ಜಿಲ್ಲೆಗಳು

ನಿವೃತ್ತ ಯೋಧನ ಬೇಸಾಯ ಪ್ರೀತಿಗೆ ಒಲಿದ ರಾಜ್ಯೋತ್ಸವ ಪ್ರಶಸ್ತಿ

ಮಡಿಕೇರಿ: ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಗೋಣಿಕೊಪ್ಪಲು ಬಳಿಯ ನಲ್ಲೂರಿನ ನಿವೃತ್ತ ಯೋಧ ಸೋಮೆಂಗಡ ಗಣೇಶ್ ತಿಮ್ಮಯ್ಯ ಅವರಿಗೆ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ಒಲಿದಿದೆ.
ತಿಮ್ಮಯ್ಯ ಉತ್ತಮ ಪ್ರಗತಿಪರ ಕೃಷಿಕರು. ಕೃಷಿ ವಿಜ್ಞಾನ ಕೇಂದ್ರದ ಜತೆ ನಿರಂತರ ಸಂಬಂಧ ಹೊಂದಿರುವ ತಿಮ್ಮಯ್ಯ ವೈಜ್ಞಾನಿಕ ಪದ್ಧತಿಯಲ್ಲಿ ಮಣ್ಣು ಪರೀಕ್ಷೆ ಮಾಡಿಸಿ, ಕೃಷಿ ಮಾಡುತ್ತಿದ್ದಾರೆ. ಕಾರ್ಮಿಕರ ಕೊರತೆ ಇರುವುದರಿಂದ ಕೃಷಿಗೆ ಯಂತ್ರಗಳ ಮೊರೆ ಹೋಗಿರುವ ಗಣೇಶ್ ತಿಮ್ಮಯ್ಯ, ಅದರಲ್ಲೂ ಲಾಭ ಗಳಿಸುತ್ತಿದ್ದಾರೆ.
ಇವರ ಶ್ರಮ ಹಾಗೂ ಕೃಷಿಯಲ್ಲಿ ಗಳಿಸಿರುವ ಸಾಧನೆಯನ್ನು ಗಮನಿಸಿ ರಾಜ್ಯಮಟ್ಟದವರೆಗೂ ಹಲವು ಪ್ರಶಸ್ತಿಗಳು ಲಭಿಸಿವೆ. ರಾಜ್ಯ ಕೃಷಿ ಇಲಾಖೆ ಕಳೆದ ವರ್ಷ ಕೃಷಿ ಪಂಡಿತ ಪ್ರಶಸ್ತಿ ನೀಡಿ ಗೌರವಿಸಿದೆ. ಧರ್ಮಸ್ಥಳದ ಧರ್ಮಾಧಿಕಾರಿ ಇವರನ್ನು ಸನ್ಮಾನಿಸಿದ್ದಾರೆ. ರಾಜ್ಯಮಟ್ಟದ ಕೃಷಿ ಮೇಳದಲ್ಲಿ ಹಲವು ಪ್ರಶಸ್ತಿಗಳು ಲಭಸಿವೆ. ಕೃಷಿ ವಿಶ್ವವಿದ್ಯಾಲಯಗಳು ಪ್ರಶಸ್ತಿ ನೀಡಿ ಗೌರವಿಸಿವೆ. ಜತೆಗೆ, ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಿ ಕೃಷಿಕರಿಗೆ ಹತ್ತು ಹಲವು ಮಾಹಿತಿಗಳನ್ನು ನೀಡಿದ್ದಾರೆ.
೩ನೇ ವಯಸ್ಸಿನಲ್ಲಿ ತಂದೆಯನ್ನು ಕಳೆದುಕೊಂಡ ಇವರು ೮ ನೇ ವಯಸ್ಸಿನಲ್ಲಿ ತಾಯಿಯನ್ನೂ ಕಳೆದುಕೊಂಡರು. ಆಗ ಮೂವರು ಅಕ್ಕಂದಿರು, ಒಬ್ಬ ತಂಗಿಯ ನಡುವೆ ಬದುಕು ಕಟ್ಟಿಕೊಳ್ಳಲು ಹೆಣಗಾಡಿದ ತಿಮ್ಮಯ್ಯ ತಮ್ಮ ತಂದೆ ಮಾಡಿದ ಭೂಮಿ ಉಳಿಸಿಕೊಳ್ಳಲು ಪ್ರೌಢಶಾಲೆ ಅಧ್ಯಯನ ಮಾಡುತ್ತಿರುವಾಗಲೇ ಗದ್ದೆ ಕೆಲಸಕ್ಕೆ ಇಳಿದರು. ಶಾಲೆಗೆ ಹೋಗುವವರೆಗೆ ಗದ್ದೆ ಉಳುಮೆ ಮಾಡುವುದು ಅನಿವಾರ್ಯವಾಗಿತ್ತು. ೧೦ನೇ ತರಗತಿಯವರೆಗೆ ಓದಿ ಬಳಿಕ ಸೇನೆಗೆ ಹೋದರು. ೧೬ ವರ್ಷಗಳ ಕಾಲ ಸೇನೆಯಲ್ಲಿ ಹವಾಲ್ದಾರ್ ಆಗಿ ಸೇವೆ ಸಲ್ಲಿಸಿ, ಸ್ವಯಂ ನಿವೃತ್ತಿ ಪಡೆದರು. ಆನಂತರ ಕೃಷಿಯಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡರು.
ಭತ್ತದ ಜತೆಗೆ ಉತ್ತಮ ಕಾಫಿ ಬೆಳೆಗಾರರೂ ಆಗಿದ್ದಾರೆ. ಅಡಿಕೆ, ತೆಂಗು, ಬಾಳೆ, ಮಾವು, ಕಿತ್ತಳೆ, ಮೆಣಸು ಮೊದಲಾದ ಸಮಗ್ರ ಕೃಷಿ ಪದ್ಧತಿ ಕೈಗೊಂಡಿದ್ದಾರೆ. ಕೋಳಿ, ಜಾನುವಾರು, ಜೇನು ಸಾಕಣೆ ಮೊದಲಾದವುಗಳನ್ನೂ ಕೈಗೊಂಡಿದ್ದಾರೆ. ಒಂದು ಬೆಳೆ ಕೈಕೊಟ್ಟರೆ ಮತ್ತೊಂದು ಬೆಳೆ ಫಲ ನೀಡುತ್ತದೆ. ಯಾವಾಗಾಲೂ ಒಂದೇ ಬೆಳೆ ಹಾಕಬಾರದು. ಜತೆಗೆ ಕೃಷಿ ಬಗ್ಗೆ ಪ್ರೀತಿ ಇರಬೇಕು ಎಂಬುದು ತಿಮ್ಮಯ್ಯ ಅವರ ಮನದಾಳದ ಮಾತು. ತಿಮ್ಮಯ್ಯ ಅವರ ಈ ಎಲ್ಲ ಸಾಧನೆಗಳ ಹಿಂದೆ ಪತ್ನಿ ಸ್ವಾತಿ ಅವರ ನಿರಂತರ ನೆರವಿದೆ.


