ಜಿಲ್ಲೆಗಳು

ದೇಶದಲ್ಲಿ ಸಂಶೋಧನೆಗೆ ಉತ್ತೇಜನ ಸಿಗುತ್ತಿಲ್ಲ : ಪ್ರೊ.ರಂಗಪ್ಪ ಬೇಸರ

ಮೈಸೂರು: ಕ್ಯಾನ್ಸರ್, ಅಲ್ಜೈಮರ್ ಸೇರಿದಂತೆ ಇನ್ನಿತರ ಕಾಯಿಲೆಗಳಿಗೆ ವಿದೇಶಿ ಔಷಧಗಳನ್ನು ಅವಲಂಬಿಸುವ ಬದಲಿಗೆ ದೇಶದಲ್ಲೇ ಔಷಧ ತಯಾರುಮಾಡಬೇಕು. ಆದರೆ, ವಿಜ್ಞಾನ ಕ್ಷೇತ್ರದಲ್ಲಿ ಸಾಕಷ್ಟು ಸಂಶೋಧನೆಗಳು ನಡೆಯಲು ಉತ್ತೇಜನ ಸಿಗದ ಕಾರಣ ಸಂಶೋಧಕರು ವಿದೇಶಗಳಿಗೆ ಪಲಾಯನ ಮಾಡುವಂತಾಗಿದೆ ಎಂದು ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ ಬೇಸರ ವ್ಯಕ್ತಪಡಿಸಿದರು.

ಮೈಸೂರು ವಿವಿ ವಿಜ್ಞಾನ ಭವನದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ಟೇಟ್ ಅಕಾಡೆಮಿಕ್, ಸೆಂಟ್ರಲ್ ಅಕಾಡೆಮಿಕ್‌ನಂತೆ ಇಂಟರ್ ನ್ಯಾಷನಲ್ ಅಕಾಡೆಮಿಯಂತೆ ಪ್ರಪಂಚದಲ್ಲೇ ಗಮನಸೆಳೆದಿರುವ ದಿ ವಲ್ಡ್ ರ್ ಅಕಾಡೆಮಿ ಆಫ್ ಸೈನ್ಸಸ್ ಫೆಲೋಶಿಪ್ ದೊರೆತಿರುವುದು ನೋಬಲ್ ಪ್ರಶಸ್ತಿಗಿಂತಲೂ ದೊಡ್ಡದು ಎಂದು ಸಂತಸ ವ್ಯಕ್ತಪಡಿಸಿದರು. ೧೬ ದೇಶಗಳ ಪ್ರತಿನಿಧಿಗಳು ಕುಳಿತು ಆಯ್ಕೆ ಮಾಡುವ ಸಮಿತಿಯಲ್ಲಿ ತಾವು ಮಾಡಿರುವ ಸಾಧನೆ, ಸಂಶೋಧನೆಯನ್ನು ಗುರುತಿಸಿ ನೀಡಲಾಗಿದೆ. ೨೦೨೨ರಲ್ಲಿ ಭಾರತದಲ್ಲಿ ಒಬ್ಬರನ್ನೇ ಆಯ್ಕೆ ಮಾಡಲಾಗಿದೆ. ಸಹಜವಾಗಿ ಮೈಸೂರು ವಿವಿ, ಕರ್ನಾಟಕಕ್ಕೆ ದೊಡ್ಡ ಹೆಸರು ದೊರೆತಿದೆ ಎಂದರು. ಅಭಿವೃದ್ಧಿ ಹೊಂದಿದ ದೇಶಗಳಲ್ಲಿ ವಿಜ್ಞಾನವನ್ನು ಯಾವ ರೀತಿ ಅಭಿವೃದ್ಧಿಪಡಿಸಬೇಕು ಎನ್ನುವ ಚಿಂತನೆ ಮಾಡಲಾಗುತ್ತಿದೆ. ಅದೇರೀತಿ ಭಾರತದಲ್ಲೂ ಆಗಬೇಕು. ಇತ್ತೀಚಿನ ದಿನಗಳಲ್ಲಿ ಬೋಧಕ ಸಿಬ್ಬಂದಿ ಇಲ್ಲದ ಕಾರಣ ಸಂಶೋಧನೆಗಳು ನಡೆಯುತ್ತಿಲ್ಲ. ಭಾರತದಲ್ಲಿ ಪತ್ತೆ ಮಾಡಿದ ಕೋವ್ಯಾಕ್ಸಿನ್ ಇಡೀ ಜಗತ್ತಿಗೆ ಬಳಕೆಯಾಯಿತು. ಅದೇ ರೀತಿ ಕ್ಯಾನ್ಸರ್ ಸೇರಿದಂತೆ ಇನ್ನಿತರ ಕಾಯಿಲೆಗಳಿಗೆ ಬೇರೆ ದೇಶಗಳನ್ನು ಅವಲಂಬಿಸದೆ ನಮ್ಮಲ್ಲಿ ಕಂಡುಹಿಡಿಯಬೇಕು ಎಂದು ಹೇಳಿದರು. ವಿಜ್ಞಾನ ಕ್ಷೇತ್ರಕ್ಕೆ ಸರಿಯಾದ ಪ್ರೋತ್ಸಾಹ,ಉತ್ತೇಜನ ದೊರೆಯುತ್ತಿಲ್ಲ. ನಾವು ಸರ್ಕಾರಕ್ಕೆ ಸಲಹೆಗಳನ್ನು ನೀಡಬಹುದು. ಅದನ್ನು ಸ್ವೀಕರಿಸಿ ಅನುಷ್ಠಾನಗೊಳಿಸುವುದು ಸರ್ಕಾರದ ಹೊಣೆಯಾಗಿದೆ ಎಂದು ಅಭಿಪ್ರಾಯಪಟ್ಟರು.

