ಜಿಲ್ಲೆಗಳು

ದಂಡ ಪಾವತಿಸಲು ಮುಗಿಬಿದ್ದ ಸವಾರರು

ಸಂಚಾರ ನಿಯಮ ಉಲ್ಲಂಘನೆ: 3 ದಿನಗಳಲ್ಲಿ 80 ಲಕ್ಷರೂ. ದಂಡ ಸಂಗ್ರಹ
ಬಿ.ಎನ್.ಧನಂಜಯಗೌಡ

ಮೈಸೂರು: ಸಂಚಾರ ನಿಯಮ ಉಲ್ಲಂಘಿಸಿ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡವರಿಗೆ ಸರ್ಕಾರ ಶೇ.50 ರಿಯಾಯಿತಿ ಘೋಷಿಸಿದ ಬೆನ್ನಲ್ಲೇ ದಂಡ ಸಂಗ್ರಹಕ್ಕೆ ಮುಂದಾಗಿರುವ ನಗರ ಪೊಲೀಸರು ಮೂರು ದಿನಗಳಲ್ಲಿ (ಭಾನುವಾರ ಸಂಜೆವರೆಗೆ)  20,00,000 ರೂ. ದಂಡದ ಮೊತ್ತ ಸಂಗ್ರಹಿಸಿದ್ದಾರೆ.

ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಪ್ರಕರಣಗಳಲ್ಲಿ ಫೆ.11ರ ಒಳಗಾಗಿ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ ದಂಡದ ಮೊತ್ತದಲ್ಲಿ ಶೇ.50 ರಿಯಾಯಿತಿ ನೀಡುವ ಮೂಲಕ ಮೈಸೂರು ನಗರ ಸಂಚಾರ ಪೊಲೀಸರಿಂದ ಸಂಚಾರ ಇ-ಚಲನ್ ಪಡೆದು ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿರುವ ವಾಹನ ಸವಾರರು ಈ ಸದಾವಕಾಶವನ್ನು ಬಳಸಿಕೊಂಡು ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳುವಂತೆ ನಗರ ಪೊಲೀಸರು ತಿಳಿಸಿದ ಬೆನ್ನಲ್ಲೇ ಪ್ರಕರಣ ಬಾಕಿ ಇರುವ ಪ್ರಕರಣಗಳ ದಂಡ ಶುಲ್ಕವನ್ನು ಪಾವತಿಸಲು ಮುಂದಾಗಿದ್ದಾರೆ.

ಈ ಹಿನ್ನೆಲೆಯಲ್ಲಿ ಶುಕ್ರವಾರ 1734 ಪ್ರಕರಣಗಳಿಗೆ ಸಂಬಂಧಪಟ್ಟಂತೆ 3,67,150 ರೂ. ದಂಡ ಸಂಗ್ರಹವಾದರೆ ಶನಿವಾರ 6652  ಪ್ರಕರಣಗಳಿಗೆ ಸಂಬಂಧಪಟ್ಟಂತೆ 13,50,550  ರೂ.ಸಂಗ್ರಹವಾಗಿದೆ.

ಈ ಹಿನ್ನೆಲೆಯಲ್ಲಿ ವಾಹನ ಸವಾರರು ನಗರದ ಸಂಚಾರ ಠಾಣೆಗಳಲ್ಲಿ, ಪೊಲೀಸ್ ಆಯುಕ್ತರ ಕಚೇರಿಯ ಟ್ರಾಫಿಕ್ ಮ್ಯಾನೇಜ್‌ಮೆಂಟ್ ಸೆಂಟರ್‌ನಲ್ಲಿ ವಾಹನ ಪರಿಶೀಲನೆ ಮಾಡುವ ಟ್ರಾಫಿಕ್ ಪೊಲೀಸ್ ಅಧಿಕಾರಿಗಳ ಬಳಿ, ಕರ್ನಾಟಕ ಒನ್ ಮೊಬೈಲ್ ಅಪ್ಲಿಕೇಷನ್ ಮೂಲಕ ದಂಡದ ಹಣವನ್ನು ಪಾವತಿ ಮಾಡುತ್ತಿದ್ದಾರೆ. ದಂಡ ಪಾವತಿಸಲು ಕರ್ನಾಟಕ ಒನ್ ಮೊಬೈಲ್ ಅಪ್ಲಿಕೇಷನ್ ಹೆಚ್ಚು ಬಳಸುತ್ತಿರುವ ಹಿನ್ನೆಲೆಯಲ್ಲಿ ಆಗಾಗ ಇದರ ಕಾರ್ಯನಿರ್ವಹಣೆ ತಡವಾಗುತ್ತಿದೆ ಎಂಬ ಅಭಿಪ್ರಾಯಗಳು ದಂಡ ಪಾವತಿಸುವವರಿಂದ ಕೇಳಿ ಬಂದಿದೆ.


ಬಹುತೇಕರು ತಮ್ಮ ಹತ್ತಿರದ ಸಂಚಾರ ಠಾಣೆಗಳಿಗೆ ತೆರಳಿ ದಂಡ ಪಾವತಿಸುತ್ತಿದ್ದಾರೆ. ಉತ್ತಮ ಸ್ಪಂದನೆ ಬರುತ್ತಿದೆ. ಇಂದು ತಮಿಳುನಾಡಿನ ರಾಜ್ಯಪಾಲರು ಬಂದ ಹಿನ್ನೆಲೆಯಲ್ಲಿ ಎಲ್ಲ ಸಿಬ್ಬಂದಿ ಆ ಕರ್ತವ್ಯದಲ್ಲಿ ಇದ್ದರು. ಭಾನುವಾರದಿಂದ ಇನ್ನೂ ಹೆಚ್ಚಿನ ಸವಾರರು ದಂಡ ಪಾವತಿಸುವ ನಿರೀಕ್ಷೆ ಇದೆ. ಬೆಳಿಗ್ಗೆ 8 ರಿಂದ ರಾತ್ರಿ 11 ಗಂಟೆಯವರೆಗೂ ದಂಡ ಪಾವತಿ ಮಾಡಲು ಅವಕಾಶವಿದೆ.