ಕೃಷಿಯನ್ನು ಪರಿಗಣಿಸಿದ್ದು ಸಂತೋಷ ತಂದಿದೆ. ಕೃಷಿಯನ್ನು ಎಲ್ಲರಿಗೂ ತಲುಪಿಸುವ ಕೆಲಸವನ್ನು ೩೦ ವರ್ಷಗಳಿಂದ ಮಾಡುತ್ತಿದ್ದೇನೆ. ಕೃಷಿಯ ಮಹತ್ವದ ಬಗ್ಗೆ ಎಲ್ಲಾ ಕಡೆ ಜಾಗೃತಿ ಉಂಟು ಮಾಡುತ್ತಿದ್ದೇನೆ. ಪ್ರಶಸ್ತಿ ಲಭಿಸಿದ್ದು ಸಮಧಾನ ತಂದಿದ್ದು, ಕೆಲಸಕ್ಕೆ ಸ್ಪೂರ್ತಿ ನೀಡಿದೆ.
ಸೋಮೆಂಗಡ ಗಣೇಶ್ ತಿಮ್ಮಯ್ಯ, ಪ್ರಗತಿಪರ ಕೃಷಿಕ, ಕೊಡಗು

andolanait

Recent Posts

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ : ರಾಜ್ಯ ಕಾಂಗ್ರೆಸ್‌ನಲ್ಲಿ ಒಗ್ಗಟ್ಟು : ಬಿಜೆಪಿ -ಜಾ.ದಳ ನಾಯಕರಿಗೆ ಆಘಾತ

ಪರಿಷತ್ ಚುನಾವಣೆ ಫಲಿತಾಂಶದ ಮೂಲಕ ಭಿನ್ನಮತೀಯರು, ಮೈತ್ರಿ ಕೂಟಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದ ಡಿಕೆಶಿ ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು…

47 mins ago

ಆಂದೋಲನ ಸಂಪಾದಕೀಯ | ಅಡ್ಡ ಮತದಾನ : ರಾಜಕಾರಣದ ನೈತಿಕ ದಿವಾಳಿತನ

ಅಡ್ಡ ಮತದಾನ ಮಾಡಿ ‘ಆತ್ಮ ಸಾಕ್ಷಿ’ಯೆಂಬ ತಡೆಗೋಡೆಯ ರಕ್ಷಣೆ ಪಡೆದಿರುವ ಶಾಸಕರ ಪತ್ತೆಗೆ ‘ಸತ್ಯಶೋಧನೆ’, ‘ಆಣೆ-ಪ್ರಮಾಣ’ಗಳೆಲ್ಲವೂ ಗುಡ್ಡ ಅಗೆದು ಇಲಿ…

1 hour ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 22 ಸೋಮವಾರ

2 hours ago

ನೀಟ್-ಯುಜಿ ಮರುಪರೀಕ್ಷೆ : ಪರೀಕ್ಷೆ ಬರೆದ 22 ಲಕ್ಷ ವಿದ್ಯಾರ್ಥಿಗಳು

ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…

13 hours ago

ತಮಿಳುನಾಡು ಸೀಫುಡ್‌ ಘಟಕದಲ್ಲಿ ಅನಿಲ ಸೋರಿಕೆ ; 7 ಜನ ಸಾವು, ಹಲವರು ಗಂಭೀರ

ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…

14 hours ago

ಬೆಂಗಾಳಿಗಳನ್ನು ಬಾಂಗ್ಲಾ ವಲಸಿಗರೆಂದು ಗ್ರಹಿಕೆ ; ಮೈಸೂರು ರೈಲ್ವೆ ನಿಲ್ದಾಣದಲ್ಲಿ ಕೆಲಕಾಲ ಆತಂಕ

ಆಧಾರ್‌ ಕಾರ್ಡ್‌ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…

15 hours ago