 

andolana

Recent Posts

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಬಂಗಾಳ-ಕೇರಳದಲ್ಲಿ ಬದಲಾವಣೆಯ ಸುಳಿವು?

ಅಧಿಕಾರ ಹಿಡಿಯಲು ದಿನದ ಇಪ್ಪತ್ನಾಲ್ಕು ಗಂಟೆಯೂ ರಾಜಕೀಯ ಲೆಕ್ಕಾಚಾರ ಹಾಕುವುದರಲ್ಲಿ ನಿಪುಣರೆಂದೇ ಖ್ಯಾತಿ ಪಡೆದಿದ್ದ ಜನತಾದಳದ ಅಗ್ರಗಣ್ಯ ನಾಯಕ ಎಚ್.ಡಿ.…

1 hour ago

ಪೊದೆಗಳ ನಡುವೆ ಮರೆಯಾಗಿರುವ ಚನ್ನಕೇಶವ ದೇವಾಲಯ

ಚಿತ್ರಾ ವೆಂಕಟರಾಜು ಪಿರಿಯಾಪಟ್ಟಣದಲ್ಲಿ ಅಷ್ಟು ಪ್ರಸಿದ್ಧಿ ಪಡೆಯದ ಹೊಯ್ಸಳರ ಕಾಲದ ಚನ್ನಕೇಶವ ದೇವಾಲಯವಿದೆ. ಹೊಯ್ಸಳರ ಶೈಲಿಯ ವಾಸ್ತುಶಿಲ್ಪ ದಲ್ಲಿರುವ ಈ…

2 hours ago

ಮಂಗಳಮುಖಿಯರ ‘ಮನೆ ನ್ಯಾಯ!’

ಅಕ್ಷತಾ ತೃತೀಯ ಲಿಂಗಿಗಳ ಮೇಲೆ ದೌರ್ಜನ್ಯ, ಕಿರುಕುಳ, ಅಪಹರಣ ದಂತಹ ಪ್ರಕರಣಗಳು ದಿನೇದಿನೇ ಕೇಳಿ ಬರುತ್ತಿವೆ. ಪ್ರತೀ ಸಲ ಇಂತಹ…

2 hours ago

ನಳಂದ ಅಕಾಡೆಮಿ

ಗೋವಿಂದರಾಜು ದಲಿತ ವಿದ್ಯಾರ್ಥಿಗಳ ಉನ್ನತ ಓದಿಗೆ ಆಸರೆಯಾಗಿರುವ ಅವ್ವ  ಅದು ಉತ್ತರಪ್ರದೇಶದ ಒಂದು ಇಂಜಿನಿಯರಿಂಗ್ ಕಾಲೇಜ್. ಪದವಿ ಕಲಿತು ಬದುಕನ್ನು…

2 hours ago

ಎರಡೇ ದಿನಕ್ಕೆ 168 ಹೆಕ್ಟೇರ್ ಬಾಳೆ ಬೆಳೆ ನಾಶ

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಬಿರುಗಾಳಿ ಮಳೆಗೆ ಕಮರಿದ ರೈತರ ಕನಸು ಗುಂಡ್ಲುಪೇಟೆ: ರೈತರು ಒಂದಷ್ಟು ಕನಸು ಕಟ್ಟಿಕೊಂಡು ಬೆಳೆಸಿ ಕಟಾವಿಗೆ…

2 hours ago

ಭಾರೀ ಗಾಳಿ-ಮಳೆಯಿಂದ ಬೆಳೆ, ಮನೆಗಳಿಗೆ ಹಾನಿ

ಮಂಜು ಕೋಟೆ ಕೋಟೆ: ಅಂದಾಜು ೫ ಕೋಟಿ ರೂ. ನಷ್ಟ; ಕಂಗಾಲಾದ ರೈತರು, ಸಾರ್ವಜನಿಕರು ಎಚ್.ಡಿ.ಕೋಟೆ: ತಾಲ್ಲೂಕಿನಲ್ಲಿ ಶುಕ್ರವಾರ ಸಂಜೆ…

2 hours ago