ಜಿಲ್ಲೆಗಳು

ದೇಶದಲ್ಲಿ ಸಂಶೋಧನೆಗೆ ಉತ್ತೇಜನ ಸಿಗುತ್ತಿಲ್ಲ : ಪ್ರೊ.ರಂಗಪ್ಪ ಬೇಸರ

ಮೈಸೂರು: ಕ್ಯಾನ್ಸರ್, ಅಲ್ಜೈಮರ್ ಸೇರಿದಂತೆ ಇನ್ನಿತರ ಕಾಯಿಲೆಗಳಿಗೆ ವಿದೇಶಿ ಔಷಧಗಳನ್ನು ಅವಲಂಬಿಸುವ ಬದಲಿಗೆ ದೇಶದಲ್ಲೇ ಔಷಧ ತಯಾರುಮಾಡಬೇಕು. ಆದರೆ, ವಿಜ್ಞಾನ ಕ್ಷೇತ್ರದಲ್ಲಿ ಸಾಕಷ್ಟು ಸಂಶೋಧನೆಗಳು ನಡೆಯಲು ಉತ್ತೇಜನ ಸಿಗದ ಕಾರಣ ಸಂಶೋಧಕರು ವಿದೇಶಗಳಿಗೆ ಪಲಾಯನ ಮಾಡುವಂತಾಗಿದೆ ಎಂದು ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ ಬೇಸರ ವ್ಯಕ್ತಪಡಿಸಿದರು.

ಮೈಸೂರು ವಿವಿ ವಿಜ್ಞಾನ ಭವನದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ಟೇಟ್ ಅಕಾಡೆಮಿಕ್, ಸೆಂಟ್ರಲ್ ಅಕಾಡೆಮಿಕ್‌ನಂತೆ ಇಂಟರ್ ನ್ಯಾಷನಲ್ ಅಕಾಡೆಮಿಯಂತೆ ಪ್ರಪಂಚದಲ್ಲೇ ಗಮನಸೆಳೆದಿರುವ ದಿ ವಲ್ಡ್ ರ್ ಅಕಾಡೆಮಿ ಆಫ್ ಸೈನ್ಸಸ್ ಫೆಲೋಶಿಪ್ ದೊರೆತಿರುವುದು ನೋಬಲ್ ಪ್ರಶಸ್ತಿಗಿಂತಲೂ ದೊಡ್ಡದು ಎಂದು ಸಂತಸ ವ್ಯಕ್ತಪಡಿಸಿದರು. ೧೬ ದೇಶಗಳ ಪ್ರತಿನಿಧಿಗಳು ಕುಳಿತು ಆಯ್ಕೆ ಮಾಡುವ ಸಮಿತಿಯಲ್ಲಿ ತಾವು ಮಾಡಿರುವ ಸಾಧನೆ, ಸಂಶೋಧನೆಯನ್ನು ಗುರುತಿಸಿ ನೀಡಲಾಗಿದೆ. ೨೦೨೨ರಲ್ಲಿ ಭಾರತದಲ್ಲಿ ಒಬ್ಬರನ್ನೇ ಆಯ್ಕೆ ಮಾಡಲಾಗಿದೆ. ಸಹಜವಾಗಿ ಮೈಸೂರು ವಿವಿ, ಕರ್ನಾಟಕಕ್ಕೆ ದೊಡ್ಡ ಹೆಸರು ದೊರೆತಿದೆ ಎಂದರು. ಅಭಿವೃದ್ಧಿ ಹೊಂದಿದ ದೇಶಗಳಲ್ಲಿ ವಿಜ್ಞಾನವನ್ನು ಯಾವ ರೀತಿ ಅಭಿವೃದ್ಧಿಪಡಿಸಬೇಕು ಎನ್ನುವ ಚಿಂತನೆ ಮಾಡಲಾಗುತ್ತಿದೆ. ಅದೇರೀತಿ ಭಾರತದಲ್ಲೂ ಆಗಬೇಕು. ಇತ್ತೀಚಿನ ದಿನಗಳಲ್ಲಿ ಬೋಧಕ ಸಿಬ್ಬಂದಿ ಇಲ್ಲದ ಕಾರಣ ಸಂಶೋಧನೆಗಳು ನಡೆಯುತ್ತಿಲ್ಲ. ಭಾರತದಲ್ಲಿ ಪತ್ತೆ ಮಾಡಿದ ಕೋವ್ಯಾಕ್ಸಿನ್ ಇಡೀ ಜಗತ್ತಿಗೆ ಬಳಕೆಯಾಯಿತು. ಅದೇ ರೀತಿ ಕ್ಯಾನ್ಸರ್ ಸೇರಿದಂತೆ ಇನ್ನಿತರ ಕಾಯಿಲೆಗಳಿಗೆ ಬೇರೆ ದೇಶಗಳನ್ನು ಅವಲಂಬಿಸದೆ ನಮ್ಮಲ್ಲಿ ಕಂಡುಹಿಡಿಯಬೇಕು ಎಂದು ಹೇಳಿದರು. ವಿಜ್ಞಾನ ಕ್ಷೇತ್ರಕ್ಕೆ ಸರಿಯಾದ ಪ್ರೋತ್ಸಾಹ,ಉತ್ತೇಜನ ದೊರೆಯುತ್ತಿಲ್ಲ. ನಾವು ಸರ್ಕಾರಕ್ಕೆ ಸಲಹೆಗಳನ್ನು ನೀಡಬಹುದು. ಅದನ್ನು ಸ್ವೀಕರಿಸಿ ಅನುಷ್ಠಾನಗೊಳಿಸುವುದು ಸರ್ಕಾರದ ಹೊಣೆಯಾಗಿದೆ ಎಂದು ಅಭಿಪ್ರಾಯಪಟ್ಟರು.

