ಜಿಲ್ಲೆಗಳು

ಮೂಲ ಸೌಕರ್ಯದಿಂದ ವಂಚಿತರಾದ ನಿವಾಸಿಗಳು

ಚರಂಡಿಯಿಲ್ಲದೇ ರಸ್ತೆ ಮೇಲೆ ಹರಿಯುತ್ತಿರುವ ಕೊಳಚೆ ನೀರು; ಪಂಚಾಯಿತಿ ವಿರುದ್ಧ ಸ್ಥಳೀಯರ ಆಕ್ರೋಶ!

-ಕೆ.ಬಿ.ಶಂಶುದ್ಧೀನ್

ಕುಶಾಲನಗರ: ಕುಶಾಲನಗರ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಗುಂಡೂರಾವ್ ಬಡಾವಣೆಯ ನಿವಾಸಿಗಳು ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿದ್ದು, ಚರಂಡಿ ವ್ಯವಸ್ಥೆಯಿಲ್ಲದೆ ಕೊಳಚೆ ನೀರು ರಸ್ತೆಯಲ್ಲಿಯೇ ಹರಿಯುತ್ತಿದೆ. ಕೂಡಲೇ ಶಾಶ್ವತ ಪರಿಹಾರ ಒದಗಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಕುಶಾಲನಗರ ಪಟ್ಟಣ ಪಂಚಾಯಿತಿಯ ೧೫ನೇ ವಾರ್ಡ್‌ನ ಜಾತ್ರಾ ಮೈದಾನದ ಬಳಿ ಚರಂಡಿ ವ್ಯವಸ್ಥೆಯಿಲ್ಲದೆ, ತ್ಯಾಜ್ಯ ನೀರು ರಸ್ತೆಯ ಮೇಲೆ ಹರಿಯುತ್ತಿದೆ. ಇದರಿಂದ ಸಾರ್ವಜನಿಕರು ಹಾಗೂ ವಾಹನ ಸಂಚಾರಕ್ಕೆ ತೊಡಕುಂಟಾದರೆ, ಮತ್ತೊಂದೆಡೆ ತ್ಯಾಜ್ಯ ನೀರಿನಿಂದ ರಸ್ತೆಯಲ್ಲಿ ಮೂಗು ಮುಚ್ಚಿ ತೆರಳಬೇಕಾದ ದುಸ್ಥಿತಿ ಒದಗಿಬಂದಿದೆ. ಅಕ್ಕಪಕ್ಕದ ಮನೆಯವರಿಗೆ ವಾಸಿಸಲು ಸಾಧ್ಯವಿಲ್ಲದಂತಾಗಿದೆ. ಮನೆಯಲ್ಲಿ ಮಕ್ಕಳು, ಬಾಣಂತಿಯರು ಹಾಗೂ ವೃದ್ಧರು ವಾಸವಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿಯಲ್ಲಿ ಸ್ಥಳೀಯರಿದ್ದಾರೆ. ರಸ್ತೆ ಬದಿಯಲ್ಲಿ ಚರಂಡಿ ನೀರು ನಿಲ್ಲಲು ಹೊಂಡ ನಿರ್ಮಿಸಿದ್ದು, ಕೊಳಚೆ ನೀರು ಸಂಗ್ರಹವಾಗಿ ಸೊಳ್ಳೆಗಳು ಹಾಗೂ ದುರ್ವಾಸನೆಯಿಂದ ಬದುಕುವಂತಾಗಿದೆ.

ರಸ್ತೆ ಬದಿಯಲ್ಲಿರುವ ಹೊಂಡದಲ್ಲಿ ಚರಂಡಿ ನೀರು ನಿಂತಿರುವುದು.

ಕನಿಷ್ಠ ಮೂಲಭೂತ ಸೌಕರ್ಯ ಒದಗಿಸಲು ಸಾಧ್ಯವಾಗದಿದ್ದರೆ ಪಂಚಾಯಿತಿ ಹಾಗೂ ಜನಪ್ರತಿನಿಧಿಗಳು ಯಾಕೆ ಬೇಕು ಎಂದು ಪ್ರಶ್ನಿಸಿರುವ ಸ್ಥಳೀಯರು, ಜನಪ್ರತಿನಿಧಿಗಳಲ್ಲಿ ಆಸಕ್ತಿಯ ಕೊರತೆ ಎದ್ದು ಕಾಣುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜು, ಎಂ.ಜಿ.ಎಂ. ಕಾಲೇಜು ಹಾಗೂ ಬೈಚನಹಳ್ಳಿಯ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ನೂರಾರು ವಿದ್ಯಾರ್ಥಿಗಳು ಈ ರಸ್ತೆ ಮೂಲಕವೇ ಹೋಗುತ್ತಾರೆ. ಈ ಸಂದರ್ಭದಲ್ಲಿ ವಾಹನಗಳು ಸಂಚರಿಸುವಾಗ ಕೊಳಚೆ ನೀರು ಸಮವಸ್ತ್ರಕ್ಕೆ ತಗುಲಿ ವಿದ್ಯಾರ್ಥಿಗಳು ಮನೆಗೆ ಹಿಂದಿರುಗಿರುವ ನಿದರ್ಶನಗಳಿವೆ.\

