿಯಲ್ಲಿರುವ ಕಾಮಗಾರಿ ಪರಿಶೀಲಿಸಿ ಗುಣಮಟ್ಟ ಕಾಯ್ದುಕೊಳ್ಳುವಂತೆ ಸೂಚಿಸಿದರು. ಉಪ ಮಹಾಪೌರರಾದ ಡಾ.ಜಿ.ರೂಪಾ, ನಗರಪಾಲಿಕೆ ಆಯುಕ್ತ ಜಿ.ಲಕ್ಷ್ಮೀಕಾಂತ್ ರೆಡ್ಡಿ, ಅಧೀಕ್ಷಕ ಅಭಿಯಂತರ ಮಹೇಶ್,ಕಾರ್ಯಪಾಲಕ ಅಭಿಯಂತರ ರಂಜಿತ್‌ಕುಮಾರ್, ವಾಣಿವಿಲಾಸ ನೀರು ಸರಬರಾಜು ಮಂಡಳಿ ಕಾರ್ಯಪಾಲಕ ಅಭಿಯಂತರರಾದ ಸುವರ್ಣ, ವಲಯ ಕಚೇರಿ ಒಂಬತ್ತರ ಅಭಿವೃದ್ಧಿ ಅಧಿಕಾರಿ ಸಿ.ಹರ್ಷಿಯಾ ಹಾಜರಿದ್ದರು.

ಮೈಸೂರಿನ ನಜರ್‌ಬಾದ್‌ನಿಂದ ಹಾಲಿನ ಡೈರಿಯವರೆಗೆ ರಸ್ತೆ ಡಾಂಬರೀಕರಣಕ್ಕೆ ಮಹಾಪೌರ ಶಿವಕುಮಾರ್ ಗುದ್ದಲಿಪೂಜೆ ನೆರವೇರಿಸಿದರು. ಉಪ ಮಹಾಪೌರರಾದ ಡಾ.ಜಿ.ರೂಪಾ, ಸದಸ್ಯರಾದ ಸತ್ಯರಾಜ್, ಛಾಯಾದೇವಿ,ಆಯುಕ್ತ ಜಿ.ಲಕ್ಷ್ಮೀಕಾಂತ್ ರೆಡ್ಡಿ, ಅಭಿವೃದ್ಧಿ ಅಧಿಕಾರಿ ಸಿ.ಹರ್ಷಿಯಾ,ಅಧೀಕ್ಷಕ ಅಭಿಯಂತರ ಮಹೇಶ್,ಕಾರ್ಯಪಾಲಕ ಅಭಿಯಂತರ ರಂಜಿತ್‌ಕುಮಾರ್, ವಾಣಿವಿಲಾಸ ನೀರು ಸರಬರಾಜು ಮಂಡಳಿ ಕಾರ್ಯಪಾಲಕ ಅಭಿಯಂತರರಾದ ಸುವರ್ಣ ಇನ್ನಿತರರು ಹಾಜರಿದ್ದರು.

andolanait

Recent Posts

ತಂತ್ರಜ್ಞಾನದ ಮಾಹಿತಿ ಕೊರತೆ ರೇಷ್ಮೆ ಕೃಷಿಯ ಹಿನ್ನಡೆಗೆ ಕಾರಣ: ಪ್ರೊ. ಎಸ್.ಆರ್.ನಿರಂಜನ

ಮೈಸೂರು : ರೇಷ್ಮೆ ಕೃಷಿಯ ವಿಚಾರಗಳನ್ನು ತಿಳಿದುಕೊಳ್ಳದವರು ಪ್ರಾಯೋಗಿಕವಾಗಿ ಬೆಳೆಯಲಾರರು. ಹವಾಮಾನ ವೈಪರೀತ್ಯ, ತಂತ್ರಜ್ಞಾನದ ಮಾಹಿತಿ ಕೊರತೆ ರೇಷ್ಮೆ ಕೃಷಿಯ…

6 mins ago

ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್ :‌ ದರ ಏರಿಕೆ ಸ್ಥಗಿತ

ಬೆಂಗಳೂರು : ನಮ್ಮ ಮೆಟ್ರೋ ಪ್ರಯಾಣ ದರಗಳಲ್ಲಿ ಫೆಬ್ರವರಿ 9ರಿಂದ ಯೋಜಿಸಲಾಗಿದ್ದ ಸುಮಾರು 5% ಏರಿಕೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಬೆಂಗಳೂರು…

29 mins ago

ಮುಂಬೈ ಮಹಾನಗರ ಪಾಲಿಕೆಯ ನೂತನ ಮೇಯರ್‌ ಆಗಿ ಬಿಜೆಪಿಯ ರಿತು ತಾವ್ಡೆ ಆಯ್ಕೆ

ಮುಂಬೈ: ದೇಶದ ಅತ್ಯಂತ ಶ್ರೀಮಂತ ಮಹಾನಗರ ಪಾಲಿಕೆಯಾದ ಬೃಹತ್‌ ಮುಂಬೈ ಮಹಾನಗರ ಪಾಲಿಕೆಯಲ್ಲಿ ಐತಿಹಾಸಿಕ ಬದಲಾವಣೆ ಸಂಭವಿಸಿದೆ. ಕಳೆದ 25…

2 hours ago

ಸಿಎಂ ಆಗುವ ಆಸೆ ಎಲ್ಲರಿಗೂ ಇದೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಮಂಗಳೂರು: ನಾನು ಸಿಎಂ ಎಂಬ ಕನಸು ಜನರಿಗೂ ಇದೆ. ಶಾಸಕರಿಗೂ ಇದೆ. ಪಕ್ಷದ ಏನು ಹೇಳುತ್ತದೆ ಅದನ್ನು ಕೇಳಬೇಕು. ಎಲ್ಲದಕ್ಕೂ…

2 hours ago

ಪಿರಿಯಾಪಟ್ಟಣ| ವಿದ್ಯುತ್‌ ಸ್ಪರ್ಶ: ಕಾಡಾನೆ ಸಾವು

ಪಿರಿಯಾಪಟ್ಟಣ: ವಿದ್ಯುತ್‌ ಸ್ಪರ್ಶದಿಂದ ಕಾಡಾನೆ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣದ ಗೋಲ್ಡನ್‌ ಟೆಂಪಲ್‌ ಸಮೀಪದ ದೊಡ್ಡ ಹರವೆ ಕಾಲೋನಿ…

3 hours ago

ಹನೂರು| ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಉಳಿಸಿ, ವಿಬಿ.ಜಿ ರಾಮ್ ಜಿ ಅಳಿಸಿ ಕಾರ್ಯಕ್ರಮ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಂಗ್ರೆಸ್ ಪಕ್ಷವು ದೇಶದ ಜನರಿಗೆ ಆಹಾರ ಭದ್ರತಾ ಕಾಯ್ದೆ, ಉದ್ಯೋಗ…

3 hours ago