– ಪರುಶುರಾಮಪ್ಪ, ಎಸಿಪಿ, ಸಂಚಾರ ಉಪವಿಭಾಗ


ದಿನಾಂಕ                ಪ್ರಕರಣ                              ದಂಡ ಸಂಗ್ರಹ

ಫೆ. 03                       1,734                                       3,67,150 ರೂ

ಫೆ. 04                       21,842                                    46,56,800 ರೂ 

ಫೆ. 05                       14,933                                   30,58,950 ರೂ ( ರಾತ್ರಿ.10ರವರೆಗೆ)           

 

andolanait

Recent Posts

ಓದುಗರ ಪತ್ರ: ಪ್ರಾಮಾಣಿಕತೆ ಮೆರೆದ ಕುಟುಂಬ

ಇತ್ತೀಚಿನ ದಿನಗಳಲ್ಲಿ ಪ್ರಾಮಾಣಿಕರ ಸಂಖ್ಯೆ ಕಡಿಮೆಯಾಗಿದ್ದು, ಹಣಗಳಿಕೆಗಾಗಿ ಸುಳ್ಳು, ಮೋಸ, ಕೊಲೆ ಸುಲಿಗೆ ಪ್ರಕರಣಗಳೇ ಹೆಚ್ಚಾಗಿ ಕಂಡುಬರುತ್ತಿವೆ. ನಿಧಿಗಾಗಿ ವಾಮಾಚಾರ…

2 hours ago

ಓದುಗರ ಪತ್ರ: ಬೆಳೆ ನಷ್ಟಕ್ಕೆ ಪರಿಹಾರ ನೀಡಿ

ಪ್ರಸ್ತುತ ರಾಜ್ಯದಲ್ಲಿ ತೀವ್ರ ಚಳಿ ಮತ್ತು ಅಕಾಲಿಕ ತುಂತುರು ಮಳೆಯಿಂದ ರೈತರು ಕಂಗಾಲಾಗಿದ್ದಾರೆ. ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದ್ದು,…

2 hours ago

ಓದುಗರ ಪತ್ರ: ಚಿನ್ನ , ಬೆಳ್ಳಿ ದರ ಏರಿಕೆಗೆ ಕಡಿವಾಣ ಹಾಕಿ

ಪ್ರತಿಯೊಬ್ಬರೂ ಇಷ್ಟಪಡುವ ವಸ್ತುಗಳಲ್ಲಿ ಚಿನ್ನ ಪ್ರಮುಖವಾಗಿದೆ. ಮಧ್ಯಮ ವರ್ಗದ ಜನರು ಪೈಸೆ ಪೈಸೆ ಕೂಡಿಟ್ಟು ಚಿನ್ನ ಖರೀದಿಸುತ್ತಿದ್ದು, ಮದುವೆ ಮೊದಲಾದ…

2 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: 10ನೇ ವಯಸ್ಸಿನಲ್ಲೇ ಹೆಡ್ ಮಾಸ್ಟರಾಗಿ ವಿಶ್ವ ದಾಖಲೆ ಬರೆದ ಬಾಬರ್ ಅಲಿ !

ಪಂಜುಗಂಗೊಳ್ಳಿ  ೭,೫೦೦ಕ್ಕೂ ಹೆಚ್ಚು ಮಕ್ಕಳ ಬದುಕಿಗೆ ಆಸರೆಯಾದ ಆನಂದ ಶಿಕ್ಷಾ ನಿಕೇತನ ಪಶ್ಚಿಮ ಬಂಗಾಳದ ಮುರ್ಷಿದಾಬಾದಿನ ಶಂಕರಪಾದ ಗ್ರಾಮದ ಒಂಬತ್ತು…

2 hours ago

ಮಾರ್ಚ್‌ಗೆ ಟ್ರಾಮಾ ಸೆಂಟರ್‌ ಕಾರ್ಯಾರಂಭ

ನವೀನ್ ಡಿಸೋಜ ೪೩ ಕೋಟಿ ರೂ. ವೆಚ್ಚದ ಕಾಮಗಾರಿ; ಅಂತಿಮ ಹಂತದಲ್ಲಿ ಕೆಲಸ ಮಡಿಕೇರಿ: ಮಾರ್ಚ್ ವೇಳೆಗೆ ಮಡಿಕೇರಿಯ ವೈದ್ಯಕೀಯ…

3 hours ago

ನಾಳೆ ಹುಲಿಗಿನಮುರಡಿ ವೆಂಕಟರಮಣಸ್ವಾಮಿ ರಥೋತ್ಸವ

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಮಕರ ಸಂಕ್ರಾಂತಿಯಂದು ಹುಲಿಗಿನ ಮುರಡಿ ವೆಂಕಟರಮಣಸ್ವಾಮಿ ಬೆಟ್ಟದಲ್ಲಿ ನಡೆಯುವ ದೊಡ್ಡ ಜಾತ್ರೆಗೆ ಅಂತಿಮ ಹಂತದ ಸಿದ್ಧತೆಗಳು…

3 hours ago