ಜಿಲ್ಲೆಗಳು

ರಾಜಕೀಯ ಪ್ರವೇಶಕ್ಕಾಗಿ ಪೊಲೀಸ್ ಇನ್ಸ್​ಪೆಕ್ಟರ್​ ಹುದ್ದೆಗೆ ರಾಜೀನಾಮೆ ನೀಡಿದ ಬಿ.ಪುಟ್ಟಸ್ವಾಮಿ

ಚಾಮರಾಜನಗರ: ರಾಜಕೀಯ ಪ್ರವೇಶಕ್ಕಾಗಿ ಬಿ.ಪುಟ್ಟಸ್ವಾಮಿ ಅವರು ಪೊಲೀಸ್ ಇನ್ಸ್​ಪೆಕ್ಟರ್​ ಹುದ್ದೆಗೆ ರಾಜೀನಾಮೆ ನೀಡಿರುವುದಾಗಿ ಆಂದೋಲನಕ್ಕೆ ತಿಳಿಸಿದ್ದಾರೆ. ಬಿ.ಪುಟ್ಟಸ್ವಾಮಿ ಅವರು ಪ್ರಸ್ತುತ ಮೈಸೂರಿನಲ್ಲಿ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಪೊಲೀಸ್ ಕಾನ್ಸ್​ಟೇಬಲ್, ಪಿಎಸ್​ಐ, ಇನ್ಸ್​ಪೆಕ್ಟರ್ ಸತತ​ ಆಗಿ 27 ವರ್ಷ ಸೇವೆ ಸಲ್ಲಿಸಿರುವ ಇವರು ತಮ್ಮ ಕರ್ತವ್ಯದ ಅವಧಿ  13 ವರ್ಷ ಬಾಕಿ ಇರುವಾಗಲೇ ಸ್ವಯಂ ನಿವೃತ್ತಿ ಬಯಸಿ ರಾಜೀನಾಮೆ ಸಲ್ಲಿಸಿದ್ದಾರೆ. ಬಿ.ಪುಟ್ಟಸ್ವಾಮಿ ಚಾಮರಾಜನಗರ, ಕೊಳ್ಳೇಗಾಲ ಗ್ರಾಮಾಂತರ, ರಾಮಾಪುರ, ಕೆಆರ್​ಎಸ್​ ಠಾಣೆ, ಅಗರ-ಮಾಂಬಳ್ಳಿ, ಹುಣಸೂರು ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಣೆ ಮಾಡಿದ್ದಾರೆ. ಅಲ್ಲದೆ ಬಿ.ಪುಟ್ಟಸ್ವಾಮಿ ಅಭಿಮಾನಿ ಬಳಗ, ಸೇವಾ ಟ್ರಸ್ಟ್​ ಮೂಲಕ ಚಾಮರಾಜನಗರ, ಕೊಳ್ಳೆಗಾಲ, ಗುಂಡ್ಲುಪೇಟೆ ಸೇರಿದಂತೆ ಜಿಲ್ಲೆಯ ಹಲವು ಕ್ಷೇತ್ರಗಳಲ್ಲಿ ತಮ್ಮದೇ ಸೇವೆಯನ್ನು ಸಲ್ಲಿಸುತ್ತಿದ್ದಾರೆ.

ಈ ಬಗ್ಗೆಆಂದೋಲನದೊಟ್ಟಿಗೆ ಮಾತನಾಡಿದ ಅವರು ಸದ್ಯಕ್ಕೆ ನಾನು ಯಾವ ಪಕ್ಷದ ಅಭ್ಯರ್ಥಿ ಎಂಬುದನ್ನು ಇನ್ನೂ ನಿರ್ಧಾರ ಮಾಡಿಕೊಂಡಿಲ್ಲ, ನನ್ನ ಬೆಂಬಲಿಗರು, ಸ್ನೇಹಿತರು, ಕುಟುಂಬಸ್ಥರ ಜೊತೆ  ಚರ್ಚಿಸಿ ತಿಂಗಳಾಂತ್ಯದಲ್ಲಿ ತಾವು ಬೆಂಬಲಿಸುವ ಪಕ್ಷವನ್ನು ತಿಳಿಸುವುದಾಗಿ ಮಾಹಿತಿ ನೀಡಿದ್ದಾರೆ.
ಮುಂದುವರಿದು ಕಷ್ಟದಲ್ಲಿರುವ ಕ್ಷೇತ್ರದ ಜನರಿಗೆ ನೆರವಾಗುವ ಮೂಲಕ ಬಡತನ, ಶಿಕ್ಷಣ ಸೇರಿದಂತೆ ಸಾರ್ವಜನಿಕರ ಸಮಸ್ಯೆಗಳುಗೆ ನೆರವಾಗುದ ಉದ್ದೇಶದಿಂದ ರಾಜಕೀಯಕ್ಕೆ ಪಾದಾರ್ಪಣೆ ಮಾಡುತ್ತಿದ್ದೇನೆ ಎಂದರು.

andolanait

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

8 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

8 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

8 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

8 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

8 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

8 hours ago