ಮೈಸೂರು: ಸಂಚಾರ ನಿಯಮ ಉಲ್ಲಂಘಿಸಿ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡವರಿಗೆ ಸರ್ಕಾರ ಶೇ.50 ರಿಯಾಯಿತಿ ಘೋಷಿಸಿದ ಬೆನ್ನಲ್ಲೇ ದಂಡ ಸಂಗ್ರಹಕ್ಕೆ ಮುಂದಾಗಿರುವ ನಗರ ಪೊಲೀಸರು ಮೂರು ದಿನಗಳಲ್ಲಿ (ಭಾನುವಾರ ಸಂಜೆವರೆಗೆ) 20,00,000 ರೂ. ದಂಡದ ಮೊತ್ತ ಸಂಗ್ರಹಿಸಿದ್ದಾರೆ.
ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್ನಲ್ಲಿ ದಾಖಲಾಗಿರುವ ಪ್ರಕರಣಗಳಲ್ಲಿ ಫೆ.11ರ ಒಳಗಾಗಿ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ ದಂಡದ ಮೊತ್ತದಲ್ಲಿ ಶೇ.50 ರಿಯಾಯಿತಿ ನೀಡುವ ಮೂಲಕ ಮೈಸೂರು ನಗರ ಸಂಚಾರ ಪೊಲೀಸರಿಂದ ಸಂಚಾರ ಇ-ಚಲನ್ ಪಡೆದು ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿರುವ ವಾಹನ ಸವಾರರು ಈ ಸದಾವಕಾಶವನ್ನು ಬಳಸಿಕೊಂಡು ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳುವಂತೆ ನಗರ ಪೊಲೀಸರು ತಿಳಿಸಿದ ಬೆನ್ನಲ್ಲೇ ಪ್ರಕರಣ ಬಾಕಿ ಇರುವ ಪ್ರಕರಣಗಳ ದಂಡ ಶುಲ್ಕವನ್ನು ಪಾವತಿಸಲು ಮುಂದಾಗಿದ್ದಾರೆ.
ಈ ಹಿನ್ನೆಲೆಯಲ್ಲಿ ಶುಕ್ರವಾರ 1734 ಪ್ರಕರಣಗಳಿಗೆ ಸಂಬಂಧಪಟ್ಟಂತೆ 3,67,150 ರೂ. ದಂಡ ಸಂಗ್ರಹವಾದರೆ ಶನಿವಾರ 6652 ಪ್ರಕರಣಗಳಿಗೆ ಸಂಬಂಧಪಟ್ಟಂತೆ 13,50,550 ರೂ.ಸಂಗ್ರಹವಾಗಿದೆ.
ಈ ಹಿನ್ನೆಲೆಯಲ್ಲಿ ವಾಹನ ಸವಾರರು ನಗರದ ಸಂಚಾರ ಠಾಣೆಗಳಲ್ಲಿ, ಪೊಲೀಸ್ ಆಯುಕ್ತರ ಕಚೇರಿಯ ಟ್ರಾಫಿಕ್ ಮ್ಯಾನೇಜ್ಮೆಂಟ್ ಸೆಂಟರ್ನಲ್ಲಿ ವಾಹನ ಪರಿಶೀಲನೆ ಮಾಡುವ ಟ್ರಾಫಿಕ್ ಪೊಲೀಸ್ ಅಧಿಕಾರಿಗಳ ಬಳಿ, ಕರ್ನಾಟಕ ಒನ್ ಮೊಬೈಲ್ ಅಪ್ಲಿಕೇಷನ್ ಮೂಲಕ ದಂಡದ ಹಣವನ್ನು ಪಾವತಿ ಮಾಡುತ್ತಿದ್ದಾರೆ. ದಂಡ ಪಾವತಿಸಲು ಕರ್ನಾಟಕ ಒನ್ ಮೊಬೈಲ್ ಅಪ್ಲಿಕೇಷನ್ ಹೆಚ್ಚು ಬಳಸುತ್ತಿರುವ ಹಿನ್ನೆಲೆಯಲ್ಲಿ ಆಗಾಗ ಇದರ ಕಾರ್ಯನಿರ್ವಹಣೆ ತಡವಾಗುತ್ತಿದೆ ಎಂಬ ಅಭಿಪ್ರಾಯಗಳು ದಂಡ ಪಾವತಿಸುವವರಿಂದ ಕೇಳಿ ಬಂದಿದೆ.
ಬಹುತೇಕರು ತಮ್ಮ ಹತ್ತಿರದ ಸಂಚಾರ ಠಾಣೆಗಳಿಗೆ ತೆರಳಿ ದಂಡ ಪಾವತಿಸುತ್ತಿದ್ದಾರೆ. ಉತ್ತಮ ಸ್ಪಂದನೆ ಬರುತ್ತಿದೆ. ಇಂದು ತಮಿಳುನಾಡಿನ ರಾಜ್ಯಪಾಲರು ಬಂದ ಹಿನ್ನೆಲೆಯಲ್ಲಿ ಎಲ್ಲ ಸಿಬ್ಬಂದಿ ಆ ಕರ್ತವ್ಯದಲ್ಲಿ ಇದ್ದರು. ಭಾನುವಾರದಿಂದ ಇನ್ನೂ ಹೆಚ್ಚಿನ ಸವಾರರು ದಂಡ ಪಾವತಿಸುವ ನಿರೀಕ್ಷೆ ಇದೆ. ಬೆಳಿಗ್ಗೆ 8 ರಿಂದ ರಾತ್ರಿ 11 ಗಂಟೆಯವರೆಗೂ ದಂಡ ಪಾವತಿ ಮಾಡಲು ಅವಕಾಶವಿದೆ.
– ಪರುಶುರಾಮಪ್ಪ, ಎಸಿಪಿ, ಸಂಚಾರ ಉಪವಿಭಾಗ
ಫೆ. 03 1,734 3,67,150 ರೂ
ಫೆ. 04 21,842 46,56,800 ರೂ
ಫೆ. 05 14,933 30,58,950 ರೂ ( ರಾತ್ರಿ.10ರವರೆಗೆ)
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಹದೇಶ್ವರಬೆಟ್ಟ ರಸ್ತೆಯ ತಾಳುಬೆಟ್ಟ–ಕೋಣನಕೆರೆ ಮಾರ್ಗದಲ್ಲಿ ಮಂಗಳವಾರ ಬೆಳ್ಳಂಬೆಳಿಗ್ಗೆ ಆಟೋ…
ಬೆಂಗಳೂರು: ನೀಟ್ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ…
ಪಾಕಿಸ್ತಾನ: ಇಲ್ಲಿನ ವಾಯುವ್ಯ ಭಾಗದ ಮಾರುಕಟ್ಟೆಯೊಂದರಲ್ಲಿ ರಿಕ್ಷಾಗೆ ಅಳವಡಿಸಿದ್ದ ಬಾಂಬ್ ಸ್ಫೋಟಗೊಂಡ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ…
ಮೈಸೂರು: ನಾಳೆಯಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಸಂಜೆ 5.30ಕ್ಕೆ ವಿಶೇಷ…
ಬೆಂಗಳೂರು: ಚಾಮರಾಜನಗರದ ನಾಗಮಲೆ ಅರಣ್ಯದಲ್ಲಿ ಚಿರತೆ ದಾಳಿಯಿಂದ 10 ವರ್ಷದ ಬಾಲಕ ಮೃತಪಟ್ಟಿರುವ ಹಿನ್ನೆಲೆಯಲ್ಲಿ ವನ್ಯಜೀವಿ ಸಂಚಾರ ಇರುವ ಎಲ್ಲ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ…