ಜಿಲ್ಲೆಗಳು

ದೇಶದಲ್ಲಿ ಸಂಶೋಧನೆಗೆ ಉತ್ತೇಜನ ಸಿಗುತ್ತಿಲ್ಲ : ಪ್ರೊ.ರಂಗಪ್ಪ ಬೇಸರ

ಮೈಸೂರು: ಕ್ಯಾನ್ಸರ್, ಅಲ್ಜೈಮರ್ ಸೇರಿದಂತೆ ಇನ್ನಿತರ ಕಾಯಿಲೆಗಳಿಗೆ ವಿದೇಶಿ ಔಷಧಗಳನ್ನು ಅವಲಂಬಿಸುವ ಬದಲಿಗೆ ದೇಶದಲ್ಲೇ ಔಷಧ ತಯಾರುಮಾಡಬೇಕು. ಆದರೆ, ವಿಜ್ಞಾನ ಕ್ಷೇತ್ರದಲ್ಲಿ ಸಾಕಷ್ಟು ಸಂಶೋಧನೆಗಳು ನಡೆಯಲು ಉತ್ತೇಜನ ಸಿಗದ ಕಾರಣ ಸಂಶೋಧಕರು ವಿದೇಶಗಳಿಗೆ ಪಲಾಯನ ಮಾಡುವಂತಾಗಿದೆ ಎಂದು ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ ಬೇಸರ ವ್ಯಕ್ತಪಡಿಸಿದರು.

ಮೈಸೂರು ವಿವಿ ವಿಜ್ಞಾನ ಭವನದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ಟೇಟ್ ಅಕಾಡೆಮಿಕ್, ಸೆಂಟ್ರಲ್ ಅಕಾಡೆಮಿಕ್‌ನಂತೆ ಇಂಟರ್ ನ್ಯಾಷನಲ್ ಅಕಾಡೆಮಿಯಂತೆ ಪ್ರಪಂಚದಲ್ಲೇ ಗಮನಸೆಳೆದಿರುವ ದಿ ವಲ್ಡ್ ರ್ ಅಕಾಡೆಮಿ ಆಫ್ ಸೈನ್ಸಸ್ ಫೆಲೋಶಿಪ್ ದೊರೆತಿರುವುದು ನೋಬಲ್ ಪ್ರಶಸ್ತಿಗಿಂತಲೂ ದೊಡ್ಡದು ಎಂದು ಸಂತಸ ವ್ಯಕ್ತಪಡಿಸಿದರು. ೧೬ ದೇಶಗಳ ಪ್ರತಿನಿಧಿಗಳು ಕುಳಿತು ಆಯ್ಕೆ ಮಾಡುವ ಸಮಿತಿಯಲ್ಲಿ ತಾವು ಮಾಡಿರುವ ಸಾಧನೆ, ಸಂಶೋಧನೆಯನ್ನು ಗುರುತಿಸಿ ನೀಡಲಾಗಿದೆ. ೨೦೨೨ರಲ್ಲಿ ಭಾರತದಲ್ಲಿ ಒಬ್ಬರನ್ನೇ ಆಯ್ಕೆ ಮಾಡಲಾಗಿದೆ. ಸಹಜವಾಗಿ ಮೈಸೂರು ವಿವಿ, ಕರ್ನಾಟಕಕ್ಕೆ ದೊಡ್ಡ ಹೆಸರು ದೊರೆತಿದೆ ಎಂದರು. ಅಭಿವೃದ್ಧಿ ಹೊಂದಿದ ದೇಶಗಳಲ್ಲಿ ವಿಜ್ಞಾನವನ್ನು ಯಾವ ರೀತಿ ಅಭಿವೃದ್ಧಿಪಡಿಸಬೇಕು ಎನ್ನುವ ಚಿಂತನೆ ಮಾಡಲಾಗುತ್ತಿದೆ. ಅದೇರೀತಿ ಭಾರತದಲ್ಲೂ ಆಗಬೇಕು. ಇತ್ತೀಚಿನ ದಿನಗಳಲ್ಲಿ ಬೋಧಕ ಸಿಬ್ಬಂದಿ ಇಲ್ಲದ ಕಾರಣ ಸಂಶೋಧನೆಗಳು ನಡೆಯುತ್ತಿಲ್ಲ. ಭಾರತದಲ್ಲಿ ಪತ್ತೆ ಮಾಡಿದ ಕೋವ್ಯಾಕ್ಸಿನ್ ಇಡೀ ಜಗತ್ತಿಗೆ ಬಳಕೆಯಾಯಿತು. ಅದೇ ರೀತಿ ಕ್ಯಾನ್ಸರ್ ಸೇರಿದಂತೆ ಇನ್ನಿತರ ಕಾಯಿಲೆಗಳಿಗೆ ಬೇರೆ ದೇಶಗಳನ್ನು ಅವಲಂಬಿಸದೆ ನಮ್ಮಲ್ಲಿ ಕಂಡುಹಿಡಿಯಬೇಕು ಎಂದು ಹೇಳಿದರು. ವಿಜ್ಞಾನ ಕ್ಷೇತ್ರಕ್ಕೆ ಸರಿಯಾದ ಪ್ರೋತ್ಸಾಹ,ಉತ್ತೇಜನ ದೊರೆಯುತ್ತಿಲ್ಲ. ನಾವು ಸರ್ಕಾರಕ್ಕೆ ಸಲಹೆಗಳನ್ನು ನೀಡಬಹುದು. ಅದನ್ನು ಸ್ವೀಕರಿಸಿ ಅನುಷ್ಠಾನಗೊಳಿಸುವುದು ಸರ್ಕಾರದ ಹೊಣೆಯಾಗಿದೆ ಎಂದು ಅಭಿಪ್ರಾಯಪಟ್ಟರು.

 

andolana

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಸತ್ಯದ ಆರಾಧಕ ಮೌನವನ್ನು ಅವಲಂಬಿಸುವುದು ಅವಶ್ಯಕ

ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…

6 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 22 ಶನಿವಾರ  

6 hours ago

ಧಾವಂತ ಬದುಕಿಗೆ ಹೊಸ ಚೈತನ್ಯ ನೀಡುವ ಅರವಟ್ಟಿಗೆ

ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…

7 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧೀಜಿ ಆತ್ಮಕತೆಯ ಶತಮಾನೋತ್ಸವಕ್ಕೆ ಆಂದೋಲನ ಕೈಜೋಡಿಸಿರುವುದು ಐತಿಹಾಸಿಕ

ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…

8 hours ago

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

22 hours ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

1 day ago