 

andolana

Recent Posts

13 ವರ್ಷಗಳಿಂದ ಕೋಮಾ : ಹರೀಶ್‌ ರಾಣಾ ದಯಾಮರಣಕ್ಕೆ ಸುಪ್ರೀಂ ಅನುಮತಿ

ಹೊಸದಿಲ್ಲಿ : ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ ಹರೀಶ್‌ ರಾಣಾ ದಯಾಮರಣಕ್ಕೆ ಸುಪ್ರೀಂಕೋರ್ಟ ಅನುಮತಿ ನೀಡಿದೆ. ಚಲಿಸಲು ಅಥವಾ ಮಾತನಾಡಲು…

22 mins ago

ಹಾರ್ಮುಜ್‌ ಜಲಸಂಧಿ ಬಳಿ ಅಮೇರಿಕಾ ಅಬ್ಬರ: ಇರಾನ್‌ನ 16 ನೌಕೆಗಳು ಧ್ವಂಸ

ಟೆಹರಾನ್:‌ ವಿಶ್ವದ ಪ್ರಮುಖ ಇಂಧನ ಸಾಗಣೆ ಮಾರ್ಗವಾದ ಹಾರ್ಮುಜ್‌ ಜಲಸಂಧಿಯ ಬಳಿ ನೌಕಾ ಮೈನ್‌ಗಳನ್ನು ಅಳವಡಿಸಲು ಸಜ್ಜಾಗಿದ್ದ ಇರಾನ್‌ನ 16…

2 hours ago

90 ದಿನದೊಳಗೆ ಅಂಗನವಾಡಿ ಖಾಲಿ ಹುದ್ದೆ ಭರ್ತಿಗೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಬೆಂಗಳೂರು: ಅಂಗನವಾಡಿ ಕೇಂದ್ರಗಳಲ್ಲಿ ಯಾವುದೇ ಹುದ್ದೆ ಖಾಲಿಯಾದ 90 ದಿನಗಳ ಒಳಗಾಗಿ ಭರ್ತಿ ಮಾಡಬೇಕು ಎಂದು ಕಳೆದ ಡಿಸೆಂಬರ್‌ನಲ್ಲೇ ಜಿಲ್ಲಾಧಿಕಾರಿಗಳು…

2 hours ago

ಗೃಹ ಬಳಕೆಯ ಗ್ಯಾಸ್‌‍ ಸಿಲಿಂಡರ್‌ನ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಇಲ್ಲ: ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು: ಗೃಹ ಬಳಕೆಯ ಗ್ಯಾಸ್‌‍ ಸಿಲಿಂಡರ್‌ನ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ…

3 hours ago

ಮಂಡ್ಯ: ಕುಡಿಯುವ ನೀರಿನ ಗುಣಮಟ್ಟಕ್ಕೆ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ಕುಡಿಯುವ ನೀರಿನ ಗುಣಮಟ್ಟವು ನೇರವಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುವುದರಿಂದ ಸುರಕ್ಷಿತ, ಶುದ್ಧ ಮತ್ತು ರಾಸಾಯನಿಕ ಮುಕ್ತ ನೀರನ್ನು…

4 hours ago

ನಾಳೆ ಮೈಸೂರಿಗೆ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಜೆಟ್‌ ಅಧಿವೇಶನದ ನಡುವೆಯೇ ಸಿಎಂ ಸಿದ್ದರಾಮಯ್ಯ ನಾಳೆ ಮೈಸೂರಿಗೆ ಆಗಮಿಸಲಿದ್ದಾರೆ. ನಾಳೆ ಬೆಳಿಗ್ಗೆ 10 ಗಂಟೆಗೆ ಎಚ್‌ಎಎಲ್‌ ವಿಮಾನ…

4 hours ago