ಮೈಸೂರು : ಜಿಲ್ಲಾ ವ್ಯಾಪ್ತಿಯ ಸರ್ಕಾರಿ ಕಚೇರಿಗಳಿಗೆ ಮತ್ತು ಸರ್ಕಾರಿ ಶಾಲಾ ಕಾಲೇಜುಗಳಿಗೆ ವಿದ್ಯುತ್ ಬಿಲ್ ಪಾವತಿಸಲು ಸೂಕ್ತವಾದ ಅನುದಾನ ಲಭ್ಯವಿಲ್ಲದ ಕಾರಣ, ಸಕಾಲದಲ್ಲಿ ವಿದ್ಯುತ್ ಬಿಲ್ ಪಾವತಿಸಿದೆ ಇರುವುದರಿಂದ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗುತ್ತಿದ್ದು, ಅದನ್ನು ತಾವುಗಳು ಪರಿಶೀಲಿಸಿ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸದಂತೆ ಸಂಬಂಧಪಟ್ಟ ಅಧಿಕಾರಿ ವರ್ಗದವರಿಗೆ ಸೂಚನೆ ನೀಡುವಂತೆ ಮೈಸೂರು ಜಿಲ್ಲಾ ಸರ್ಕಾರಿ ನೌಕರರ ಸಂಘದಿಂದ ಇಂಧನ ಸಚಿವ ವಿ.ಸುನಿಲ್ ಕುಮಾರ್ ಅವರಿಗೆ ಮನವಿ ಸಲ್ಲಿಸಲಾಯಿತು. ಇದಕ್ಕೆ ಸಕರಾತ್ಮಕವಾಗಿ ಸ್ಪಂದಿಸಿದ ಸಚಿವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದೆಂದು ಸಂಘದ ಪದಾಧಿಕಾರಿಗಳಿಗೆ ತಿಳಿಸಿದರು.ನರಸಿಂಹ ರಾಜ ಕ್ಷೇತ್ರದ ಶಾಸಕ ತನ್ವೀರ್ ಸೇಠ್, ನೌಕರರ ಸಂಘದ ಅಧ್ಯಕ್ಷಗೋವಿಂದರಾಜು, ಕಾರ್ಯಾಧ್ಯಕ್ಷ ಆನಂದ್, ಕಾರ್ಯದರ್ಶಿ ರೇವಣ್ಣ, ಸಂಘದ ಸದಸ್ಯರಾದ ರಾಜೇಶ್, ಆನಂದ್, ನೂತನ್ ಇನ್ನಿತರರು ಹಾಜರಿದ್ದರು.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…