ಪ್ರತಿಭಟನೆ ನಡೆಸಿದ್ದರೂ ಪ್ರತಿಫಲ ಶೂನ್ಯ: ಚರಂಡಿ ವ್ಯವಸ್ಥೆಯಿಲ್ಲದೆ ಇಲ್ಲಿನ ಜನರಿಗೆ ತೊಂದರೆಯಾಗುತ್ತಿರುವ ಬಗ್ಗೆ ಸ್ಥಳೀಯರು ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿದ್ದಾರೆ. ಆದರೂ ಯಾವುದೇ ಪ್ರೋಂಜನವಾಗಿಲ್ಲ. ರಸ್ತೆ ಬದಿಯಲ್ಲಿ ಕೊಳಚೆ ನೀರು ನಿಂತು ಸೊಳ್ಳೆಗಳು ಉತ್ಪತ್ತಿಯಾಗುತ್ತಿವೆ. ಇದರಿಂದ ಸಾಂಕ್ರಾಮಿಕ ರೋಗಗಳು ಹರಡಲಿದ್ದು, ಕೂಡಲೇ ಇದರ ಬಗ್ಗೆ ಸಂಬಂಧಪಟ್ಟ ಕುಶಾಲನಗರ ಪಟ್ಟಣ ಪಂಚಾಯಿತಿ ಗಮನಹರಿಸಬೇಕು ಎಂದು ಸ್ಥಳೀಯ ನಿವಾಸಿಗಳು ಪಟ್ಟು ಹಿಡಿದಿದ್ದಾರೆ.

ಒಟ್ಟಿನಲ್ಲಿ ಗುಂಡೂರಾವ್ ಬಡಾವಣೆಯ ನಿವಾಸಿಗಳು, ಹಲವು ವರ್ಷಗಳಿಂದ ಚರಂಡಿ ವ್ಯವಸ್ಥೆಯಿಲ್ಲದೆ ಸಮಸ್ಯೆಯನ್ನು ಅನುಭವಿಸುತ್ತಾ ಬಂದಿದ್ದು, ಆದಷ್ಟು ಬೇಗನೇ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಿಕೊಡಬೇಕಾಗಿದೆ.

ಗುಂಡೂರಾವ್ ಬಡಾವಣೆಯಲ್ಲಿ ಕೊಳಚೆ ನೀರು ರಸ್ತೆಯ ಮೇಲೆ ಹರಿಯುತ್ತಿರುವ ಬಗ್ಗೆ ಸ್ಥಳೀಯ ವಾರ್ಡ್ ಸದಸ್ಯರ ಬಳಿ ಮಾತುಕತೆ ನಡೆಸಲಾಗಿದೆ. ಈ ಬಗ್ಗೆ ಅಧಿಕಾರಿಗೊಂದಿಗೆ ಚರ್ಚಿಸಿ, ಆದಷ್ಟು ಬೇಗ ಸಮಸ್ಯೆಯನ್ನು ಬಗೆಹರಿಸಿಕೊಡಲಾಗುವುದು.
– ಜಯವರ್ಧನ್, ಕುಶಾಲನಗರ ಪಟ್ಟಣ ಪಂಚಾಯಿತಿ ಅಧ್ಯಕ್ಷರು.

ಗುಂಡೂರಾವ್ ಬಡಾವಣೆಯ ಜಾತ್ರಾ ಮೈದಾನದ ರಸ್ತೆಯಲ್ಲಿ ಚರಂಡಿಯ ಕೊಳಚೆ ನೀರು ರಸ್ತೆಯ ಮೇಲೆ ಹರಿಯುತ್ತಿದೆ. ಇದರ ಬಗ್ಗೆ ಸ್ಥಳೀಯ ಪ್ರತಿನಿಧಿಗಳಾಗಲಿ, ಪಂಚಾಯಿತಿಯಾಗಲಿ ಕ್ರಮ ಕೈಗೊಳ್ಳದಿರುವುದು ಖಂಡನೀಯ. ಕೂಡಲೇ ಇದರ ಬಗ್ಗೆ ಗಮನಹರಿಸಬೇಕು.
– ಆದಂ, ಡಾ.ಬಿ.ಆರ್.ಅಂಬೇಡ್ಕರ್ ಜನಪರ ವೇದಿಕೆ ತಾಲ್ಲೂಕು ಅಧ್ಯಕ್ಷರು.

