ಜಿಲ್ಲೆಗಳು

ದಂಡ ಪಾವತಿಸಲು ಮುಗಿಬಿದ್ದ ಸವಾರರು

ಸಂಚಾರ ನಿಯಮ ಉಲ್ಲಂಘನೆ: 3 ದಿನಗಳಲ್ಲಿ 80 ಲಕ್ಷರೂ. ದಂಡ ಸಂಗ್ರಹ
ಬಿ.ಎನ್.ಧನಂಜಯಗೌಡ

ಮೈಸೂರು: ಸಂಚಾರ ನಿಯಮ ಉಲ್ಲಂಘಿಸಿ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡವರಿಗೆ ಸರ್ಕಾರ ಶೇ.50 ರಿಯಾಯಿತಿ ಘೋಷಿಸಿದ ಬೆನ್ನಲ್ಲೇ ದಂಡ ಸಂಗ್ರಹಕ್ಕೆ ಮುಂದಾಗಿರುವ ನಗರ ಪೊಲೀಸರು ಮೂರು ದಿನಗಳಲ್ಲಿ (ಭಾನುವಾರ ಸಂಜೆವರೆಗೆ)  20,00,000 ರೂ. ದಂಡದ ಮೊತ್ತ ಸಂಗ್ರಹಿಸಿದ್ದಾರೆ.

ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಪ್ರಕರಣಗಳಲ್ಲಿ ಫೆ.11ರ ಒಳಗಾಗಿ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ ದಂಡದ ಮೊತ್ತದಲ್ಲಿ ಶೇ.50 ರಿಯಾಯಿತಿ ನೀಡುವ ಮೂಲಕ ಮೈಸೂರು ನಗರ ಸಂಚಾರ ಪೊಲೀಸರಿಂದ ಸಂಚಾರ ಇ-ಚಲನ್ ಪಡೆದು ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿರುವ ವಾಹನ ಸವಾರರು ಈ ಸದಾವಕಾಶವನ್ನು ಬಳಸಿಕೊಂಡು ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳುವಂತೆ ನಗರ ಪೊಲೀಸರು ತಿಳಿಸಿದ ಬೆನ್ನಲ್ಲೇ ಪ್ರಕರಣ ಬಾಕಿ ಇರುವ ಪ್ರಕರಣಗಳ ದಂಡ ಶುಲ್ಕವನ್ನು ಪಾವತಿಸಲು ಮುಂದಾಗಿದ್ದಾರೆ.

ಈ ಹಿನ್ನೆಲೆಯಲ್ಲಿ ಶುಕ್ರವಾರ 1734 ಪ್ರಕರಣಗಳಿಗೆ ಸಂಬಂಧಪಟ್ಟಂತೆ 3,67,150 ರೂ. ದಂಡ ಸಂಗ್ರಹವಾದರೆ ಶನಿವಾರ 6652  ಪ್ರಕರಣಗಳಿಗೆ ಸಂಬಂಧಪಟ್ಟಂತೆ 13,50,550  ರೂ.ಸಂಗ್ರಹವಾಗಿದೆ.

ಈ ಹಿನ್ನೆಲೆಯಲ್ಲಿ ವಾಹನ ಸವಾರರು ನಗರದ ಸಂಚಾರ ಠಾಣೆಗಳಲ್ಲಿ, ಪೊಲೀಸ್ ಆಯುಕ್ತರ ಕಚೇರಿಯ ಟ್ರಾಫಿಕ್ ಮ್ಯಾನೇಜ್‌ಮೆಂಟ್ ಸೆಂಟರ್‌ನಲ್ಲಿ ವಾಹನ ಪರಿಶೀಲನೆ ಮಾಡುವ ಟ್ರಾಫಿಕ್ ಪೊಲೀಸ್ ಅಧಿಕಾರಿಗಳ ಬಳಿ, ಕರ್ನಾಟಕ ಒನ್ ಮೊಬೈಲ್ ಅಪ್ಲಿಕೇಷನ್ ಮೂಲಕ ದಂಡದ ಹಣವನ್ನು ಪಾವತಿ ಮಾಡುತ್ತಿದ್ದಾರೆ. ದಂಡ ಪಾವತಿಸಲು ಕರ್ನಾಟಕ ಒನ್ ಮೊಬೈಲ್ ಅಪ್ಲಿಕೇಷನ್ ಹೆಚ್ಚು ಬಳಸುತ್ತಿರುವ ಹಿನ್ನೆಲೆಯಲ್ಲಿ ಆಗಾಗ ಇದರ ಕಾರ್ಯನಿರ್ವಹಣೆ ತಡವಾಗುತ್ತಿದೆ ಎಂಬ ಅಭಿಪ್ರಾಯಗಳು ದಂಡ ಪಾವತಿಸುವವರಿಂದ ಕೇಳಿ ಬಂದಿದೆ.


ಬಹುತೇಕರು ತಮ್ಮ ಹತ್ತಿರದ ಸಂಚಾರ ಠಾಣೆಗಳಿಗೆ ತೆರಳಿ ದಂಡ ಪಾವತಿಸುತ್ತಿದ್ದಾರೆ. ಉತ್ತಮ ಸ್ಪಂದನೆ ಬರುತ್ತಿದೆ. ಇಂದು ತಮಿಳುನಾಡಿನ ರಾಜ್ಯಪಾಲರು ಬಂದ ಹಿನ್ನೆಲೆಯಲ್ಲಿ ಎಲ್ಲ ಸಿಬ್ಬಂದಿ ಆ ಕರ್ತವ್ಯದಲ್ಲಿ ಇದ್ದರು. ಭಾನುವಾರದಿಂದ ಇನ್ನೂ ಹೆಚ್ಚಿನ ಸವಾರರು ದಂಡ ಪಾವತಿಸುವ ನಿರೀಕ್ಷೆ ಇದೆ. ಬೆಳಿಗ್ಗೆ 8 ರಿಂದ ರಾತ್ರಿ 11 ಗಂಟೆಯವರೆಗೂ ದಂಡ ಪಾವತಿ ಮಾಡಲು ಅವಕಾಶವಿದೆ.

– ಪರುಶುರಾಮಪ್ಪ, ಎಸಿಪಿ, ಸಂಚಾರ ಉಪವಿಭಾಗ


ದಿನಾಂಕ                ಪ್ರಕರಣ                              ದಂಡ ಸಂಗ್ರಹ

ಫೆ. 03                       1,734                                       3,67,150 ರೂ

ಫೆ. 04                       21,842                                    46,56,800 ರೂ 

ಫೆ. 05                       14,933                                   30,58,950 ರೂ ( ರಾತ್ರಿ.10ರವರೆಗೆ)           

 

andolanait

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

9 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

9 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

10 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

10 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

15 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

15 hours ago