 

 

 

andolana

Recent Posts

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ 140ರಿಂದ 150 ಸ್ಥಾನ ಗೆಲ್ಲುತ್ತೆ: ನಿಖಿಲ್‌ ಕುಮಾರಸ್ವಾಮಿ ವಿಶ್ವಾಸ

ಬೆಂಗಳೂರು: ಮುಂದಿನ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್‌ ಅಲ್ಲ ಎನ್‌ಡಿಎ 140ರಿಂದ 150 ಸ್ಥಾನ ಗೆಲ್ಲುತ್ತದೆ ಎಂದು ಜೆಡಿಎಸ್‌…

3 mins ago

ಬೆಂಗಳೂರಿನಲ್ಲಿ ಹೊತ್ತಿ ಉರಿದ ಮತ್ತೊಂದು ಖಾಸಗಿ ಬಸ್‌

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಇಂದು ಬೆಳ್ಳಂಬೆಳಿಗ್ಗೆ ಭೀಕರ ಅಗ್ನಿ ಅವಘಡವೊಂದು ಸಂಭವಿಸಿದೆ. ಚಂದ್ರಾ ಲೇಔಟ್‌ನ ಬಿಎಂಟಿಸಿ ಡಿಪೋ ಬಳಿ ಇಂದು…

25 mins ago

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಮೂರು ಮರಿಗಳಿಗೆ ಜನ್ಮ ನೀಡಿದ ಗಾಮಿನಿ ಚೀತಾ

ಮಧ್ಯಪ್ರದೇಶ: ಇಲ್ಲಿನ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಗಾಮಿನಿ ಚೀತಾ ಮೂರು ಮರಿಗಳಿಗೆ ಜನ್ಮ ನೀಡಿದೆ. ಕೇಂದ್ರ ಪರಿಸರ ಸಚಿವ ಭೂಪೇಂದರ್‌…

40 mins ago

ಗ್ರಾಮದೇವತೆ ಹಬ್ಬದಲ್ಲಿ ಅವಘಡ: ಬಂಡಿ ಓಡಿಸುವಾಗ ಕೆಳಗೆ ಬಿದ್ದು ಯುವಕ ಸಾವು

ಮೈಸೂರು: ಗ್ರಾಮದೇವತೆ ಹಬ್ಬದಲ್ಲಿ ಬಂಡಿ ಓಡಿಸುವಾಗ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ತಲಕಾಡು ಗ್ರಾಮದಲ್ಲಿ ನಡೆದಿದೆ.…

2 hours ago

ಹುಣಸೂರು| ಅಕ್ರಮ ರಸಗೊಬ್ಬರ ದಾಸ್ತಾನು ಗೋದಾಮಿನ ಮೇಲೆ ದಾಳಿ: 1296 ಮೂಟೆ ಯೂರಿಯಾ ವಶ

ಹುಣಸೂರು: ತಾಲ್ಲೂಕಿನ ಸಾಲುಮರದ ತಿಮ್ಮಕ್ಕ ಉದ್ಯಾನವನ ಪಕ್ಕದ ಕಲ್‌ಬೆಟ್ಟದ ಬಳಿ ಗೋಡೌನ್ ಒಂದರಲ್ಲಿ ೧೮ ಲಕ್ಷ ರೂ. ಮೌಲ್ಯದ ೧,೨೯೬…

2 hours ago

ಓದುಗರ ಪತ್ರ: ಫ್ಲೆಕ್ಸ್ ಹಾವಳಿಗೆ ಕಡಿವಾಣ ಹಾಕಿ

ಮೈಸೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಫ್ಲೆಕ್ಸ್ ಹಾವಳಿ ಮಿತಿ ಮೀರಿದ್ದು, ರಸ್ತೆ ಬದಿಯಲ್ಲಿ ಹಾಕಿರುವ ಬೃಹದಾಕಾರದ ಫ್ಲೆಕ್ಸ್‌ಗಳಿಂದಾಗಿ ಪ್ರತಿನಿತ್ಯ ರಸ್ತೆಯಲ್ಲಿ ಸಂಚರಿಸುವ…

4 hours ago